ಬ್ರೇಕಿಂಗ್ ನ್ಯೂಸ್
04-06-25 06:21 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 4 : ಐಪಿಎಲ್ ಟ್ರೋಫಿ ಗೆದ್ದ ಆರ್ ಸಿಬಿ ಆಟಗಾರರ ಜೊತೆಗೆ ಅಭಿಮಾನಿಗಳ ಮೆರವಣಿಗೆ ಮಾಡಲು ಹೋಗಿ ದುರಂತವೇ ನಡೆದುಹೋಗಿದೆ. ಚಿನ್ನಸ್ವಾಮಿ ಸ್ಟೇಡಿಯಂ ಎದುರಲ್ಲಿ ಸಂಜೆ ನಾಲ್ಕು ಗಂಟೆ ಸುಮಾರಿಗೆ ಮೆರವಣಿಗೆ ಆಗುತ್ತಿದ್ದಾಗಲೇ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ದಾಗಲೇ ಕಾಲ್ತುಳಿತ ಸಂಭವಿಸಿದ್ದು, ಹತ್ತಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ
ವಿಧಾನಸೌಧ ಎದುರಲ್ಲಿ ಆರ್ ಸಿಬಿ ಆಟಗಾರರನ್ನು ಸನ್ಮಾನಿಸಿ ಬೀದಿಯಲ್ಲಿ ಮೆರವಣಿಗೆ ನಡೆಸಲು ಸರಕಾರವೇ ಆಯೋಜನೆ ಮಾಡಿಕೊಂಡಿತ್ತು. ಚಿನ್ನಸ್ವಾಮಿ ಸ್ಟೇಡಿಯಂ ಪಕ್ಕದಲ್ಲಿ ಸಾವಿರಾರು ಜನರು ಸೇರಿದ್ದು, ಮೆರವಣಿಗೆ ಆಗುತ್ತಿದ್ದಾಗಲೇ ಯುವಕರು ಜನರ ಮೈಮೇಲೆ ಬಿದ್ದಿದ್ದಾರೆ. ಮೆಡಿಕಲ್ ಕಾಲೇಜು ಸೇರಿದಂತೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಸೇರಿದ್ದರು. ಈ ವೇಳೆ, ಒಬ್ಬರ ಮೇಲೊಬ್ಬರು ಹತ್ತಿ ಘಟನೆ ಉಂಟಾಗಿದೆ ಎನ್ನಲಾಗುತ್ತಿದ್ದು, ಪೊಲೀಸರನ್ನು ಲೆಕ್ಕಿಸದೆ ಕಾಲ್ತುಳಿತ ಉಂಟಾಗಿದೆ. ಗೇಟ್ ಅನ್ನು ಒಂದೇ ಸಮಯದಲ್ಲಿ ಓಪನ್ ಮಾಡಿದ್ದರಿಂದ ಜನರು ಎಲ್ಲ ಕಡೆಯಿಂದ ತಳ್ಳಿಕೊಂಡು ಬಂದಿದ್ದು, ನೂಕುನುಗ್ಗಲು ಉಂಟಾಗಿದ್ದರಿಂದ ದುರಂತವೇ ನಡೆದುಹೋಗಿದೆ.







ಮೃತದರಲ್ಲಿ ಅಂಬೇಡ್ಕರ್ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯೂ ಸೇರಿದ್ದಾಳೆ. 50ಕ್ಕೂ ಹೆಚ್ಚು ಮಂದಿಯನ್ನು ಶಿವಾಜಿನಗರದ ಬೌರಿಂಗ್ ಆಸ್ಪತ್ರೆ, ಮಲ್ಯ ಆಸ್ಪತ್ರೆಗಳಲ್ಲಿ ದಾಖಲು ಮಾಡಲಾಗಿದೆ. ಸತ್ತವರಲ್ಲಿ ಮಕ್ಕಳೂ ಇದ್ದಾರೆ, ಸದ್ಯಕ್ಕೆ ಮೃತರ ಬಗ್ಗೆ ಮಾಹಿತಿ ತಿಳಿದ ಹೆತ್ತವರು ಆಸ್ಪತ್ರೆಯತ್ತ ಧಾವಿಸಿದ್ದಾರೆ. ನಗರದ ವಿವಿಧ ಕಡೆಗಳಿಂದ ಅಭಿಮಾನಿಗಳು ಬಂದಿದ್ದರಿಂದ ಪೊಲೀಸರಿಗೆ ನಿರ್ವಹಣೆ ಮಾಡಲಾಗದೆ ದುರಂತ ಎದುರಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿಯೇ ಆರ್ ಸಿಬಿ ಆಟಗಾರರಿಗೆ ಸನ್ಮಾನ, ಮೆರವಣಿಗೆ ಆಯೋಜಿಸಲಾಗಿತ್ತು. ಇಷ್ಟೊಂದು ಜನ ಸೇರುವುದನ್ನು ನಿರೀಕ್ಷಿಸಿರದ ಪೊಲೀಸರು ಮತ್ತು ರಾಜ್ಯ ಸರಕಾರದ ಎಡವಟ್ಟಿನಿಂದಲೇ ಘಟನೆ ಆಗಿಹೋಗಿದೆ. ಆರ್ ಸಿಬಿ ಸಂಭ್ರಮ ಹೆಸರಲ್ಲಿ ಸಾವಿರಾರು ಜನರು ಇಡೀ ಕುಟುಂಬವೇ ಬಂದು ನೆರೆದಿತ್ತು. ಮಕ್ಕಳನ್ನು ಕರೆದುಕೊಂಡು ಬಂದಿದ್ದು ಏಕಾಏಕಿ ನೂಕುನುಗ್ಗಲು ಉಂಟಾಗಿ ದುರಂತವೇ ನಡೆದುಹೋಗಿದೆ.
RCB victory parade in Bangalore, At least 10 dead in stampede, death toll expected to go up. 10 persons have died while 24 people, including a six-year-old girl, are believed to be injured as thousands of fans gathered outside the M. Chinnaswamy Stadium in Bengaluru to celebrate the victory of Royal Challengers Bengaluru in the IPL 2025 championship, on June 4. The death toll is expected to go up.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm