ಬ್ರೇಕಿಂಗ್ ನ್ಯೂಸ್
05-06-25 04:31 pm Bengaluru Staff ಕರ್ನಾಟಕ
ಬೆಂಗಳೂರು, ಜೂನ್ 5: ಚಿನ್ನಸ್ವಾಮಿ ಕಾಲ್ತುಳಿತ ದುರಂತ ರಾಜಕೀಯ ಸ್ವರೂಪ ಪಡೆದಿದ್ದು, ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಇದೇ ವೇಳೆ, ಆರ್ ಸಿಬಿ ತಂಡದ ಸನ್ಮಾನ ಕಾರ್ಯಕ್ರಮದಲ್ಲಿ ಮುಂಚೂಣಿಯಲ್ಲಿದ್ದ ಡಿಸಿಎಂ ಡಿಕೆ ಶಿವಕುಮಾರ್, ದುರಂತದ ಹೊಣೆ ಹೊರಲು ಸರ್ಕಾರ ಸಿದ್ಧ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, "ಇದು ರಾಜಕೀಯ ಮಾಡುವ ಸಮಯವಲ್ಲ. ದುರಂತದಲ್ಲಿ ಮೃತಪಟ್ಟ ಕುಟುಂಬಸ್ಥರ ಜೊತೆಗೆ ಗಟ್ಟಿಯಾಗಿ ನಿಲ್ಲಬೇಕಾಗಿದೆ ಎಂದರು. ಬಿಜೆಪಿ ಅವಧಿಯಲ್ಲಿ ಏನೆಲ್ಲಾ ಆಯ್ತು ಎಂದು ಚರ್ಚೆ ಮಾಡೋಕೆ ಹೋಗಲ್ಲ. ಬಿಜೆಪಿ ಹಾಗೂ ಜೆಡಿಎಸ್ ಯಾವತ್ತೂ ಹೆಣದ ಮೇಲೆ ರಾಜಕೀಯ ನಡೆಸಿದೆ. ನಾನು ಹಾಗೆ ಮಾಡುವುದಿಲ್ಲ. ಇದು ನಮ್ಮ ರಾಜ್ಯ ಮತ್ತು ಬೆಂಗಳೂರು ನಗರದ ವರ್ಚಸ್ಸಿನ ಪ್ರಶ್ನೆ. ನಾವು ಇದಕ್ಕೆ ಹೊಣೆ ಹೊತ್ತುಕೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.
ನಾವು ಹೀಗಾಗಲಿದೆ ಎಂಬ ನಿರೀಕ್ಷೆ ಮಾಡಿರಲಿಲ್ಲ. ಜನರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಮೆಟ್ರೋ ಸಂಚಾರ ನಿಲ್ಲಿಸಿದ್ದೆವು. ಆದರೂ ಅಪಾರ ಜನಸ್ತೋಮವನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ. ಸರ್ಕಾರ ಈ ಕಾಲ್ತುಳಿತದ ದುರಂತ ಹೊರಲು ಸಿದ್ಧ ಎಂದು ಡಿಕೆ ಶಿವಕುಮಾರ್ ಹೇಳಿದರು. ಇದು ನಮ್ಮ ಕುಟುಂಬಕ್ಕೆ ಆದ ನೋವು. ಈ ನೋವನ್ನು ತಡೆದುಕೊಳ್ಳಲು ಯಾರಿಂದಲು ಸಾಧ್ಯವಿಲ್ಲ. ನಾನು ಯಾವುದೇ ಕಾರಣಕ್ಕೂ ಈ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ. ಮಕ್ಕಳ ಸ್ಥಿತಿ ನೋಡಿ ನನಗೆ ಬೇಸರ ಆಗಿದೆ ಎಂದು ಭಾವುಕರಾದರು.
ಪೊಲೀಸ್ ಕಮಿಷನರ್ ನನ್ನ ಬಳಿ ಬಂದು ಚಿನ್ನಸ್ವಾಮಿ ಬಳಿ ಕಾಲ್ತುಳಿತ ಸಂಭವಿಸಿದ್ದು ಕಾರ್ಯಕ್ರಮ ಬೇಗ ಮುಗಿಸುವಂತೆ ಹೇಳಿದರು. ನಾನು ಕೂಡಲೇ ಕೆಸಿಎ ಆಡಳಿತ ಮಂಡಳಿಗೆ ಸೂಚನೆ ನೀಡಿ, ಕಾರ್ಯಕ್ರಮ ನಿಲ್ಲಿಸಿದೆ. ಅವರೂ ತಡ ಮಾಡದೇ ವಿಜಯೋತ್ಸವ ಕಾರ್ಯಕ್ರಮ ನಿಲ್ಲಿಸಿದರು. ಕಾಲ್ತುಳಿತ ಬಗ್ಗೆ ಪೊಲೀಸ್ ಕಮಿಷನರ್ ಮಾಹಿತಿ ನೀಡುತ್ತಿದ್ದಂತೆ, ಕ್ರೀಡಾಂಗಣದಲ್ಲಿ ಯಾರಿಗೂ ಮಾತನಾಡಲು ಅವಕಾಶ ಕೊಡಲಿಲ್ಲ. ಇಲ್ಲಿ ಯಾವುದೇ ಆರೋಪ, ಪ್ರತ್ಯಾರೋಪ ಮಾಡುವುದು ಬೇಡ. ಇದಕ್ಕೆಲ್ಲ ಸಂದರ್ಭ ಇದಲ್ಲ ಎಂದರು.
Bengaluru's Prestige at Stake, We Took Responsibility, Stopped Event as Commissioner Advised, DCM DK Shivakumar
25-08-25 10:55 pm
Bangalore Correspondent
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
25-08-25 10:59 pm
Mangalore Correspondent
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
Dharmasthala, Mask Man, Fake Skull, SIT: ಎಸ್ಐ...
25-08-25 12:24 pm
25-08-25 08:29 pm
HK News Desk
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am