ಬ್ರೇಕಿಂಗ್ ನ್ಯೂಸ್
06-06-25 09:03 pm Bangalore Correspondent ಕರ್ನಾಟಕ
ಬೆಂಗಳೂರು, ಜೂ.6 : ಕಾಲ್ತುಳಿತ ಪ್ರಕರಣದಲ್ಲಿ ನಗರ ಪೊಲೀಸ್ ಕಮಿಷನರ್ ದಯಾನಂದ್ ಅವರನ್ನ ಅಮಾನತುಗೊಳಿಸಿದ ರಾಜ್ಯ ಸರ್ಕಾರದ ಆದೇಶದ ವಿರುದ್ಧ ರಾಜ್ಯದೆಲ್ಲೆಡೆ ಆಕ್ರೋಶ ಕೇಳಿಬರುತ್ತಿದ್ದರೆ, ಮಡಿವಾಳ ಠಾಣೆಯ ಹೆಡ್ ಕಾನ್ಸ್ಟೇಬಲ್ ಒಬ್ಬರು ರಾಜಭವನಕ್ಕೆ ತೆರಳಿ ಪ್ರತಿಭಟನೆ ನಡೆಸಿ ರಾಜ್ಯದ ಗಮನ ಸೆಳೆದಿದ್ದಾರೆ.
ಪೊಲೀಸ್ ಆಯುಕ್ತ ದಯಾನಂದ್ ಅವರಿಗೆ ಸರ್ಕಾರ ವಿನಾಕಾರಣ ಅಮಾನತು ಶಿಕ್ಷೆ ನೀಡಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಅಭಿಯಾನ ಶುರುವಾಗಿದೆ. ಇವೆಲ್ಲದರ ಮಧ್ಯೆ ಪೊಲೀಸ್ ಇಲಾಖೆಯದ್ದೇ ಸಿಬ್ಬಂದಿ ನರಸಿಂಹರಾಜು, ಪೊಲೀಸ್ ಅಧಿಕಾರಿಗಳ ವಿರುದ್ಧ ಸರ್ಕಾರದ ಕ್ರಮ ಕೈಗೊಂಡಿದ್ದನ್ನು ವಿರೋಧಿಸಿ ಪ್ರತಿಭಟನೆ ನಡೆಸಿ ಪೊಲೀಸ್ ವಶವಾಗಿದ್ದಾರೆ.

ಮಡಿವಾಳ ಠಾಣೆಯ ಹೆಡ್ ಕಾನ್ಸ್ಟೇಬಲ್ ನರಸಿಂಹರಾಜು ಸರ್ಕಾರದ ನಡೆಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲು ತೆರಳಿದ್ದರು. ಈ ವೇಳೆ ಕೈಯಲ್ಲಿ ಅಂಬೇಡ್ಕರ್ ಫೋಟೋ ಹಿಡಿದು, ಕಪ್ಪುಪಟ್ಟಿ ಧರಿಸಿ ರಾಜಭವನದ ಎದುರು ಪ್ರತಿಭಟನೆ ನಡೆಸಿದ್ದಾರೆ. ಪೊಲೀಸ್ ಅಧಿಕಾರಿಗಳ ಅಮಾನತು ಆದೇಶ ರದ್ದು ಪಡಿಸಬೇಕು. ಆಮೂಲಕ ಪೊಲೀಸ್ ಇಲಾಖೆಗೆ ನೈತಿಕ ಸ್ಥೈರ್ಯ ತುಂಬಬೇಕು ಎಂದು ಆಗ್ರಹ ಮಾಡಿದ್ದಾರೆ. ಅವರನ್ನು ಕೂಡಲೇ ವಿಧಾನಸೌಧ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬುಧವಾರ ಆರ್ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತಕ್ಕೆ 11 ಅಭಿಮಾನಿಗಳು ಸಾವನ್ನಪ್ಪಿದ್ದರು. ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ವಿಧಾನಸೌಧ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಾಗರೋಪಾದಿಯಲ್ಲಿ ಜನ ನೆರೆದಿದ್ದು ನೂಕುನುಗ್ಗಲು ಉಂಟಾಗಿ ದುರಂತ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ಪೊಲೀಸ್ ಕಮಿಷನರ್ ಸೇರಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ಸಿಎಂ ಸಿದ್ದರಾಮಯ್ಯ ಅವರು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದರು.
Police Constable Protests Against Suspension of Commissioner Dayanand; Wears Black Band, Demonstrates Outside Raj Bhavan.
18-04-26 02:43 pm
HK News Staffer
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
18-04-26 03:50 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm