ಬ್ರೇಕಿಂಗ್ ನ್ಯೂಸ್
07-06-25 06:57 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 7 : ಆರ್ ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಗೃಹ ಸಚಿವ ಜಿ. ಪರಮೇಶ್ವರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿರುವುದಾಗಿ ಕರ್ನಾಟಕ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ತಿಳಿಸಿದ್ದಾರೆ.
"ಕಾಲ್ತುಳಿತ ಪ್ರಕರಣದಲ್ಲಿ ಮೊದಲ ಆರೋಪಿ ಸಿದ್ದರಾಮಯ್ಯ ಮತ್ತು ಎರಡನೇ ಆರೋಪಿ ಡಿ.ಕೆ. ಶಿವಕುಮಾರ್ ಆಗಿದ್ದು, ಇಬ್ಬರೂ ಆರ್ ಸಿಬಿ ಗೆಲುವಿನಿಂದ ರಾಜಕೀಯ ಲಾಭ ಪಡೆಯುವ ಉದ್ದೇಶವನ್ನು ಹೊಂದಿದ್ದರು. ಇದಕ್ಕಾಗಿ ಅಧಿಕಾರ ದುರುಪಯೋಗ ಮಾಡಿದ್ದು, ಅವರಿಂದಲೇ ಸಾವುಗಳು ಸಂಭವಿಸಿವೆ. ಗೃಹ ಸಚಿವ ಪರಮೇಶ್ವರ ಅವರನ್ನು ಮೂರನೇ ಆರೋಪಿ ಎಂದು ಉಲ್ಲೇಖಿಸಿದ್ದೇನೆ. ನನ್ನ ಪ್ರಕಾರ, ಅವರಿಗೆ ಯಾವುದೇ ಉದ್ದೇಶವಿಲ್ಲ. ಆದರೆ ಅವರು ನಿರ್ಲಕ್ಷ್ಯ ವಹಿಸಿದ್ದರು ಮತ್ತು ಗೃಹ ಸಚಿವರಾಗಿ ವಿಫಲರಾಗಿದ್ದಾರೆ ಎಂದು ರಾಜೀವ್ ಆರೋಪಿಸಿದ್ದಾರೆ.
ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ್ದು, ದುರಂತಕ್ಕೆ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನೈತಿಕ ಹೊಣೆ ಹೊರ ಬೇಕಾಗುತ್ತದೆ ಎಂದು ಹೇಳಿದರು. ದೂರಿನ ಪ್ರತಿಯನ್ನು ಎಸಿಪಿಗೆ ನೀಡಿದ್ದೇನೆ. ಅದನ್ನು ಎಫ್ಐಆರ್ ಆಗಿ ಪರಿವರ್ತಿಸಬೇಕು. ಇಲ್ಲದಿದ್ದರೆ, ನಾನು ನ್ಯಾಯಾಲಯಕ್ಕೆ ಹೋಗಿ ಪಿಸಿಆರ್ ದಾಖಲಿಸುತ್ತೇನೆ. ಪಾರದರ್ಶಕ ಕಾನೂನು ಪ್ರಕ್ರಿಯೆಗೆ ಒತ್ತಾಯಿಸುತ್ತೇನೆ ಎಂದವರು ತಿಳಿಸಿದ್ದಾರೆ.
ಆರ್ಸಿಬಿಯ ಐಪಿಎಲ್ ಗೆಲುವಿನಿಂದ ರಾಜಕೀಯ ಲಾಭ ಪಡೆಯುವ ಉದ್ದೇಶ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರಿಗಿತ್ತು. ಸರ್ಕಾರಕ್ಕೂ ಆರ್ಸಿಬಿಗೂ ಏನು ಸಂಬಂಧ? ಆರ್ಸಿಬಿಯ ವಿಜಯೋತ್ಸವಕ್ಕೆ ಸಾರ್ವಜನಿಕ ಹಣವನ್ನು ಏಕೆ ಖರ್ಚು ಮಾಡಲಾಯಿತು?" ಎಂದು ಪ್ರಶ್ನಿಸಿದರು.
BJP Files Police Complaint Against CM Siddaramaiah, DCM Shivakumar, and Home Minister Over RCB Victory Stampede Incident.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 02:02 pm
HK News Staffer
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm