ಬ್ರೇಕಿಂಗ್ ನ್ಯೂಸ್
09-06-25 04:41 pm HK News Desk ಕರ್ನಾಟಕ
ಚಿತ್ರದುರ್ಗ, ಜೂ 09: ಎರಡನೇ ಮದುವೆಗೆ ಹಸೆಮಣೆಗೆ ಏರಲು ಸಿದ್ಧವಾಗಿದ್ದ ಪತಿಗೆ ಮೊದಲ ಪತ್ನಿ ಚಪ್ಪಲಿ ಏಟು ಕೊಟ್ಟ ಘಟನೆ ನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಅರಸೀಕೆರೆಯ ರೂಪನಗರ ಗ್ರಾಮದ ಕಾರ್ತಿಕ್ ನಾಯ್ಕ ಎರಡನೇ ಮದುವೆಗೆ ಮುಂದಾಗಿದ್ದ ಆರೋಪಿ.
ಆರೋಪಿ ಕಾರ್ತಿಕ್ ನಾಯ್ಕ ಎರಡನೇ ಮದುವೆ ಮಾಡಿಕೊಳ್ಳಲು ಮುಂದಾಗಿದ್ದ ಯುವತಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಚಿತ್ರದುರ್ಗ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಕಾರ್ತಿಕ್ ನಾಯ್ಕ್, ಪೋಷಕರಾದ ಮಹೇಶ್ ನಾಯ್ಕ್, ವೈಶಾಲಿ ಹಾಗೂ ಸಹೋದರಿ ಮೇಘಶ್ರೀ ಅವರನ್ನು ಬಂಧಿಸಿ, ತನಿಖೆ ನಡೆಸುತ್ತಿದ್ದಾರೆ.



ತನ್ನನ್ನು ಕಾರ್ತಿಕ್ ಮೋಹನ್ ನಾಯ್ಕ್ ಎಂದು ಹೇಳಿಕೊಂಡಿದ್ದ ಆರೋಪಿ, ಪೋಷಕರನ್ನು ಮೋಹನ್ ಮಹೇಶ್ ನಾಯ್ಕ್ ಹಾಗೂ ವಿಶಾಲಾಕ್ಷಿ ಎಂದು ಪರಿಚಯಿಸಿದ್ದ. ಅಲ್ಲದೇ, ಬ್ರೋಕರ್ ಕೂಡ ವಧುವಿನ ಕಡೆಯವರಿಂದ ಎಲ್ಲ ವಿಚಾರಗಳನ್ನೂ ಮುಚ್ಚಿಟ್ಟು, ಹುಡುಗ ತುಂಬಾ ಒಳ್ಳೆಯವನು, ಯಾವುದೇ ದುಶ್ಚಟವಿಲ್ಲ ಎಂದು ನಂಬಿಸಿದ್ದ. ಕಾರ್ತಿಕ್ ಕೂಡ ಯುವತಿಯ ಮನೆಯವರೊಂದಿಗೆ ನಂಬಿಕೆ ಬರುವಂತೆ ಮಾತನಾಡಿಕೊಂಡಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಅಲ್ಲದೇ, ಮದುವೆಗೂ ಮುನ್ನವೇ ಕಾರ್ತಿಕ್ ಕಡೆಯವರು ಮದುವೆಗೆ ಹಣದ ಅಗತ್ಯತೆ ಇದೆ. ಬಳಿಕ ಮರಳಿಸುತ್ತೇವೆ ಎಂದು ಹೇಳಿ ಯುವತಿ ಕಡೆಯವರಿಂದ ಐದು ಲಕ್ಷ ರೂ. ಸಾಲ ಪಡೆದಿದ್ದರು. ಜೊತೆಗೆ, ಕಲ್ಯಾಣ ಮಂಟಪದ ಖರ್ಚು ಸೇರಿದಂತೆ ಮದುವೆಗೆ ಲಕ್ಷಾಂತರ ರೂ. ವ್ಯಯಿಸಿ ಸಿದ್ಧತೆ ಮಾಡಿಕೊಳ್ಳಲಾಗಿತ್ತು.
ಮದುವೆ ಸಂದರ್ಭದಲ್ಲಿ ದಾವಣಗೆರೆಯೆ ನ್ಯಾಮತಿಯ ಮೊದಲ ಪತ್ನಿ ಏಕಾಏಕಿ ಮಧ್ಯೆ ಪ್ರವೇಶಿಸಿ ಹೇಳಿದ ಬಳಿಕವೇ ಕಾರ್ತಿಕ್ಗೆ ಈಗಾಗಲೇ 2021ರಲ್ಲೇ ವಿವಾಹವಾಗಿದೆ ಎಂಬ ವಿಚಾರ ಗೊತ್ತಾಯಿತು. ಅಲ್ಲದೇ, ಆತ ತನ್ನ ಹಾಗೂ ಮನೆಯವರ ಹೆಸರು ಬದಲಾಯಿಸಿ ಮೋಸ ಮಾಡಿರುವುದು ಸಹ ಮೊದಲ ಪತ್ನಿಯಿಂದ ತಿಳಿಯಿತು. ಮೊದಲೇ ಮದುವೆಯಾಗಿರುವ ವಿಚಾರವನ್ನು ಮರೆಮಾಚಿ, ನಮ್ಮಿಂದ 5 ಲಕ್ಷ ರೂ. ಪಡೆದಿರುವ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಯುವತಿಯ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.
Drama at Wedding Hall, First Wife Storms Venue, Thrashes Groom Attempting Second Marriage in Chitradurga
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm