ಬ್ರೇಕಿಂಗ್ ನ್ಯೂಸ್
10-06-25 06:49 pm HK News Desk ಕರ್ನಾಟಕ
ಕಾರವಾರ, ಜೂ.10 : ಒಳ್ಳು ಒನಕೆಯ ನುಂಗಿ, ಕಲ್ಲು ಗೂಟವ ನುಂಗಿ.. ಕೋಡಗನ ಕೋಳಿ ನುಂಗಿತ್ತಾ... ಅನ್ನುವ ತತ್ವಪದವನ್ನು ನೀವೆಲ್ಲ ಕೇಳಿರುತ್ತೀರಿ. ಅದೇ ರೀತಿ ಇಲ್ಲಿ ಕೋಡಗನ ಬದಲು ಹಾವು ವಿಚಿತ್ರವಾಗಿ ವರ್ತಿಸಿ, ಈ ಪದ್ಯ ನೆನಪಿಸಿದೆ. ಯಾಕಂದ್ರೆ, ಇಲ್ಲೊಂದು ನಾಗರಹಾವು ಹರಿತ ಚಾಕುವನ್ನು ನುಂಗಿ ಒದ್ದಾಡಿ ಸುದ್ದಿಯಾಗಿದೆ.
ಇಲಿ, ಕೋಳಿ, ಮೊಟ್ಟೆ, ಕಪ್ಪೆಯನ್ನು ಹಾವುಗಳು ನುಂಗುವುದನ್ನು ಕಂಡಿದ್ದೇವೆ, ಕೇಳಿದ್ದೇವೆ. ಆದರೆ ತನ್ನ ಆಹಾರ ಅನ್ಕೊಂಡು ನಾಗರ ಹಾವು ಚಾಕುವನ್ನೇ ನುಂಗಿದ್ದು ಆನಂತರ ವಿಲ ವಿಲ ಒದ್ದಾಡಿದ ಪ್ರಸಂಗ ಕುಮಟಾದಲ್ಲಿ ನಡೆದಿದೆ.


ಕುಮಟಾ ತಾಲೂಕಿನ ಹೆಗಡೆಯ ಗೋವಿಂದ ನಾಯ್ಕರ ಅಡುಗೆ ಮನೆಯಲ್ಲಿದ್ದ ಚಾಕು ಮನೆಯ ಹೊರಗಡೆ ಬಿದ್ದಿತ್ತು. ಆದರೆ ಅಲ್ಲಿ ಹಾವು ಓಡಾಡುತ್ತಿರುವುದನ್ನು ಕಂಡ ಮನೆಯವರು ಸ್ಥಳಕ್ಕೆ ಹೋಗಲು ಹೆದರಿದ್ದರು. ಕೆಲ ಹೊತ್ತಲ್ಲಿ ಅಲ್ಲಿದ್ದ ಚಾಕು ಕಣ್ಮರೆಯಾಗಿತ್ತು. ಹಾವು ಮಾತ್ರ ಏನೋ ತಿಂದು ಮಲಗಿರುವಂತೆ ಬಿದ್ದುಕೊಂಡಿತ್ತು. ಹಾವು ಅಲ್ಲಿಂದ ಕದಲದೇ ಇದ್ದುದರಿಂದ ಮತ್ತು ಚಾಕು ಕೂಡ ಇಲ್ಲದಿರುವುದನ್ನು ನೋಡಿ ಅನುಮಾನದಲ್ಲಿ ಉರಗ ತಜ್ಞ ಪವನ್ ನಾಯ್ಕ ಅವರನ್ನು ಕರೆಸಿದ್ದರು.
ಸ್ಥಳಕ್ಕೆ ಬಂದು ಪರಿಶೀಲಿಸಿದಾಗ, ಹಾವು ಚಾಕು ನುಂಗಿ ಒದ್ದಾಡುತ್ತಿರುವುದು ಖಚಿತವಾಗಿದೆ. ಚಾಕುವಿನ ತುದಿ ಗಂಟಲಿನಲ್ಲಿ ಸಿಲುಕಿದ್ದು, ಅದನ್ನು ಹೊರಹಾಕಲು ಹಾವು ಒಡ್ಡಾಡುತ್ತಿರುವುದು ಕಂಡುಬಂದಿದೆ. ಚಾಕುವನ್ನು ಹೊರತೆಗೆಯದಿದ್ದರೆ ಹಾವು ಸಾಯುತ್ತದೆ ಎಂದು ಪವನ್ ಕೂಡಲೇ ಅದನ್ನು ಪಶು ಆಸ್ಪತ್ರೆಯ ಸಹಾಯಕ ಅದ್ವೈತ ಭಟ್ ಅವರ ಮನೆಗೆ ಕೊಂಡೊಯ್ದು ಅರ್ಧ ಗಂಟೆಗೂ ಆಪರೇಶನ್ ಮಾಡಿಸಿದ್ದಾರೆ. ಕೊನೆಗೆ, ಚಾಕುವನ್ನು ಹಾವಿನ ಹೊಟ್ಟೆಯಿಂದ ಹೊರ ತೆಗೆದು ಹಾವನ್ನು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.
Kumta Snake Swallows Knife in Bizarre Incident at Kumta, Rescued After Emergency Operation.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm