ಬ್ರೇಕಿಂಗ್ ನ್ಯೂಸ್
22-06-25 07:52 pm HK News Desk ಕರ್ನಾಟಕ
ಹಾಸನ, ಜೂ 22: ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ವಿಪ್ಲವ ಲಕ್ಷಣ ಇದೆ. ನಿರೀಕ್ಷೆಗೂ ಮೀರಿದ ದುಃಖ ಭಾರತಕ್ಕೆ ಬರಲಿದೆ. ಮೇಘ ಸ್ಫೋಟ, ಯುದ್ಧ, ಅರಸನಾಲಯಕ್ಕೆ ಕಾರ್ಮೋಡ ಕವಿಯಲಿದೆ. ಇದು ರಾಜ್ಯಕ್ಕೂ ಇದೆ, ದೇಶಕ್ಕೂ ಇದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.
ಎರಡು ಮೂರು ಜನ ಪ್ರಧಾನ ಮಂತ್ರಿಗಳು ಕೊಲೆ ಆಗ್ತಾರೆ ಅಂಥ ಹೇಳಿದ್ದೆ ಅದು ಆಗುತ್ತದೆ. ಯುದ್ಧ ನಿಲ್ಲೋದು ಸಂವತ್ಸರ ಪರದಲ್ಲಿ ಕಷ್ಟ. ದ್ವೇಷ, ಅಸೂಯೆ ಮಧ್ಯೆ ಒಂದಿಬ್ಬರು ಬಲಿಯಾಗುತ್ತಾರೆ. ಊಹಿಸಲಾರದ ದುಃಖ ಈ ಭಾರತಕ್ಕೆ ಬರುತ್ತದೆ.
ಪ್ರಕೃತಿದತ್ತವಾಗಿ ಮೇಘ ಸ್ಪೋಟ ಆಗುತ್ತೆ. ಜನಜೀವನ ಅಸ್ಥಿರವಾಗುತ್ತೆ, ಇನ್ನೂ ಜಾಸ್ತಿ ಆಗುತ್ತೆ. ಯಾವಾಗ ಮನೆಗೆ ಬರ್ತಾರೆ ಹೋಗ್ತಾರೆ ಎಂದು ಹೇಳುವುದು ಕಷ್ಟ ಎಂದು ಹೇಳಿದ ಶ್ರೀಗಳು, ಸಿದ್ದರಾಮಯ್ಯ ಅವರಿಗೆ ಏನೂ ತೊಂದರೆ ಇಲ್ಲ ಎಂದಿದ್ದಾರೆ.
ಮೋಡ ಬರುತ್ತೆ ಮೋಡ ಹೋಗುತ್ತೆ ಅಷ್ಟೇ. ಸಂಕ್ರಾಂತಿ ಒಳಗೆ ಮೇಘ ಸ್ಫೋಟ ಆಗುವ ಸಾಧ್ಯತೆ ಇದೆ. ಜನವರಿ ಒಳಗೆ ಒಂದು ದೊಡ್ಡ ಗಂಡಾಂತರ ಇದೆ. ಅಕಾಲದಲ್ಲಿ ಮಳೆ ಬಂದರೆ ಸಕಾಲದಲ್ಲಿ ತೊಂದರೆ ಆಗಲಿದೆ. ಈ ಬಾರಿ ಮಳೆ ಚೆನ್ನಾಗಿ ಆಗಲಿದೆ, ಮತ್ತೆ ಜಲಸ್ಫೋಟ ಆಗಲಿದೆ. ಸಾಗರದಲ್ಲಿ ಒಂದು ಜಲಸ್ಪೋಟ ಎಂದು ಹೇಳಿದ್ದೆ, ಅದು ಆಗಲಿದೆ.
ಸೂಳೆಯಾ ಮಗನುಟ್ಟಿ, ಆಳುವನು ಮುನಿಪುರವ.. ಯುದ್ದವಿಲ್ಲದೆ ಮಡಿಯೆ ಪುರವೆಲ್ಲ ಕೂಳಾದೀತು ಎಂದು ಒಗಟಾಗಿ ಹೇಳಿದ ಶ್ರೀಗಳು, ಇದರ ಅರ್ಥವನ್ನು ಮುಂದೆ ಹೇಳುತ್ತೇನೆ ಎಂದು ಹೇಳಿ ಕುತೂಹಲ ಮೂಡಿಸಿದ್ದಾರೆ.
ಕೊರೊನಾ ಇನ್ನೊಂದು ರೂಪ ತಾಳಲಿದೆ. ಸಾವು ನೋವು ಕಡಿಮೆ ಇದ್ದರೂ ಸಮಸ್ಯೆ ಇದ್ದೇ ಇದೆ. ಕೆಲವು ದೇಶಗಳು ಮುಳುಗುತ್ತವೆ, ಕೆಲವು ದೇಶಗಳು ಏಳ್ತವೆ. ವಾಯು ಪ್ರಳಯ, ಭೂ ಪ್ರಳಯವಾಗುತ್ತೆ ಎಂದು ದೇಶ ರಾಜ್ಯದ ಬಗ್ಗೆ ಸ್ಪೋಟಕ ಭವಿಷ್ಯ ನುಡಿದಿದ್ದಾರೆ.
Renowned spiritual leader Kodi Sri has made a startling prediction, warning of major political upheaval in the state following the Sankranti festival. He claimed that dark clouds loom over the royal palace, suggesting a crisis not just for the state but for the entire nation. In an even more explosive statement, he prophesied that 2 to 3 Prime Ministers could be assassinated during this turbulent period.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
22-06-25 07:48 pm
HK News Desk
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
Pahalgam Attack, NIA Arrest; ಪಹಲ್ಗಾಮ್ ದಾಳಿಗೂ...
22-06-25 04:49 pm
Israel Iran Conflict, B-2 Stealth Bombers; ಇಸ...
22-06-25 10:58 am
IndiGo Flight News, Bangalore; ಇಂಡಿಗೋ ವಿಮಾನದಲ...
21-06-25 08:50 pm
21-06-25 11:04 pm
Mangaluru Correspondent
Krishnaveni Mines Geology, Mangalore;18 ದಿನ ಜ...
21-06-25 03:56 pm
Fake NEET Marksheet, Udupi Topper; ನಕಲಿ ನೀಟ್...
21-06-25 01:59 pm
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
21-06-25 08:58 pm
Mangaluru Correspondent
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm