ಬ್ರೇಕಿಂಗ್ ನ್ಯೂಸ್
30-06-25 11:04 am HK News Desk ಕರ್ನಾಟಕ
ತುಮಕೂರು, ಜೂ 30 : ಕ್ಯಾಂಟರ್ ಹಾಗೂ ಕಾರು ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಬೆಂಗಳೂರು - ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿರುವ ತುಮಕೂರು ಜಿಲ್ಲೆಯ ಕುಣಿಗಲ್ ಬೈಪಾಸ್ನಲ್ಲಿ ನಡೆದಿದೆ.
ಮೃತರೆಲ್ಲರು ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಮತ್ತಿಕೆರೆ ಗ್ರಾಮದವರಾಗಿದ್ದಾರೆ. ಸೀಬೆಗೌಡ, ಶೋಭಾ, ದುಂಬಿಶ್ರೀ, ಭಾನುಕಿರಣ್ ಗೌಡ ಮೃತ ದುರ್ದೈವಿಗಳು. ಮಗನನ್ನು ಹಾಸ್ಟೆಲ್ಗೆ ಬಿಟ್ಟು ಬರಲು ಹೋಗುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಮೃತ ಸೀಬೆಗೌಡ ಅವರಿಗೆ ಮೂವರು ಮಕ್ಕಳು. ವರ್ಣಶ್ರೀ, ದುಂಬಿಶ್ರೀ, ಭಾನುಕಿರಣ್ ಗೌಡ.
ಮೃತ ಸಿಬೇಗೌಡ ಅವರ ಮಗ ಭಾನುಕಿರಣ್ ಗೌಡ ಕುಣಿಗಲ್ ಹೊರವಲಯದ ಬಿದನಗೆರೆ ಬಳಿಯಿರುವ ವ್ಯಾಲಿ ಸ್ಕೂಲ್ನಲ್ಲಿ 8ನೇ ತರಗತಿ ಓದುತ್ತಿದ್ದ. ಭಾನುವಾರ ರಜೆ ಹಿನ್ನೆಲೆ ಮನೆಗೆ ಮಗ ಬಂದಿದ್ದ. ನಿನ್ನೆ ಊಟ ಮುಗಿಸಿ ಮಗನನ್ನು ಶಾಲೆಯ ಹಾಸ್ಟೆಲ್ಗೆ ಬಿಟ್ಟು ಬರಲು ಮಗ ಭಾನುಕಿರಣ್ನೊಂದಿಗೆ ಸಿಬೇಗೌಡ, ಅವರ ಪತ್ನಿ ಶೋಭಾ, 2ನೇ ಮಗಳು ದುಂಬಿಶ್ರೀ ಹೊರಟಿದ್ದರು.
ಮೃತ ಸಿಬೇಗೌಡರು ಕಾರು ಚಾಲನೆ ಮಾಡಿಕೊಂಡು ಬರುತ್ತಿದ್ದರು. ಈ ವೇಳೆ, ಕುಣಿಗಲ್ ಬೈಪಾಸ್ ಬಳಿ ಯುಟರ್ನ್ ತೆಗೆದುಕೊಳ್ಳಲು ಒನ್ ವೇಯಲ್ಲಿ ವೇಗವಾಗಿ ಬಂದ ಕ್ಯಾಂಟರ್ ಕಾರಿಗೆ ಡಿಕ್ಕಿ ಹೊಡೆದಿದೆ. ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಹಿರಿಯ ಮಗಳು ವರ್ಣಶ್ರೀ ಬೆಂಗಳೂರಿನ ದಯಾನಂದ ಸಾಗರ ಕಾಲೇಜಿನಲ್ಲಿ ಓದುತ್ತಿದ್ದಾರೆ. ದುಂಬಿಶ್ರೀ, ಬೆಂಗಳೂರಿನ ಗ್ಲೋಬಲ್ ಕಾಲೇಜಿನಲ್ಲಿ ಓದುತ್ತಿದ್ದರು. ಮಗನನ್ನು ಕರೆದುಕೊಂಡು ಹೋಗುವ ಮೊದಲು ಹಿರಿಯ ಮಗಳು ವರ್ಣಶ್ರೀಯನ್ನು ಬೆಂಗಳೂರಿಗೆ ಕಳುಹಿಸಿಕೊಟ್ಟಿದ್ದರು.
ಘಟನೆ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a heartbreaking accident, four members of a single family lost their lives in a car and canter collision on National Highway 75 near the Kunigal bypass in Tumakuru district. The victims were returning after dropping their son at a school hostel.
25-08-25 10:55 pm
Bangalore Correspondent
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
25-08-25 10:59 pm
Mangalore Correspondent
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
Dharmasthala, Mask Man, Fake Skull, SIT: ಎಸ್ಐ...
25-08-25 12:24 pm
25-08-25 08:29 pm
HK News Desk
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am