ಬ್ರೇಕಿಂಗ್ ನ್ಯೂಸ್
30-06-25 11:04 am HK News Desk ಕರ್ನಾಟಕ
ತುಮಕೂರು, ಜೂ 30 : ಕ್ಯಾಂಟರ್ ಹಾಗೂ ಕಾರು ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಬೆಂಗಳೂರು - ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿರುವ ತುಮಕೂರು ಜಿಲ್ಲೆಯ ಕುಣಿಗಲ್ ಬೈಪಾಸ್ನಲ್ಲಿ ನಡೆದಿದೆ.
ಮೃತರೆಲ್ಲರು ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಮತ್ತಿಕೆರೆ ಗ್ರಾಮದವರಾಗಿದ್ದಾರೆ. ಸೀಬೆಗೌಡ, ಶೋಭಾ, ದುಂಬಿಶ್ರೀ, ಭಾನುಕಿರಣ್ ಗೌಡ ಮೃತ ದುರ್ದೈವಿಗಳು. ಮಗನನ್ನು ಹಾಸ್ಟೆಲ್ಗೆ ಬಿಟ್ಟು ಬರಲು ಹೋಗುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಮೃತ ಸೀಬೆಗೌಡ ಅವರಿಗೆ ಮೂವರು ಮಕ್ಕಳು. ವರ್ಣಶ್ರೀ, ದುಂಬಿಶ್ರೀ, ಭಾನುಕಿರಣ್ ಗೌಡ.
ಮೃತ ಸಿಬೇಗೌಡ ಅವರ ಮಗ ಭಾನುಕಿರಣ್ ಗೌಡ ಕುಣಿಗಲ್ ಹೊರವಲಯದ ಬಿದನಗೆರೆ ಬಳಿಯಿರುವ ವ್ಯಾಲಿ ಸ್ಕೂಲ್ನಲ್ಲಿ 8ನೇ ತರಗತಿ ಓದುತ್ತಿದ್ದ. ಭಾನುವಾರ ರಜೆ ಹಿನ್ನೆಲೆ ಮನೆಗೆ ಮಗ ಬಂದಿದ್ದ. ನಿನ್ನೆ ಊಟ ಮುಗಿಸಿ ಮಗನನ್ನು ಶಾಲೆಯ ಹಾಸ್ಟೆಲ್ಗೆ ಬಿಟ್ಟು ಬರಲು ಮಗ ಭಾನುಕಿರಣ್ನೊಂದಿಗೆ ಸಿಬೇಗೌಡ, ಅವರ ಪತ್ನಿ ಶೋಭಾ, 2ನೇ ಮಗಳು ದುಂಬಿಶ್ರೀ ಹೊರಟಿದ್ದರು.


ಮೃತ ಸಿಬೇಗೌಡರು ಕಾರು ಚಾಲನೆ ಮಾಡಿಕೊಂಡು ಬರುತ್ತಿದ್ದರು. ಈ ವೇಳೆ, ಕುಣಿಗಲ್ ಬೈಪಾಸ್ ಬಳಿ ಯುಟರ್ನ್ ತೆಗೆದುಕೊಳ್ಳಲು ಒನ್ ವೇಯಲ್ಲಿ ವೇಗವಾಗಿ ಬಂದ ಕ್ಯಾಂಟರ್ ಕಾರಿಗೆ ಡಿಕ್ಕಿ ಹೊಡೆದಿದೆ. ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಹಿರಿಯ ಮಗಳು ವರ್ಣಶ್ರೀ ಬೆಂಗಳೂರಿನ ದಯಾನಂದ ಸಾಗರ ಕಾಲೇಜಿನಲ್ಲಿ ಓದುತ್ತಿದ್ದಾರೆ. ದುಂಬಿಶ್ರೀ, ಬೆಂಗಳೂರಿನ ಗ್ಲೋಬಲ್ ಕಾಲೇಜಿನಲ್ಲಿ ಓದುತ್ತಿದ್ದರು. ಮಗನನ್ನು ಕರೆದುಕೊಂಡು ಹೋಗುವ ಮೊದಲು ಹಿರಿಯ ಮಗಳು ವರ್ಣಶ್ರೀಯನ್ನು ಬೆಂಗಳೂರಿಗೆ ಕಳುಹಿಸಿಕೊಟ್ಟಿದ್ದರು.
ಘಟನೆ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a heartbreaking accident, four members of a single family lost their lives in a car and canter collision on National Highway 75 near the Kunigal bypass in Tumakuru district. The victims were returning after dropping their son at a school hostel.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm