ಬ್ರೇಕಿಂಗ್ ನ್ಯೂಸ್
02-07-25 10:47 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 2 : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಅವರ ಅಮಾನತು ರದ್ದುಗೊಳಿಸಿದ ಕೇಂದ್ರ ಆಡಳಿತ ನ್ಯಾಯಮಂಡಳಿ(ಸಿಎಟಿ) ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದೆ.
ಜುಲೈ 1 ರಂದು ನ್ಯಾಯಮಂಡಳಿ ವಿಕಾಸ್ ಕುಮಾರ್ ಅಮಾನತು ಆದೇಶವನ್ನು ರದ್ದುಗೊಳಿಸಿತ್ತು. ಇದರಿಂದ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿತ್ತು. ಹೀಗಾಗಿ ಸಿಎಟಿ ಆದೇಶದ ವಿರುದ್ಧ ರಾಜ್ಯ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿದೆ. ಕರ್ನಾಟಕ ಹೈಕೋರ್ಟ್ನಲ್ಲಿ ಬುಧವಾರ ರಿಟ್ ಅರ್ಜಿ ಸಲ್ಲಿಸಿದ್ದು, ಇಂದೇ ಅರ್ಜಿ ವಿಚಾರಣೆ ನಡೆಸಬೇಕು ಎಂದು ಸರ್ಕಾರದ ಪರ ವಕೀಲರು ಕೋರಿದರು. ಆದರೆ ಇಂದೇ ವಿಚಾರಣೆಯಾಗಬೇಕೆಂಬ ತರಾತುರಿ ಯಾಕೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಎಸ್.ಜಿ.ಪಂಡಿತ್ ಅವರಿದ್ದ ವಿಭಾಗೀಯ ಪೀಠ ಪ್ರಶ್ನಿಸಿತು.
ಇದಕ್ಕುತ್ತರಿಸಿದ ಎಜಿ ಶಶಿಕಿರಣ್ ಶೆಟ್ಟಿ, ಸಿಎಟಿ ಅಮಾನತು ಆದೇಶ ರದ್ದುಪಡಿಸಿದ ಕಾರಣ ಅಧಿಕಾರ ವಹಿಸಿಕೊಳ್ಳಲು ಐಪಿಎಸ್ ಅಧಿಕಾರಿ ಮುಂದಾಗಿದ್ದಾರೆ. ಹೀಗಾಗಿ ತುರ್ತು ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದರು. ಕೊನೆಯದಾಗಿ, ಗುರುವಾರ ವಿಚಾರಣೆ ನಡೆಸಲಾಗುವುದು ಎಂದು ವಿಭಾಗೀಯ ಪೀಠ ತಿಳಿಸಿದೆ.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ್ದ ಕಾಲ್ತುಳಿತ ನಂತರ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿದ್ದ ಸರ್ಕಾರ, ಆಗಿನ ಪೊಲೀಸ್ ಆಯಕ್ತ ಬಿ.ದಯಾನಂದ, ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ವಿಕಾಸ್ ಕುಮಾರ್ ವಿಕಾಸ್ ಸೇರಿದಂತೆ ಹಲವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿತ್ತು. ಇದರ ವಿರುದ್ಧ ವಿಕಾಸ್ ಕುಮಾರ್ ಕೇಂದ್ರ ಆಡಳಿತಾತಕ ನ್ಯಾಯಮಂಡಳಿ ಮೊರೆ ಹೋಗಿದ್ದರು.
The Karnataka State Government has approached the High Court challenging the Central Administrative Tribunal (CAT) order that revoked the suspension of Additional Commissioner of Police Vikas Kumar in connection with the Chinnaswamy Stadium stampede incident.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm