ಬ್ರೇಕಿಂಗ್ ನ್ಯೂಸ್
02-07-25 10:47 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 2 : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಅವರ ಅಮಾನತು ರದ್ದುಗೊಳಿಸಿದ ಕೇಂದ್ರ ಆಡಳಿತ ನ್ಯಾಯಮಂಡಳಿ(ಸಿಎಟಿ) ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದೆ.
ಜುಲೈ 1 ರಂದು ನ್ಯಾಯಮಂಡಳಿ ವಿಕಾಸ್ ಕುಮಾರ್ ಅಮಾನತು ಆದೇಶವನ್ನು ರದ್ದುಗೊಳಿಸಿತ್ತು. ಇದರಿಂದ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿತ್ತು. ಹೀಗಾಗಿ ಸಿಎಟಿ ಆದೇಶದ ವಿರುದ್ಧ ರಾಜ್ಯ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿದೆ. ಕರ್ನಾಟಕ ಹೈಕೋರ್ಟ್ನಲ್ಲಿ ಬುಧವಾರ ರಿಟ್ ಅರ್ಜಿ ಸಲ್ಲಿಸಿದ್ದು, ಇಂದೇ ಅರ್ಜಿ ವಿಚಾರಣೆ ನಡೆಸಬೇಕು ಎಂದು ಸರ್ಕಾರದ ಪರ ವಕೀಲರು ಕೋರಿದರು. ಆದರೆ ಇಂದೇ ವಿಚಾರಣೆಯಾಗಬೇಕೆಂಬ ತರಾತುರಿ ಯಾಕೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಎಸ್.ಜಿ.ಪಂಡಿತ್ ಅವರಿದ್ದ ವಿಭಾಗೀಯ ಪೀಠ ಪ್ರಶ್ನಿಸಿತು.
ಇದಕ್ಕುತ್ತರಿಸಿದ ಎಜಿ ಶಶಿಕಿರಣ್ ಶೆಟ್ಟಿ, ಸಿಎಟಿ ಅಮಾನತು ಆದೇಶ ರದ್ದುಪಡಿಸಿದ ಕಾರಣ ಅಧಿಕಾರ ವಹಿಸಿಕೊಳ್ಳಲು ಐಪಿಎಸ್ ಅಧಿಕಾರಿ ಮುಂದಾಗಿದ್ದಾರೆ. ಹೀಗಾಗಿ ತುರ್ತು ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದರು. ಕೊನೆಯದಾಗಿ, ಗುರುವಾರ ವಿಚಾರಣೆ ನಡೆಸಲಾಗುವುದು ಎಂದು ವಿಭಾಗೀಯ ಪೀಠ ತಿಳಿಸಿದೆ.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ್ದ ಕಾಲ್ತುಳಿತ ನಂತರ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿದ್ದ ಸರ್ಕಾರ, ಆಗಿನ ಪೊಲೀಸ್ ಆಯಕ್ತ ಬಿ.ದಯಾನಂದ, ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ವಿಕಾಸ್ ಕುಮಾರ್ ವಿಕಾಸ್ ಸೇರಿದಂತೆ ಹಲವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿತ್ತು. ಇದರ ವಿರುದ್ಧ ವಿಕಾಸ್ ಕುಮಾರ್ ಕೇಂದ್ರ ಆಡಳಿತಾತಕ ನ್ಯಾಯಮಂಡಳಿ ಮೊರೆ ಹೋಗಿದ್ದರು.
The Karnataka State Government has approached the High Court challenging the Central Administrative Tribunal (CAT) order that revoked the suspension of Additional Commissioner of Police Vikas Kumar in connection with the Chinnaswamy Stadium stampede incident.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 10:33 pm
HK News Desk
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
14-10-25 10:36 pm
Mangalore Correspondent
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
ಬಿ.ಸಿ ರೋಡ್ ; ಹೆದ್ದಾರಿ ಬದಿ ಕಾರು ರಿಪೇರಿ ಮಾಡುತ್...
14-10-25 05:46 pm
14-10-25 04:44 pm
HK News Desk
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm