ಬ್ರೇಕಿಂಗ್ ನ್ಯೂಸ್
23-12-20 12:47 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ. 23 :ರಾಜ್ಯದಲ್ಲಿ ಕೊರೊನಾ ಆತಂಕ ಕಳೆದು, ಶಾಲೆಗಳನ್ನು ಆರಂಭಿಸಲು ಸಿದ್ಧತೆ ನಡೆಸಿರುವಾಗಲೇ ರೂಪಾಂತರಿ ಕೊರೊನಾ ವೈರಸ್ ಕಾಟ ಮತ್ತೆ ಆತಂಕ ಸೃಷ್ಟಿಸಿದೆ. ಆದರೆ ಶಾಲೆ ಆರಂಭಿಸುವ ಪ್ರಕ್ರಿಯೆ ನಿಗದಿಯಂತೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಇದೀಗ 2021ರ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ತರಗತಿಗಳನ್ನು ಜ.1 ರಿಂದ ನಡೆಸಲು ತಯಾರಿ ನಡೆಸಲಾಗಿದೆ. ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆ ಎಲ್ಲ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳುತ್ತಿದೆ. ಹಾಗೂ ಲಭ್ಯವಾಗುವ ಸೀಮಿತ ಅವಧಿಯ ಹಿನ್ನೆಲೆಯಲ್ಲಿ, ಮಾರ್ಚ್ ವೇಳೆಗೆ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳು ನಡೆಯುವುದು ಕಷ್ಟ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಖಾಸಗಿ ಸುದ್ದಿ ವಾಹಿನಿಯ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಎಸ್. ಸುರೇಶ್ ಕುಮಾರ್, ಮಕ್ಕಳಿಗೆ ಹೊರೆಯಾಗದ ರೀತಿ ಪಠ್ಯಕ್ರಮವನ್ನು ಅಂತಿಮ ಗೊಳಿಸಲಾಗುತ್ತದೆ. ಕನಿಷ್ಟ ಕಲಿಕೆಗೆ ಒತ್ತು ನೀಡಲಾಗುತ್ತದೆ. ಅಲ್ಲದೇ, ವಿಶೇಷವಾಗಿ ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಕಲಿಕೆಯನ್ನು ಗಮನದಲ್ಲಿಟ್ಟುಕೊಂಡು ಕೆಲವೇ ದಿನಗಳಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ವಿಶೇಷವಾಗಿ ಗ್ರಾಮೀಣ ಭಾಗಗಳ ಮಕ್ಕಳ ಹಿತದೃಷ್ಟಿಯಿಂದ ಆರಂಭಿಸಲಾದ ವಿದ್ಯಾಗಮ ಕಾರ್ಯಕ್ರಮವನ್ನು ಖಾಸಗಿ ಶಾಲೆಗಳು ಸಹ ಅಳವಡಿಸಿಕೊಳ್ಳಬೇಕೆಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸಲಹೆ ನೀಡಿದ್ದಾರೆ. ಖಾಸಗಿ ಶಾಲೆಗಳ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಮುಕ್ತ ನಿಲುವನ್ನು ಹೊಂದಿದೆ. ಜೊತೆಗೆ ವಿದ್ಯಾಗಮ ಕಾರ್ಯಕ್ರಮವನ್ನು ಖಾಸಗಿ ಶಾಲೆಗಳೂ ಅಳವಡಿಸಿಕೊಳ್ಳಲಿ ಎಂದಿದ್ದಾರೆ.

ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದ ವಿದ್ಯಾಗಮ ಕಾರ್ಯಕ್ರಮವನ್ನು ಸರ್ಕಾರಿ ಶಾಲೆಗಳಲ್ಲಿ ಸುರಕ್ಷತಾ ಕ್ರಮಗಳೊಂದಿಗೆ ಹೊಸ ರೂಪದಲ್ಲಿ ಆರಂಭಿಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ಆದರೆ ವಿದ್ಯಾಗಮದ ಮೂಲಕ ತರಗತಿಗಳು ನಡೆದರೂ ವಾರ್ಷಿಕ ಪರೀಕ್ಷೆಗಳನ್ನು ಮಾರ್ಚ್ ತಿಂಗಳಿನಲ್ಲಿ ನಡೆಸುವುದಿಲ್ಲ. ಮಕ್ಕಳಿಗೆ ಸರಿಯಾದ ತರಗತಿಯ ಬಳಿಕವೇ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟವಾಗಿ ಹೇಳಿದ್ದಾರೆ. ಆ ಮೂಲಕ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳು ಹಾಗೂ ಅವರ ಪಾಲಕರ ಬಹುದೊಡ್ಡ ಗೊಂದಲವನ್ನು ಶಿಕ್ಷಣ ಸಚಿವರು ಪರಿಹರಿಸಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 05:32 pm
Mangalore Correspondent
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm