ಬ್ರೇಕಿಂಗ್ ನ್ಯೂಸ್
08-07-25 11:15 am Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 8 : ರಾಜ್ಯ ಸರ್ಕಾರ ಹಠಾತ್ ಸಾವುಗಳನ್ನು "ಅಧಿಸೂಚಿತ ಕಾಯಿಲೆ" ಎಂದು ಸೋಮವಾರ ಘೋಷಿಸಿದ್ದು, ಅಂತಹ ಪ್ರಕರಣಗಳಲ್ಲಿ ಮರಣೋತ್ತರ ಪರೀಕ್ಷೆ ನಡೆಸುವುದನ್ನು ಕಡ್ಡಾಯಗೊಳಿಸಿ ಆದೇಶಿಸಿದೆ.
ಹಠಾತ್ ಸಾವಿನ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 15 ವರ್ಷಕ್ಕಿಂತ ಮೇಲ್ಪಟ್ಟ ವಯಸ್ಸಿನ ಜನರನ್ನು ಹೆಚ್ಚಿನ ತಪಾಸಣೆಗೆ ಒಳಪಡಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ರಾಜ್ಯದಲ್ಲಿ, ವಿಶೇಷವಾಗಿ ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸರಣಿ ಸಾವು ಹಿನ್ನೆಲೆಯಲ್ಲಿ ಸುದ್ದಿಗೋಷ್ಟಿ ನಡೆಸಿದ ಆರೋಗ್ಯ ಸಚಿವರು, ಹೃದಯಾಘಾತದಿಂದ ಮೃತಪಟ್ಟವರ ಮರಣೋತ್ತರ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗುವುದು ಎಂದು ಹೇಳಿದರು.
"ಹಠಾತ್ ಸಾವುಗಳನ್ನು ಅಧಿಸೂಚಿತ ಕಾಯಿಲೆ ಎಂದು ಘೋಷಿಸಲು ನಾವು ನಿರ್ಧರಿಸಿದ್ದೇವೆ. ಆಸ್ಪತ್ರೆಗಳ ಹೊರಗೆ ಹಠಾತ್ ಸಾವು ಸಂಭವಿಸಿದರೆ ಅದನ್ನು ಸರ್ಕಾರಕ್ಕೆ ತಿಳಿಸಬೇಕು" ಎಂದು ಸಚಿವರು ಹೇಳಿದರು. ಹುಟ್ಟಿನಿಂದಲೇ ರೋಗಗಳನ್ನು ಹೊಂದಿರುವ ಜನ ಇರುವುದರಿಂದ", ಸುಮಾರು 15 ವರ್ಷ ವಯಸ್ಸಿನ ಮಕ್ಕಳು ಸೇರಿದಂತೆ ಹೆಚ್ಚಿನ ಜನರನ್ನು ವರ್ಷಕ್ಕೊಮ್ಮೆಯಾದರೂ ತಪಾಸಣೆ ಮಾಡುವ ಅಗತ್ಯವನ್ನು ಸಚಿವರು ಒತ್ತಿ ಹೇಳಿದರು.
ಇದಲ್ಲದೆ, ಹೃದಯಾಘಾತ ಮತ್ತು ಹಠಾತ್ ಸಾವುಗಳ ಬಗ್ಗೆ ಅರಿವು ಹೆಚ್ಚಿಸುವ ದೃಷ್ಟಿಯಿಂದ ಈ ಕುರಿತು ಪಠ್ಯಪುಸ್ತಕಗಳಲ್ಲಿ ಪ್ರತ್ಯೇಕ ಪಠ್ಯ ಅಳವಡಿಸಲು ಶಿಕ್ಷಣ ಇಲಾಖೆಗೆ ಸೂಚಿಸಲಾಗುವುದು ಎಂದು ಸಚಿವರು ತಿಳಿಸಿದರು. ಸಿಪಿಆರ್ ಕುರಿತು ಜನರಿಗೆ ತರಬೇತಿ ನೀಡಲು ಸಹ ನಿರ್ಧರಿಸಲಾಗಿದೆ. ಇದಲ್ಲದೆ, ರಾಜ್ಯದ 86 ಆಸ್ಪತ್ರೆಗಳಲ್ಲಿ ನಡೆಯುತ್ತಿರುವ ಪುನೀತ್ ರಾಜ್ಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ಈ ವರ್ಷ ತಾಲ್ಲೂಕು ಮಟ್ಟದ ಆಸ್ಪತ್ರೆಗಳಿಗೂ ವಿಸ್ತರಿಸಲಾಗುವುದು ಎಂದು ಅವರು ಹೇಳಿದರು.
ಹಠಾತ್ ಹೃದಯಾಘಾತದಿಂದ ಬಳಲುತ್ತಿರುವ ಜನರಿಗೆ ಚಿಕಿತ್ಸೆ ನೀಡುವ ಗುರಿಯನ್ನು ಈ ಯೋಜನೆ ಹೊಂದಿದೆ. ಹಠಾತ್ ಹೃದಯಾಘಾತ ಮತ್ತು ಕೋವಿಡ್ -19 ಸೋಂಕು ಮತ್ತು ಲಸಿಕೆಯೊಂದಿಗೆ ಅವುಗಳ ಸಂಭಾವ್ಯ ಸಂಬಂಧದ ತನಿಖೆಗೆ ರಾಜ್ಯ ಸರ್ಕಾರ ರಚಿಸಿದ್ದ ತಜ್ಞರ ಸಮಿತಿಯ ವರದಿಯನ್ನು ಉಲ್ಲೇಖಿಸಿ, ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಲ್ಲ ಎಂದು ದಿನೇಶ್ ಗೂಂಡುರಾವ್ ಹೇಳಿದರು.
In a significant move to address the alarming rise in sudden deaths across the state, the Karnataka government has officially declared “sudden death” as a notifiable disease. The Health Department has also made post-mortem examinations mandatory in all cases of death due to heart attack, particularly when occurring outside hospital settings.
18-04-26 02:43 pm
HK News Staffer
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am