ಬ್ರೇಕಿಂಗ್ ನ್ಯೂಸ್
12-07-25 10:47 pm HK News Desk ಕರ್ನಾಟಕ
ಶಿವಮೊಗ್ಗ, ಜುಲೈ 12 : ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಸೋಗಾನೆಯ ಕೇಂದ್ರ ಕಾರಾಗೃಹದ ಕೈದಿಯೊಬ್ಬನ ಹೊಟ್ಟೆಯಿಂದ ಮೊಬೈಲ್ ಫೋನ್ ಹೊರಗೆ ತೆಗೆದಿದ್ದಾರೆ.
ಕೈದಿ ದೌಲತ್ ಖಾನ್ ಅಲಿಯಾಸ್ ಗೂಂಡಾ (30) ಎಂಬಾತನ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದೆ. ಪ್ರಕರಣವೊಂದರಲ್ಲಿ 10 ವರ್ಷ ಜೈಲು ಶಿಕ್ಷೆ ಅನುಭವಿಸುತ್ತಿರುವ ದೌಲತ್ ಖಾನ್ ಗೆ, ಕಳೆದ ಜೂನ್ 24 ರಂದು ಹೊಟ್ಟೆ ನೋವು ತೀವ್ರವಾಗಿದ್ದು, ಜೈಲಿನ ಆಸ್ಪತ್ರೆಗೆ ಬಂದು, ತಾನು ಕಲ್ಲು ನುಂಗಿದ್ದೇನೆ ಎಂದು ವೈದ್ಯರಿಗೆ ತಿಳಿಸಿದ್ದ.
ಔಷಧಿ ಕೊಟ್ಟಿದ್ದರೂ ಹೊಟ್ಟೆನೋವು ಹೆಚ್ಚಾದಾಗ ಪರೀಕ್ಷಿಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದರು. ನಂತರ ಎಕ್ಸ್ ರೇ ಮಾಡಿದ್ದ ವೈದ್ಯರಿಗೆ ಅಚ್ಚರಿ ಕಾದಿತ್ತು. ಕೈದಿ ದೌಲತ್ ನ ಹೊಟ್ಟೆಯಲ್ಲಿ ಒಂದು ಇಂಚು ಅಗಲ, ಮೂರು ಇಂಚು ಉದ್ದದ ಮೊಬೈಲ್ ಫೋನ್ ಪತ್ತೆಯಾಗಿದೆ. ಅದನ್ನು ಯಶಸ್ವಿಯಾಗಿ ಈಗ ಹೊರಗೆ ತಂದಿದ್ದಾರೆ.
ಆ ಪೋನ್ ಈಗ ಜೈಲು ಅಧಿಕಾರಿಗಳ ವಶಕ್ಕೆ ನೀಡಲಾಗಿದೆ. ಮೊಬೈಲ್ ಬಳಕೆಗೆ ಜೈಲಿನಲ್ಲಿ ನಿರ್ಬಂಧವಿದ್ದರೂ ಹೇಗೆ ಮೊಬೈಲ್ ಜೈಲಿಗೆ ತಲುಪಿತು ಎಂಬುದರ ಕುರಿತು ತನಿಖೆಗೆ ಅಧಿಕಾರಿಗಳು ಆದೇಶಿಸಿದ್ದಾರೆ. ಕೈದಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಇದರಲ್ಲಿ ಜೈಲು ಸಿಬ್ಬಂದಿ ತೊಡಗಿಸಿಕೊಡಿರುವ ಆರೋಪವೂ ಕೇಳಿಬಂದಿದೆ. ಭದ್ರತಾ ಲೋಪದ ಕುರಿತಾಗಿಯೂ ತನಿಖೆಗೆ ಮುಂದಾಗಿದ್ದಾರೆ.
In a shocking incident at the Shivamogga Central Prison, doctors at the Government McGann Hospital surgically removed a mobile phone from the stomach of an inmate, leaving medical staff stunned.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm