ಬ್ರೇಕಿಂಗ್ ನ್ಯೂಸ್
18-07-25 10:31 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 18 : ರಾಜ್ಯದಲ್ಲಿ ಪರಮಾಣು ವಿದ್ಯುತ್ ಸ್ಥಾವರ ಮತ್ತು ಮೂರು ಉಷ್ಣ ವಿದ್ಯುತ್ ಸ್ಥಾವರ ಸ್ಥಾಪನೆಗೆ ಸಂಭಾವ್ಯ ಸ್ಥಳಗಳನ್ನು ಗುರುತಿಸುವ ಬಗ್ಗೆ ಹಾಗೂ ಈ ಕುರಿತು ಪ್ರಾಥಮಿಕ ಅಧ್ಯಯನಗಳನ್ನು ನಡೆಸಲು ಸಂಪುಟ ಸಭೆಯಲ್ಲಿ ಅನುಮತಿ ನೀಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ್ ತಿಳಿಸಿದ್ದಾರೆ.
NTPC ಅಧ್ಯಯನ ಮಾಡಲು ಮೂರು ಸ್ಥಳಗಳನ್ನು ಗುರುತಿಸಿದ್ದು ಚರ್ಚೆ ನಡೆಸಲಾಗಿದೆ. ಆದರೆ ಇದನ್ನು ಸಚಿವ ಸಂಪುಟ ಸಭೆ ಒಪ್ಪಲಿಲ್ಲ. ಸಂಭಾವ್ಯ ಕಾರ್ಯ ಸಾಧ್ಯ ಪರ್ಯಾಯಗಳಿಗಾಗಿ ಇಡೀ ರಾಜ್ಯದಲ್ಲಿ ಅಧ್ಯಯನ ಮಾಡುವಂತೆ ಸೂಚಿಸಲು ನಿರ್ಧರಿಸಿದ್ದೇವೆ. ನಂತರ ರಾಜ್ಯ ಸರ್ಕಾರವು ಪರಿಣತರ ಅಭಿಪ್ರಾಯ ತೆಗೆದುಕೊಳ್ಳುತ್ತದೆ ಎಂದು ಎಚ್.ಕೆ ಪಾಟೀಲ್ ಹೇಳಿದರು.
ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪರಮಾಣು ಯೋಜನೆ ಹೊಂದುವ ಅಗತ್ಯವಿದೆ ಎಂಬುದಕ್ಕೆ ಒಪ್ಪಿದ್ದೇವೆ. ಆದರೆ ಸ್ಥಳದ ವಿಷಯದಲ್ಲಿ ಗೊಂದಲ ಇದೆ. ಎಲ್ಲಾ ಸಂಭಾವ್ಯ ಪರ್ಯಾಯಗಳನ್ನು ಅಧ್ಯಯನ ಮಾಡಿ ವರದಿ ಸಲ್ಲಿಸಲು ಸೂಚಿಸಲಾಗಿದೆ. ಪ್ರಸ್ತುತ NTPC ಗುರುತಿಸಿರುವ ಮೂರು ಸ್ಥಳಗಳು ವಿಜಯಪುರ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಯಲ್ಲಿವೆ. ಚರ್ಚೆಯ ನಂತರ ವಿವಿಧ ಕಾರಣಗಳಿಗಾಗಿ ಅವುಗಳನ್ನು ಪರಿಗಣಿಸಲಾಗಿಲ್ಲ ಎಂದು ಎಚ್ ಕೆ ಪಾಟೀಲ್ ಹೇಳಿದರು.
ರಾಜ್ಯದಲ್ಲಿ ಪ್ರವಾಸೋದ್ಯಮ ಉತ್ತೇಜಿಸಲು ಹಂಪಿ- ಬಾದಾಮಿ- ಐಹೊಳೆ- ಪಟ್ಟದಕಲ್ಲು- ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕ ಪ್ರವಾಸಿ ಸರ್ಕ್ಯೂಟ್ ಅನ್ನು ಕರ್ನಾಟಕ ಪ್ರವಾಸೋದ್ಯಮ ಮೂಲಸೌಕರ್ಯ ಲಿಮಿಟೆಡ್ ಮೂಲಕ ಅಂದಾಜು 2,166.22 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ ಎಂದು ಪಾಟೀಲ್ ಹೇಳಿದರು.
ಕೋಲಾರ ಜಿಲ್ಲೆ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿರುವ 126 ಕೆರೆಗಳನ್ನು ಬೆಂಗಳೂರು ನಗರದ ಸಂಸ್ಕರಿಸಿದ ತ್ಯಾಜ್ಯ ನೀರಿನಿಂದ ತುಂಬಿಸುವ ನೀರಾವರಿ ಯೋಜನೆಯ 5 ವರ್ಷಗಳ ಕಾರ್ಯಾಚರಣೆ ಮತ್ತು ನಿರ್ವಹಣೆ ಕೆಲಸವನ್ನು 128 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕೈಗೊಳ್ಳಲು ಸಂಪುಟವು ಆಡಳಿತಾತ್ಮಕ ಅನುಮೋದನೆ ನೀಡಿದೆ.
The Karnataka Cabinet has given in-principle approval to identify potential locations for establishing a nuclear power plant and three additional thermal power plants in the state, Law and Parliamentary Affairs Minister H.K. Patil announced on Thursday.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 11:22 am
HK News Desk
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
14-10-25 10:13 pm
Mangalore Correspondent
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
ಬಿ.ಸಿ ರೋಡ್ ; ಹೆದ್ದಾರಿ ಬದಿ ಕಾರು ರಿಪೇರಿ ಮಾಡುತ್...
14-10-25 05:46 pm
ಗಾಲ -2025 ಈಜು ಸ್ಪರ್ಧೆ ; ವೀ ಒನ್ ಆಕ್ವಾ ಈಜು ತಂಡಕ...
14-10-25 03:40 pm
14-10-25 04:44 pm
HK News Desk
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm