ಬ್ರೇಕಿಂಗ್ ನ್ಯೂಸ್
19-07-25 03:05 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 19 : ಪೊಲೀಸರು 'ಆರ್ಸಿಬಿ ಸೇವಕರು' ಎಂಬಂತೆ ವರ್ತಿಸಿದ್ದರಿಂದ ಕಾಲ್ತುಳಿತ ಪ್ರಕರಣ ಸಂಭವಿಸಿತು ಎಂಬ ಸರ್ಕಾರದ ನಿಲುವಿಗೆ ಅಮಾನತುಗೊಂಡ ಐಪಿಎಸ್ ಅಧಿಕಾರಿ ವಿಕಾಶ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಪೊಲೀಸ್ ಅಧಿಕಾರಿಗಳನ್ನು ಅಮಾನತು ಪಡಿಸಿದ್ದ ಕ್ರಮವನ್ನು ರದ್ದುಪಡಿಸಿದ್ದ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿ ಹಾಗೂ ಸಿಎಟಿ ಆದೇಶದಲ್ಲಿ ದುರ್ಘಟನೆಗೆ ತಾನೇ ಕಾರಣ ಎಂದಿರುವ ಅಂಶಗಳನ್ನು ತೆಗೆಯುವಂತೆ ಕೋರಿ ಆರ್ಸಿಬಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಜಿ.ಪಂಡಿತ್ ಮತ್ತು ಟಿ.ಎಂ.ನದಾಫ್ ಅವರಿದ್ದ ವಿಭಾಗೀಯ ಪೀಠ ಮುಂದೆ ವಿಕಾಶ್ ಕುಮಾರ್ ಪರ ವಕೀಲರು ವಾದ ಮಂಡಿಸಿದರು.
ಈ ಪ್ರಕರಣದಲ್ಲಿ ಸರ್ಕಾರ ಯಾವುದೇ ದಾಖಲೆಗಳಿಲ್ಲದೇ ಪೊಲೀಸರನ್ನು ಅಮಾನತುಪಡಿಸಿದೆ. ತನಿಖಾ ವರದಿ ಬರುವ ಮುನ್ನವೇ ತನಗೆ ಮುಜುಗರವಾಗಿದೆ ಎಂದು ಯಾರನ್ನೋ ಅಮಾನತು ಮಾಡುವುದನ್ನು ಒಪ್ಪಲು ಸಾಧ್ಯವಿಲ್ಲ. ಅಷ್ಟಕ್ಕೂ, ಆರ್ಸಿಬಿ ತಂಡವನ್ನು ಸ್ವಾಗತಿಸಲು ಯಾರು ವಿಮಾನ ನಿಲ್ದಾಣಕ್ಕೆ ಹೋಗಿದ್ದರು ಎಂಬ ಸಂಗತಿ ಎಲ್ಲರಿಗೂ ತಿಳಿದಿದೆ ಎಂದು ಕುಟುಕಿದರು.
‘ಪೊಲೀಸರು ತಮ್ಮ ಕರ್ತವ್ಯವನ್ನು ಕಟ್ಟುನಿಟ್ಟಾಗಿ ನಿರ್ವಹಿಸಿದರೂ ತಪ್ಪು. ನಿರ್ವಹಿಸದೇ ಇದ್ದರೂ ತಪ್ಪು ಎಂಬುದಕ್ಕೆ ಈ ಪ್ರಕರಣ ಸ್ಪಷ್ಟ ನಿದರ್ಶನವಾಗಿದೆ. ನ್ಯಾಯಾಲಯದ ಮುಂದೆ ಎಲ್ಲವೂ ಸರಿಯಾಗಿದೆ ಎಂಬುದನ್ನು ತೋರಿಸಲು ದಾಖಲೆಗಳ ಅನುಪಸ್ಥಿತಿಯಲ್ಲಿಯೂ ವಿಕಾಸ್ ಕುಮಾರ್ ಅವರನ್ನು ಸರ್ಕಾರ ನಿಂದಿಸುತ್ತಿದೆ ಎಂದು ಆಕ್ಷೇಪಿಸಿದರು. ಕೆಲ ಕಾಲ ವಾದ ಆಲಿಸಿದ ನ್ಯಾಯಾಲಯವು ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿತು.
Suspended IPS officer Vikas Kumar has raised strong objections to the Karnataka government's claim that a stampede incident occurred because the police behaved like "RCB fans" instead of maintaining law and order.
18-04-26 10:20 am
HK News Staffer
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am