ಬ್ರೇಕಿಂಗ್ ನ್ಯೂಸ್
23-07-25 08:03 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 23 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಕಾನೂನಿನ ಅನ್ವಯ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಬೆಂಗಳೂರಿನ ವಿಧಾನ ಸೌಧದಲ್ಲಿ ಇಂದು ಸ್ಪೀಕರ್ ಯು.ಟಿ ಖಾದರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಗಣಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಯಿತು. ಜಿಲ್ಲೆಯಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಇರುವ ಅಡೆತಡೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ನಿಯಮಗಳಲ್ಲಿ ಬದಲಾವಣೆಗಳನ್ನು ತರುವ ಕುರಿತಂತೆ ಗಣಿ ಇಲಾಖೆ ಅಧಿಕಾರಿಗಳೊಂದಿಗೆ ಸಚಿವ ದಿನೇಶ್ ಗುಂಡೂರಾವ್ ಚರ್ಚೆ ನಡೆಸಿದರು.
ವಾಣಿಜ್ಯ ಉದ್ದೇಶವಲ್ಲದ ಕೆಂಪುಕಲ್ಲು ಕ್ವಾರಿಗಳಿಗೆ ಅಧಿಕೃತವಾಗಿ ಪರವಾನಿಗೆ ಕೊಡುವ ವ್ಯವಸ್ಥೆ ಜಾರಿಯಾಗಬೇಕು. ಪರವಾನಿಗೆ ಪಡೆಯಲು ಏಕಗವಾಕ್ಷಿ ಯೋಜನೆ ರೀತಿಯಲ್ಲಿ ವ್ಯವಸ್ಥೆ ಕಲ್ಪಿಸಬೇಕು. ಸಮಯ ಮಿತಿಯಲ್ಲಿ ಪರವಾನಿಗೆಗಳನ್ನು ಕೊಡುವ ಕಾರ್ಯಗತಿ ಜಾರಿಗೆ ತರುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಗಣಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಕೆಂಪುಕಲ್ಲು ಉತ್ಪಾದಕರೊಂದಿಗೆ ಚರ್ಚೆ ನಡೆಸಿ ವಾರದೊಳಗೆ ಹೊಸ ನೀತಿ ಜಾರಿಗೊಳಿಸುವತ್ತ SOP ಸಿದ್ಧಪಡಿಸುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ವಿಧಾನ ಸಭಾಧ್ಯಕ್ಷರಾದ ಯು.ಟಿ ಖಾದರ್ ಅವರು, ಮಣ್ಣು ಸಮತಟ್ಟು ಸೇರಿದಂತೆ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ 3 ಮೀಟರ್ ಮಾತ್ರ ಆಳಕ್ಕೆ ಡ್ರಿಲ್ ಮಾಡಲು ಅವಕಾಶವಿದ್ದು, ಇದನ್ನ 6 ಮೀಟರ್ ಗೆ ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈಗಾಗಲೇ ಕೆಲವು ಚಟುವಟಿಕೆಗಳಿಗೆ ಯಾವುದೇ ನಿರ್ಬಂಧವಿಲ್ಲ. ಆದರೆ ಕೆಂಪುಕಲ್ಲು ಗಣಿಗಾರಿಕೆಗೆ ಕೆಲವು ನಿರ್ಬಂಧಗಳಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಲಭ ರೀತಿಯಲ್ಲಿ ಕೆಂಪುಕಲ್ಲು ಗ್ರಾಹಕರಿಗೆ ದೊರೆಯುವಂತಾಗಬೇಕು. ರಾಯಲ್ಟಿಯನ್ನ ಕಡಿಮೆಗೊಳಿಸಿ ನಿಯಮ ಬದ್ಧವಾಗಿ ಕಲ್ಲು ಗಣಿಗಾರಿಕೆಗೆ ಅವಕಾಶ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
In a significant move to streamline red stone quarrying operations in Dakshina Kannada district, a key meeting was held at Vidhana Soudha today under the leadership of District In-charge Minister Dinesh Gundu Rao and Speaker U.T. Khader with senior officials of the Department of Mines and Geology.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm