ಬ್ರೇಕಿಂಗ್ ನ್ಯೂಸ್
25-07-25 12:25 pm HK News Desk ಕರ್ನಾಟಕ
ಬೆಂಗಳೂರು, ಜುಲೈ 25 : 10 ಲಕ್ಷ ನೀಡುವಂತೆ ಲಂಚ ಕೇಳಿದ ಆರೋಪದಡಿ ಸುಬ್ರಮಣ್ಯಪುರ ಠಾಣೆಯ ಪಿಎಸ್ಐ ಭೈರಪ್ಪ ಹಾಗೂ ಕೆಂಗೇರಿ ಪೊಲೀಸ್ ಠಾಣೆಯ ಪಿಎಸ್ಐ ಮುರುಳಿ ಮೋಹನ್ ವಿರುದ್ಧ ನಗರದ ಲೋಕಾಯುಕ್ತ ಅಧಿಕಾರಿಗಳು ಎಫ್ಐಆರ್ ದಾಖಲಿಸಿಕೊಂಡಿದ್ಧಾರೆ.
ಪ್ರಶಾಂತ್ ನಗರದ ನಿವಾಸಿ ಶಿವಕುಮಾರ್ ಎಂಬವರು ನೀಡಿದ ದೂರು ಆಧರಿಸಿ, ಇಬ್ಬರು ಸಬ್ ಇನ್ಸ್ಪೆಕ್ಟರ್ಗಳ ವಿರುದ್ಧ ಭ್ರಷ್ಟಾಚಾರ ಪ್ರತಿಬಂಧ ಕಾಯ್ದೆಯಡಿ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವುದಾಗಿ ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.
ದೂರುದಾರ ಶಿವಕುಮಾರ್ 10 ಕಳೆದ ವರ್ಷಗಳಿಂದ ರಿಯಲ್ ಎಸ್ಟೇಟ್ ಕೆಲಸ ಮಾಡಿಕೊಂಡಿದ್ದಾರೆ. ಇವರ ಸಂಬಂಧಿ ಪುಟ್ಟಸ್ವಾಮಿ ಅವರಿಗೆ ಸೇರಿದ ನಿವೇಶನದ ಸುತ್ತ ನಿರ್ಮಾಣವಾಗಿದ್ದ ಗೋಡೆ ಒಡೆದು ಕೆಲ ವ್ಯಕ್ತಿಗಳು ನಿವೇಶನ ತನ್ನದೆಂದು ಅತಿಕ್ರಮಕ್ಕೆ ಮುಂದಾಗಿದ್ದರು. ಈ ಬಗ್ಗೆ ಅಸಮಾಧಾನಗೊಂಡ ಪುಟ್ಟಸ್ವಾಮಿ, ಮೋಸದಿಂದ ನಿವೇಶನ ಮಾರಾಟ ಮಾಡಿಸಿರುವುದಾಗಿ ಶಿವಕುಮಾರ್ ವಿರುದ್ಧ ಸುಬ್ರಮಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಬಳಿಕ ತಪ್ಪು ತಿಳುವಳಿಕೆಯಿಂದ ದೂರು ನೀಡಿದ್ದು, ಪ್ರಕರಣವನ್ನು ಹಿಂಪಡೆಯುವುದಾಗಿ ಪುಟ್ಟಸ್ವಾಮಿ ಒಪ್ಪಿಕೊಂಡಿದ್ದರು ಎಂದು ದೂರಿನಲ್ಲಿ ಶಿವಕುಮಾರ್ ತಿಳಿಸಿದ್ದಾರೆ.
ನಿವೇಶನದ ಸುತ್ತ ಗೋಡೆ ಒಡೆದು ಹಾಕಿರುವವರ ವಿರುದ್ದ ಕ್ರಮ ಕೈಗೊಳ್ಳುವಂತೆ ತನಿಖಾಧಿಕಾರಿಯಾಗಿದ್ದ ಪಿಎಸ್ಐ ಬೈರಪ್ಪ ಅವರಿಗೆ ಮನವಿ ಮಾಡಿದ್ದೆ. ಈ ಕುರಿತು ಪಿಎಸ್ಐ ಮುರುಳಿ ಮೋಹನ್ ಅವರ ನಂಬರ್ ನೀಡಿ ಸಂಪರ್ಕಿಸುವಂತೆ ತಿಳಿಸಿದ್ದರು. ಕೆಂಗೇರಿ ಬಳಿಯ ಹೊಟೇಲ್ ವೊಂದರಲ್ಲಿ ಮುರುಳಿ ಅವರನ್ನ ಭೇಟಿ ಮಾಡಿದ್ದರು. ನಿವೇಶನ ವಿಚಾರವಾಗಿ ಭೈರಪ್ಪ ಎಲ್ಲವನ್ನು ಹೇಳಿದ್ದಾರೆ. ನಿವೇಶನವನ್ನು ನಿಮ್ಮ ಸುಪರ್ದಿಗೆ ಕೊಡಿಸಲು ಸಹಾಯ ಮಾಡುತ್ತೇನೆ. ಇದಕ್ಕಾಗಿ 10 ಲಕ್ಷ ನೀಡುವಂತೆ ಡಿಮ್ಯಾಂಡ್ ಮಾಡಿದ್ದು, ಅಡ್ವಾನ್ಸ್ 5 ಲಕ್ಷ ನೀಡುವಂತೆ ಒತ್ತಾಯಿಸಿದ್ದರು'' ಎಂದು ದೂರಿನಲ್ಲಿ ಶಿವಕುಮಾರ್ ಉಲ್ಲೇಖಿಸಿದ್ದಾರೆ. ಸದ್ಯ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವುದಾಗಿ ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.
In a shocking case of alleged corruption, the Lokayukta officials in Bengaluru have registered an FIR against two police sub-inspectors — Bhairappa from Subramanyapura Police Station and Muruli Mohan from Kengeri Police Station — for allegedly demanding a bribe of ₹10 lakh in connection with a land dispute.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 11:22 am
HK News Desk
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
14-10-25 06:39 pm
Mangalore Correspondent
ಬಿ.ಸಿ ರೋಡ್ ; ಹೆದ್ದಾರಿ ಬದಿ ಕಾರು ರಿಪೇರಿ ಮಾಡುತ್...
14-10-25 05:46 pm
ಗಾಲ -2025 ಈಜು ಸ್ಪರ್ಧೆ ; ವೀ ಒನ್ ಆಕ್ವಾ ಈಜು ತಂಡಕ...
14-10-25 03:40 pm
Raju Talikote Death: ಹಿರಿಯ ರಂಗಭೂಮಿ ಕಲಾವಿದ, ಹಾ...
13-10-25 07:47 pm
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
14-10-25 04:44 pm
HK News Desk
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm