ಬ್ರೇಕಿಂಗ್ ನ್ಯೂಸ್
03-08-25 09:30 pm HK News Desk ಕರ್ನಾಟಕ
ಬಾಗಲಕೋಟೆ, ಆ.3 : ನಮಗೆ ಅರ್ಹತೆ ಇದ್ದರೆ, ಸರದಿ ಬಂದರೆ ಮುಖ್ಯಮಂತ್ರಿ ಆಗುತ್ತೇವೆ. ನಾನು 1980ರಲ್ಲೇ ಸಿಎಂ ಆಗಬೇಕಿತ್ತು. ಆದರೆ ಆ ಸಮಯದಲ್ಲಿ ಸಿಎಂ ಸ್ಥಾನ ಸಿಗಲಿಲ್ಲ. ನಾನು ಸಿಎಂ ಆಗಲು 10 ವರ್ಷ ಕಾದಿದ್ದೆ ಎಂದು ಮಾಜಿ ಸಿಎಂ, ಹಿರಿಯ ಕಾಂಗ್ರೆಸ್ ಮುಖಂಡ ವೀರಪ್ಪ ಮೊಯ್ಲಿ ಹೇಳಿದ್ದಾರೆ.
ಪಕ್ಷವನ್ನು ಅಧಿಕಾರಕ್ಕೆ ತಂದರೂ ಸಿಎಂ ಅವಕಾಶ ಕೈತಪ್ಪಿತು ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, 1979 ರಿಂದ 1995 ರವರೆಗೆ ನಾನೇ ಪಕ್ಷದ ಸಂಘಟನೆ ಮಾಡಿದ್ದೆ. ಆದರೆ ಆಗ ನನ್ನ ಬದಲು ಆರ್ ಗುಂಡೂರಾವ್ ಸಿಎಂ ಆದರು, ನಂತರ ಬಂಗಾರಪ್ಪ ಸಿಎಂ ಆದರು. ಅದಕ್ಕಿಂತ ಮೊದಲು ವೀರೇಂದ್ರ ಪಾಟಿಲ್ ಸಿಎಂ ಆದರು. ಹಾಗಂತ ನನಗೆ ಸಿಗಲಿಲ್ಲ ಎಂದು ನಾನು ಪಶ್ಚಾತ್ತಾಪ ಪಡಲಿಲ್ಲ ಎಂದು ಹೇಳುವ ಮೂಲಕ ಖರ್ಗೆ ಮಾತಿಗೆ ಟಾಂಗ್ ಇಟ್ಟಿದ್ದಾರೆ.
ನನ್ನಿಂದಲೇ ಪಕ್ಷದ ಅಧಿಕಾರಕ್ಕೆ ಬಂತು ಎಂದು ಹೇಳಲು ಆಗುವುದಿಲ್ಲ. ಎಷ್ಟು ವರ್ಷ ಸಿಎಂ ಆಗಿದ್ದೇವೆ ಎನ್ನುವುದು ಮುಖ್ಯವಲ್ಲ, ಏನು ಕೆಲಸ ಮಾಡಿದ್ದೇವೆ ಎನ್ನುವುದು ಮುಖ್ಯ ಎಂದು ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ಅವರಿಗೂ ಕಿವಿಮಾತು ಹೇಳಿದ್ದಾರೆ.
ರಾಜಕೀಯದಲ್ಲಿ ಅಧಿಕಾರಕ್ಕೆ ಹಂಬಲಿಸುವುದು, ಪೈಪೋಟಿ ಇರುವುದು ಸಾಮಾನ್ಯ. ಕೆಲವರಿಗೆ ಸಿಗುತ್ತದೆ ಕೆಲವರಿಗೆ ಸಿಗುವುದಿಲ್ಲ. ಸಾಯುವವರೆಗೂ ಕೆಲವರಿಗೆ ಮುಖ್ಯಮಂತ್ರಿ ಆಗಿ ಅಧಿಕಾರ ಸಿಗುವುದಿಲ್ಲ. ಆದರೆ ಆಧಿಕಾರವನ್ನು ವಾಮಮಾರ್ಗದ ಮೂಲಕ ಸಾಧಿಸಬಾರದು ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದರು.
ಈಗ ಸಿಎಂ ಸಿದ್ದರಾಮಯ್ಯ ನಾನೇ ಐದು ವರ್ಷ ಆಡಳಿತ ಮಾಡುತ್ತೇನೆ ಎನ್ನುತ್ತಾರೆ. ಅವರಿಗೆ ಆ ಆಸೆ ಇದೆ, ಅದರ ಬಗ್ಗೆ ತಪ್ಪು ತಿಳಿದುಕೊಳ್ಳಲು ಆಗುವುದಿಲ್ಲ. ಡಿಸಿಎಂ ಆದವರು ಸಿಎಂ ಆಗಬೇಕು ಅಂತ ಆಸೆ ಪಡ್ತಾರೆ. ಆದರೆ ಕೆಲವೊಂದು ಸಾರಿ ಡೆಪ್ಯುಟಿ ಸಿಎಂ ಆದವರು ಡಿಸಿಎಂ ಆಗಿಯೇ ನಿವೃತ್ತಿಯಾಗಬಹುದು. ನನಗೆ ಸಿಗಲಿಲ್ಲ ಅಂತ ಪಶ್ಚಾತ್ತಾಪ ಪಡುವುದು ಬೇಡ ಎಂದು ತಿಳಿಸಿದರು.
Senior Congress leader and former Chief Minister Veerappa Moily has responded to Mallikarjun Kharge’s recent comments about being denied the Chief Minister’s post despite bringing the party to power. Moily stated that in politics, power does not always come to those who expect it, and one must not regret such missed opportunities.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm