ಬ್ರೇಕಿಂಗ್ ನ್ಯೂಸ್
05-08-25 12:44 pm HK News Desk ಕರ್ನಾಟಕ
ತುಮಕೂರು, ಆ 04 : ಬರೋಬ್ಬರಿ 19 ನವಿಲುಗಳು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಆಘಾತಕಾರಿ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಹನುಮಂತಪುರ ಗ್ರಾಮದಲ್ಲಿ ನಡೆದಿದೆ. ರೈತರು ಬೆಳ್ಳಂ ಬೆಳಗ್ಗೆ ತಮ್ಮ ಹೊಲಗದ್ದೆಗಳಿಗೆ ಹೋದ ಸಂದರ್ಭದಲ್ಲಿ ಎಲ್ಲೆಂದರಲ್ಲಿ ನವಿಲುಗಳು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.
ರೈತರು ನವಿಲುಗಳು ಮೃತಪಟ್ಟಿರುವ ಬಗ್ಗೆ ತಕ್ಷಣವೇ ಸಂಬಂಧಪಟ್ಟ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಬಳಿಕ ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಅಧಿಕಾರಿಗಳು ನವಿಲುಗಳ ಮೃತದೇಹವನ್ನು ಪ್ರಾಥಮಿಕ ಪರೀಕ್ಷೆಗಾಗಿ ಸ್ಥಳೀಯ ಪಶುಪಾಲನ ಇಲಾಖೆ ವೈದ್ಯಾಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.
ಗ್ರಾಮಸ್ಥರ ಪ್ರಕಾರ ಕೆರೆ ಕೋಡಿ ಜಲಪಾತದ ಬಳಿ ಆಗಸ್ಟ್ 2 ರಂದು ನವಿಲಿನ ಮೊದಲ ಕಳೇಬರ ಪತ್ತೆಯಾಗಿತ್ತು. ಬಳಿಕ ಐದು ಗಂಡು ಮತ್ತು 14 ಹೆಣ್ಣು ನವಿಲುಗಳ ಕಳೇಬರಗಳು ಹೊಲಗಳಲ್ಲಿ ಅಲ್ಲಲ್ಲಿ ಬಿದ್ದಿರುವುದು ಕಂಡುಬಂದಿದೆ. ಆಗಸ್ಟ್ 1 ರ ರಾತ್ರಿ ನವಿಲುಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿವೆ. ನವಿಲುಗಳ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ನವಿಲುಗಳಿಗೆ ವಿಷ ಇಟ್ಟು ಸಾಯಿಸಿರುವ ಅನುಮಾನ ಬಲವಾಗಿ ವ್ಯಕ್ತವಾಗಿದೆ.
ಪ್ರಕರಣದ ತನಿಖೆಯನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ನೇತೃತ್ವದ ತಂಡ ನಡೆಸಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, 'ನವಿಲುಗಳ ಸಾವಿನ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಸಾವಿಗೆ ಕೀಟನಾಶಕ ಸೇವನೆ ಕಾರಣ ಎಂಬ ಅಂಶ ಮಾಧ್ಯಮಗಳಲ್ಲಿ ವರದಿಯಾಗಿದೆ. ನವಿಲುಗಳನ್ನು ಸಾಯಿಸಲೆಂದೇ ವಿಷ ಹಾಕಲಾಗಿತ್ತೆ ಅಥವಾ ಬೆಳೆಗಳಿಗೆ ಸಿಂಪಡಿಸಿದ ಕೀಟನಾಶಕಯುಕ್ತ ಫಸಲು ತಿಂದು ನವಿಲುಗಳು ಮೃತಪಟ್ಟಿವೆಯೇ ಎಂಬ ಬಗ್ಗೆ ತನಿಖೆ ನಡೆಸಿ, ಐದು ದಿನಗಳಲ್ಲಿ ವರದಿ ಸಲ್ಲಿಸಲು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಸೂಚಿಸಲಾಗಿದೆ' ಎಂದರು.
ಇತ್ತೀಚೆಗೆ ಚಾಮರಾಜನಗರದಲ್ಲಿ ಕೀಟ ನಾಶಕ ಬಳಸಿ ಐದು ಹುಲಿಗಳ ಕೊಲೆ:
ಚಾಮರಾಜನಗರದ ಹನೂರು ತಾಲೂಕಿನ ಮೀಣ್ಯಂ ಸಮೀಪದ ಮಲೆಮಹದೇಶ್ವರ ವನ್ಯಜೀವಿಧಾಮದಲ್ಲಿ ಜೂನ್ 26 ರಂದು ಐದು ಹುಲಿಗಳು ಸಾವನ್ನಪ್ಪಿದ್ದವು. ತಾಯಿ ಹುಲಿ ಮತ್ತು 4 ಮರಿಗಳು ಅಸುನೀಗಿದ್ದವು. ಹುಲಿಗಳು ಮೃತಪಟ್ಟ ಅಣತಿ ದೂರದಲ್ಲಿ ಹಸುವೊಂದರ ಕಳೇಬರ ಪತ್ತೆಯಾಗಿತ್ತು. ಬಳಿಕ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಉನ್ನತ ಮಟ್ಟದ ತನಿಖಾ ತಂಡ ರಚಿಸಿದ್ದರು. ಜೊತೆಗೆ ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯಲೋಪ ಮತ್ತು ನಿರ್ಲಕ್ಷ್ಯ ತೋರಿದ ಆರೋಪದ ಮೇರೆಗೆ ಹಲವರನ್ನು ಸಚಿವ ಈಶ್ವರ ಬಿ ಖಂಡ್ರೆ ಅಮಾನತುಗೊಳಿಸಿದ್ದರು.
In a shocking incident, as many as 19 peacocks have been found dead under mysterious circumstances in Hanumanthapura village of Madhugiri taluk, Tumakuru district. Early in the morning, local farmers discovered the lifeless birds scattered across their fields.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
05-08-25 10:39 pm
Bangalore Correspondent
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm