ಬ್ರೇಕಿಂಗ್ ನ್ಯೂಸ್
10-08-25 06:27 pm Bangalore Correspondent ಕರ್ನಾಟಕ
ಬೆಂಗಳೂರು, ಆ.10 : ಬೆಂಗಳೂರು ಮೆಟ್ರೋ ಯೋಜನೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ನಡೆಯುವ ಯೋಜನೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶೇ. 50 ಅನುದಾನ ಕೊಟ್ಟು ಮಾಡುವಂತದ್ದು. ಆದರೆ ಇಂದು ಉದ್ಘಾಟನೆಗೊಂಡ ಯೋಜನೆಗೆ ರಾಜ್ಯ ಸರ್ಕಾರವೇ ಹೆಚ್ಚು ಖರ್ಚು ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ಮೋದಿ ಸಮ್ಮುಖದಲ್ಲೇ ಮಾತಿನ ದಾಳ ಎಸೆದಿದ್ದಾರೆ.
ಮೆಟ್ರೋ ಹಳದಿ ಮಾರ್ಗದ ಯೋಜನೆಗೆ ಚಾಲನೆ ಕೊಟ್ಟ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರವೇ ಹಣಕಾಸು ಹೆಚ್ಚು ನೀಡಿದ್ದು ಎಂದು ಪ್ರಧಾನಿ ಮೋದಿಗೆ ತಿರುಗೇಟು ನೀಡುವಂತೆ ಮಾತನಾಡಿದರು. 2005ರಲ್ಲಿ ಮನಮೋಹನ್ ಸಿಂಗ್ ಪ್ರಧಾನಿ ಆಗಿದ್ದಾಗ ಬೆಂಗಳೂರು ಮೆಟ್ರೋ ಯೋಜನೆ ಆರಂಭವಾಗಿದ್ದು ಎಂಬುದನ್ನೂ ನೆನಪಿಸಿದ ಸಿದ್ದರಾಮಯ್ಯ, ಮೆಟ್ರೋ ಯೋಜನೆಗೆ ಕೇಂದ್ರ ಸರ್ಕಾರ ತಾಂತ್ರಿಕ ನೆರವು ಮತ್ತು ಹಣಕಾಸಿನ ನೆರವನ್ನು ನೀಡುತ್ತದೆ. ಹಾಗಾಗಿ ಇದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜಂಟಿ ಕಾರ್ಯಕ್ರಮ ಎಂದಾಗುತ್ತದೆ. ಇದಕ್ಕೆ ರಾಜ್ಯ ಸರ್ಕಾರ 25,387 ಕೋಟಿ ರೂಪಾಯಿ ಖರ್ಚು ಮಾಡಿದೆ. ಕೇಂದ್ರ ಸರ್ಕಾರ ಕೊಟ್ಟದ್ದು ಕೇವಲ 7,468 ಕೋಟಿ ರೂಪಾಯಿ ಮಾತ್ರ. ಕೇಂದ್ರ ಸರ್ಕಾರ ಸಾಲ ಕೊಡುತ್ತದೆ. ಆ ಸಾಲವನ್ನು ನಾವು ಈಗಾಗಲೇ ಬಡ್ಡಿ ಸಮೇತ 3,987 ಕೋಟಿ ರೂಪಾಯಿ ಸಾಲ ಮರು ಪಾವತಿ ಮಾಡಿದ್ದೇವೆ ಎಂದರು.
ಇವತ್ತು ಬೆಂಗಳೂರಿನಿಂದ ಬೆಳಗಾವಿಗೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಉದ್ಘಾಟನೆಗೊಂಡಿದೆ. ಅದೇ ರೀತಿ ಅಮೃತ್ ಸರ್ - ಮಾತಾ ವೈಷ್ಣೋ ದೇವಿ ಹಾಗೂ ಪುಣೆ - ನಾಗಪುರ್ ವಂದೇ ಭಾರತ್ ಕೂಡ ಉದ್ಘಾಟನೆ ಆಗಿದೆ. ನಾವು 4ನೇ ಹಂತದ ಮೆಟ್ರೋ ಯೋಜನೆಗೆ ಡಿಪಿಆರ್ ಸಿದ್ದಪಡಿಸಿ ಕೇಂದ್ರಕ್ಕೆ ಕೊಟ್ಟಿದ್ದೇವೆ. ಕೇಂದ್ರ ಸರ್ಕಾರ ಅದಕ್ಕೆ ಅನುಮೋದನೆ ಕೊಟ್ಟರೆ 2030ರೊಳಗೆ ಆ ಕೆಲಸ ಪೂರ್ಣಗೊಳಿಸಿ 30 ಲಕ್ಷ ಜನರಿಗೆ ನೆರವಾಗಲು ಸಾಧ್ಯವಿದೆ. ಕೇಂದ್ರ ಸರ್ಕಾರ ಮಹಾರಾಷ್ಟ್ರ, ಗುಜರಾತ್ ರಾಜ್ಯಗಳಿಗೆ ನೀಡುವ ಆದ್ಯತೆಯನ್ನು ಸ್ವಲ್ಪ ಕರ್ನಾಟಕ ರಾಜ್ಯಕ್ಕೂ ನೀಡಿ ಯೋಜನೆಗೆ ಅನುಮೋದನೆ ನೀಡಬೇಕು ಎಂದು ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಸಮ್ಮುಖದಲ್ಲಿ ಮಾತಿನಲ್ಲೇ ತಿವಿದರು.
ಮೆಟ್ರೋ ರೈಲು ಯೋಜನೆಯನ್ನು ಕೇಂದ್ರದ್ದು ಎನ್ನುವ ರೀತಿ ಬಿಂಬಿಸುತ್ತಿರುವ ಪ್ರಯತ್ನಕ್ಕೆ ಕಾಂಗ್ರೆಸ್ ಸರ್ಕಾರದ ಸಿಎಂ ಸಿದ್ದರಾಮಯ್ಯ ಗಟ್ಟಿ ಸ್ವರದಲ್ಲಿಯೇ ಗುಟುರು ಹಾಕಿದ್ದಾರೆ.
In a rare on-stage political jibe, Karnataka Chief Minister Siddaramaiah reminded Prime Minister Narendra Modi that the state government has contributed more funds than the Centre for the newly inaugurated Bengaluru Metro Yellow Line, urging equal priority for Karnataka as given to Gujarat and Maharashtra.
11-08-25 11:18 am
Bangalore Correspondent
ಮುಸ್ಲಿಂ ಯುವತಿಯರನ್ನ ಮದುವೆಯಾದ್ರೆ 5 ಲಕ್ಷ ರೂ. ಕೊಡ...
10-08-25 09:12 pm
ಗುಜರಾತ್, ಮಹಾರಾಷ್ಟ್ರದಂತೆ ನಮಗೂ ಆದ್ಯತೆ ಕೊಡಿ, ಮೆಟ...
10-08-25 06:27 pm
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
11-08-25 11:49 am
Mangalore Correspondent
Kudla Rampage YouTuber, Ajay Anchan Case: ಬೈಕ...
11-08-25 11:38 am
ಹೊಸ್ತಿಲು ಬರೆದು, ಪಾತ್ರೆ ತೊಳೆದು, ದೇವರ ಸ್ತೋತ್ರ ಹ...
10-08-25 04:32 pm
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm