ಬ್ರೇಕಿಂಗ್ ನ್ಯೂಸ್
10-08-25 09:12 pm HK News Desk ಕರ್ನಾಟಕ
ಕೊಪ್ಪಳ, ಆ.10: ಅನ್ಯಧರ್ಮದ ಯುವತಿಯನ್ನು ಹಿಂದೂ ಯುವಕ 30 ವರ್ಷದ ಗವಿ ಸಿದ್ದಪ್ಪ ನಾಯಕ್ ಎಂಬ ಯುವಕ ಪ್ರೀತಿಸುತ್ತಿದ್ದ ಎಂಬುದಕ್ಕೆ ಮುಸ್ಲಿಂ ಯುವಕನೊಬ್ಬ ಬರ್ಬರವಾಗಿ ಕೊಲೆ ಮಾಡಿರುವ ಪ್ರಕರಣ ಇತ್ತೀಚೆಗೆ ಬೆಳಕಿಗೆ ಬಂದಿತ್ತು. ಸಾದಿಕ್ ಎಂಬಾತ ಗವಿಸಿದ್ದಪ್ಪನನ್ನು ಕೊಲೆ ಮಾಡಿ ತಾನೇ ಕೃತ್ಯ ಎಸಗಿದ್ದಾಗಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ. ಇದೀಗ ಕೊಲೆಯಾದ ಗವಿಸಿದ್ದಪ್ಪನ ಮನೆಗೆ ಭೇಟಿ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಬಸನಗೌಡ ಪಾಟೀಲ ಯತ್ನಾಳ್, ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಮುಸ್ಲಿಂ ಯುವತಿಯರನ್ನ ಮದುವೆಯಾದರೆ 5 ಲಕ್ಷ ನೀಡುವುದಾಗಿ ಕರೆ ನೀಡಿದ್ದಾರೆ.
ಕೊಪ್ಪಳ ಜಿಲ್ಲೆಯಲ್ಲಿ ಗವಿಸಿದ್ದಪ್ಪ ನಾಯಕ್ ಎಂಬ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊಲೆಯಾದ ಗವಿಸಿದ್ದಪ್ಪನ ಮನೆಗೆ ಭೇಟಿ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಯತ್ನಾಳ್, ಈ ಘಟನೆಯನ್ನು "ಲವ್ ಜಿಹಾದ್" ಎಂದು ಬಣ್ಣಿಸಿ, ಸರ್ಕಾರವು ಹಿಂದುಗಳಿಗೆ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
ಮುಸ್ಲಿಂ ಯುವತಿಯರನ್ನ ಮದುವೆಯಾದ್ರೆ 5 ಲಕ್ಷ ರೂಪಾಯಿ; ಯತ್ನಾಳ್
ಕೊಲೆಯಾದ ಗವಿಸಿದ್ದಪ್ಪ ನಾಯಕ್ ಮನೆಗೆ ಭೇಟಿಯಾದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಯತ್ನಾಳ್, ಮುಸ್ಲಿಂ ಯುವತಿಯರನ್ನು ಮದುವೆಯಾದ್ರೆ 5 ಲಕ್ಷ ನೀಡುವುದಾಗಿ ಘೋಷಿಸಿದ್ದಾರೆ. ಅಲ್ಲದೇ ಇದಕ್ಕಾಗಿ ಅಭಿಯಾನವನ್ನೂ ಆರಂಭಿಸುತ್ತೇವೆ ಎಂದು ಹೇಳಿದ್ದಾರೆ.
ಹಿಂದುಗಳಿಗೆ ರಕ್ಷಣೆಯೇ ಇಲ್ಲ; ಯತ್ನಾಳ್
ಯತ್ನಾಳ್ ಈ ಘಟನೆಯನ್ನು "ಲವ್ ಜಿಹಾದ್" ಎಂದು ಕರೆದಿದ್ದಾರೆ. "ಹಿಂದುಗಳನ್ನು ಕೊಲೆ ಮಾಡುವ ಮನಸ್ಥಿತಿ ಮುಸ್ಲಿಂರಲ್ಲಿದೆ" ಎಂದು ಆರೋಪಿಸಿರುವ ಅವರು, ರಾಜ್ಯ ಸರ್ಕಾರವು ಅಲ್ಪಸಂಖ್ಯಾತರಿಗೆ ಮಾತ್ರ ರಕ್ಷಣೆ ನೀಡುತ್ತಿದೆ ಎಂದು ಕಿಡಿಕಾರಿದ್ದಾರೆ. "ಈ ಸರ್ಕಾರದಲ್ಲಿ ಹಿಂದುಗಳಿಗೆ ರಕ್ಷಣೆ ಇಲ್ಲ" ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮಸೀದಿಯ ಮುಂದೆಯೇ ಗವಿಸಿದ್ದಪ್ಪ ಕೊಲೆಯಾಗಿದೆ. ಆದರೆ ಈ ಸಂದರ್ಭದಲ್ಲಿ ಯಾರೂ ಯಾಕೆ ತಡೆಯಲಿಲ್ಲ. ರೀಲ್ಸ್ ನಲ್ಲಿ ಮಚ್ಚು ತೋರಿಸಿದ್ದಾನೆ, ಈಗಾಗಲೇ ನಾಲ್ಕು ಜನರನ್ನು ಬಂಧಿಸಿದ್ದಾರೆ. ಆ ಹುಡುಗಿಯನ್ನೂ ಅರೆಸ್ಟ್ ಮಾಡಬೇಕು. ಜಿಲ್ಲಾ ಉಸ್ತುವಾರಿ ಸಚಿವರು ಕೇವಲ ಸಾಂತ್ವಾನ ಹೇಳಿದರೆ ಸಾಲದು ಕುಟುಂಬದ ನೆರವಿಗೆ ಬರಬೇಕು ಎಂದು ಆಕ್ರೋಶ ಹೊರಹಾಕಿದ್ದಾರೆ.
ಸಾಬರ ಸರ್ಕಾರವಾಗಿಬಿಟ್ಟಿದೆ ; ಯತ್ನಾಳ್
ಯತ್ನಾಳ್ ಈ ಘಟನೆಗೆ ಸರ್ಕಾರವೇ ಹೊಣೆ ಎಂದು ಆರೋಪಿಸಿದ್ದಾರೆ. "ಸರ್ಕಾರವು ಸಾಬರ ಸರ್ಕಾರವಾಗಿದೆ, ಮಚ್ಚು ತೆಗೆದುಕೊಂಡು ಓಡಾಡುವವರಿಗೆ ಬೆಂಬಲವಿದೆ" ಎಂದು ಟೀಕಿಸಿದ್ದಾರೆ. "ನನ್ನ ಫೋಟೊ ಹಿಡಿದವರಿಗೆ ಪ್ರಾಣ ಹೋದರೆ ಭಯಪಡುತ್ತಾರೆ, ಆದರೆ ಹಿಂದುಗಳಾರೂ ಭಯಪಡುವುದಿಲ್ಲ" ಎಂದು ಹೇಳಿದ್ದಾರೆ.
BJP MLA from Vijayapura, Basanagouda Patil Yatnal, has sparked controversy by announcing ₹5 lakh as an incentive to Hindu men who marry Muslim women, following his visit to the family of Gavisiddappa Naik – a 30-year-old Hindu man recently murdered in Koppal district.
11-08-25 11:18 am
Bangalore Correspondent
ಮುಸ್ಲಿಂ ಯುವತಿಯರನ್ನ ಮದುವೆಯಾದ್ರೆ 5 ಲಕ್ಷ ರೂ. ಕೊಡ...
10-08-25 09:12 pm
ಗುಜರಾತ್, ಮಹಾರಾಷ್ಟ್ರದಂತೆ ನಮಗೂ ಆದ್ಯತೆ ಕೊಡಿ, ಮೆಟ...
10-08-25 06:27 pm
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
11-08-25 11:49 am
Mangalore Correspondent
Kudla Rampage YouTuber, Ajay Anchan Case: ಬೈಕ...
11-08-25 11:38 am
ಹೊಸ್ತಿಲು ಬರೆದು, ಪಾತ್ರೆ ತೊಳೆದು, ದೇವರ ಸ್ತೋತ್ರ ಹ...
10-08-25 04:32 pm
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm