ಬ್ರೇಕಿಂಗ್ ನ್ಯೂಸ್
15-08-25 09:47 pm HK News Desk ಕರ್ನಾಟಕ
ಕಾರವಾರ, ಆ.15 : ವಿದೇಶಿಗರು ಭಾರತದ ಪ್ರವಾಸಿ ತಾಣಗಳಿಗೆ ಭೇಟಿ ನೀಡುವುದು, ಕೆಲವರು ಇಲ್ಲಿಯೇ ಕೆಲವು ತಿಂಗಳ ಕಾಲ ನೆಲೆಸುವುದು, ಇಲ್ಲಿಯ ಸಂಸ್ಕೃತಿಯನ್ನು ಕಲಿತು ಪಾಲಿಸುವುದನ್ನು ಕೇಳಿದ್ದೇವೆ. ಇಂಟರ್ನ್ ಶಿಪ್ ಉದ್ದೇಶಕ್ಕಾಗಿ ಫ್ರಾನ್ಸ್ ನಿಂದ ಬಂದಿದ್ದ ವಿದೇಶಿಗರ ತಂಡವೊಂದು ಬೈಂದೂರಿನಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಶೌಚಾಲಯ ಕಟ್ಟಿಕೊಟ್ಟು ಸುದ್ದಿಯಾಗಿದ್ದಾರೆ.
ಫ್ರಾನ್ಸ್ ಮೂಲದ ಪ್ರಜೆಗಳು ಇಂಟರ್ನ್ಶಿಪ್ ಉದ್ದೇಶಕ್ಕಾಗಿ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕನ್ಯಾನ ಗ್ರಾಮದ ಕೂಡ್ಲು ಸರಕಾರಿ ಶಾಲೆಗೆ ಬಂದಿದ್ದಾರೆ. ವಿದ್ಯಾರ್ಥಿಗಳಿಗೆ ಪಾಠ ಪ್ರವಚನ ಮಾಡುತ್ತ ಪರಿಸರ ಸ್ವಚ್ಛತೆಯನ್ನು ಹೇಳಿಕೊಡುತ್ತಾ ಎರಡು ತಿಂಗಳ ಕಾಲ ಇಲ್ಲಿ ಕಳೆದಿದ್ದಾರೆ. ಕೊನೆಗೆ ಇಲ್ಲಿಂದ ತೆರಳುವ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಏನಾದರೂ ಮಾಡಿಕೊಡಬೇಕೆಂದು ಹೇಳಿ, ಅಲ್ಲಿಗೆ ಅಗತ್ಯವಾಗಿದ್ದ ಶೌಚಾಲಯವನ್ನು ಕೊಡುಗೆಯಾಗಿ ನೀಡಿದ್ದಾರೆ. ಅಲ್ಲದೆ, ಶೌಚಾಲಯ ಕಟ್ಟಡದ ನಿರ್ಮಾಣ ಕೆಲಸಕ್ಕೂ ಕೈಜೋಡಿಸಿದ್ದಾರೆ. ಸದ್ಯ ಇವರು ಮೇಸ್ತ್ರಿ ಕೆಲಸ ಮಾಡುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ವಿಡಿಯೋವನ್ನು elkaani ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಲಾಗಿದೆ. ಶೀರ್ಷಿಕೆಯಲ್ಲಿ ಫ್ರಾನ್ಸ್ ದೇಶದಿಂದ ಇಂಟರ್ನ್ಶಿಪ್ಗಾಗಿ ನಮ್ಮ ಊರಿಗೆ ಬಂದವರು. ಸುಮಾರು ಎರಡು ತಿಂಗಳ ಕಾಲ ಬೈಂದೂರು ವಲಯದ ಗ್ರಾಮೀಣ ಪ್ರದೇಶದ ಹಳ್ಳಿಗಾಡಿನಲ್ಲಿ ಇದ್ದರು. ಕೂಡ್ಲು ಸರಕಾರಿ ಶಾಲಾ ವಿದ್ಯಾರ್ಥಿಗಳ ಜೊತೆ ಆಟಪಾಠದಲ್ಲಿ ಭಾಗಿಯಾಗಿದ್ದರು. ಕೊನೆಯಲ್ಲಿ ವಿದ್ಯಾರ್ಥಿಗಳ ಅಗತ್ಯಕ್ಕೆ ಸ್ಪಂದಿಸಿದ್ದಾರೆ. ಮಕ್ಕಳಿಗೆ ಪಾಠ ಪ್ರವಚನ ಮಾಡಿದ ಈ ಫ್ರಾನ್ಸ್ ದೇಶದ ನಾಗರೀಕರು ಇಲ್ಲಿನ ಮಕ್ಕಳಿಗೆ ಅತೀ ಅಗತ್ಯವಾಗಿ ಬೇಕಿದ್ದ ಶೌಚಾಲಯವನ್ನು ಕೊಡುಗೆಯಾಗಿ ನೀಡಿದ್ದಾರೆ ಎಂದು ಬರೆಯಲಾಗಿದೆ.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm