ಬ್ರೇಕಿಂಗ್ ನ್ಯೂಸ್
21-08-25 12:58 pm Bangalore Correspondent ಕರ್ನಾಟಕ
ಬೆಂಗಳೂರು, ಆ.21 : ಮಂಗಳೂರು ನಗರದಲ್ಲಿ ಹೊಸದಾಗಿ ಎಲೆಕ್ಟ್ರಿಕ್ ಆಟೋಗಳ ಕಾರ್ಯಾಚರಣೆಗೆ ಅನುಮತಿ ನೀಡದಂತೆ ಮಂಗಳೂರು ಆಟೋ ರಿಕ್ಷಾ ಚಾಲಕರು ಹಾಗೂ ಮಾಲೀಕರ ಸಂಘ ಸಲ್ಲಿಸಿರುವ ಮನವಿಯನ್ನು ಎರಡು ವಾರಗಳಲ್ಲಿ ಕಾನೂನು ರೀತ್ಯ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಹೈಕೋರ್ಟ್ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ನಿರ್ದೇಶಿಸಿದೆ.
ತಮ್ಮ ಮನವಿ ಪತ್ರ ಪರಿಗಣಿಸದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕ್ರಮವನ್ನು ಆಕ್ಷೇಪಿಸಿ ಮಂಗಳೂರು ಆಟೋ ರಿಕ್ಷಾ ಚಾಲಕರ ಮತ್ತು ಮಾಲೀಕರ ಸಂಘ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ಏಕಸದಸ್ಯ ಪೀಠ ಈ ಸೂಚನೆ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರ್ಮಿಟ್ ಪಡೆಯದೆ ಎಲೆಕ್ಟಿಕ್ ಆಟೋ ರಿಕ್ಷಾಗಳು ಕಾರ್ಯ ನಿರ್ವಹಿಸಲು ಅನುಮತಿ ನೀಡಿ 2024ರ ಜು.26ರಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಇದರಿಂದ ಮಂಗಳೂರಿನಲ್ಲಿ ಎಲೆಕ್ನಿಕ್ ವಾಹನಗಳ ಸಂಖ್ಯೆ ಹೆಚ್ಚಾಗಿ ಸಂಚಾರ ದಟ್ಟಣೆ ಉಂಟಾಗಿದೆ. ಈಗಾಗಲೇ ಕಾರ್ಯಾಚರಣೆಯಲ್ಲಿದ್ದ ಆಟೋ ರಿಕ್ಷಾಗಳಿಗೆ ನಿಲುಗಡೆಗೆ ಸ್ಥಳಾವಕಾಶದ ಕೊರತೆ ಎದುರಾಗಿದೆ.
2023ರಲ್ಲಿ 7,629ರಷ್ಟಿದ್ದ ಆಟೋರಿಕ್ಷಾ ಸಂಖ್ಯೆ ಜಿಲ್ಲಾಧಿಕಾರಿ ಆದೇಶದ ನಂತರ ಅಗತ್ಯ ಪ್ರಮಾಣಕ್ಕಿಂತ ಹತ್ತು ಪಟ್ಟು ಹೆಚ್ಚಾಗಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿತ್ತು.
ಅಲ್ಲದೆ 2025ರ ಜು.9ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಆಟೋ ಚಾಲಕರ ಸಂಘವು ಮನವಿ ಪತ್ರ ನೀಡಿ, ಹೊಸ ಎಲೆಕ್ಟ್ರಿಕ್ ಆಟೋ ರಿಕ್ಷಾಗಳು ಮಂಗಳೂರು ನಗರ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ಮಾಡಲು ಅನುಮತಿ ನೀಡಬಾರದು ಎಂದು ಕೋರಿತ್ತು. ಆದರೆ, ಅವರು ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ ತಮ್ಮ ಮನವಿ ಪತ್ರ ಪರಿಗಣಿಸಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶಿಸುವಂತೆ ಅರ್ಜಿಯಲ್ಲಿ ಸಂಘ ಕೋರಿತ್ತು.
The Karnataka High Court has directed the Deputy Commissioner of Dakshina Kannada district to take a legal and appropriate decision within two weeks regarding a petition filed by the Mangalore Auto Rickshaw Drivers and Owners Association, urging the authorities not to grant fresh permits for electric autos in Mangaluru city.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm