ಬ್ರೇಕಿಂಗ್ ನ್ಯೂಸ್
27-08-25 03:17 pm HK News Desk ಕರ್ನಾಟಕ
ಮೈಸೂರು, ಆ 27 : ನಾಡಹಬ್ಬ ದಸರಾ ಉದ್ಘಾಟಿಸಲು ಬಾನು ಮುಷ್ತಾಕ್ರು ಆಯ್ಕೆಯಾದಗಿನಿಂದಲೂ ಬಿಜೆಪಿ ನಾಯಕರು ನಾನ ತಕರಾರು ಶುರು ಮಾಡುತ್ತಲೇ ಇದ್ದಾರೆ. ಬಿಜೆಪಿ ನಾಯಕರ ಆಕ್ಷೇಪ ಒಂದೆಡೆಯಾದರೆ, ಕಾಂಗ್ರೆಸ್ ನಾಯಕರ ಸಮರ್ಥನೆ ಒಂದು ಕಡೆ. ಇಂದು ಸಹ ಮೈಸೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಈ ಬಗ್ಗೆ ಮಾತನಾಡಿ, ಅರಿಶಿನ ಕುಂಕುಮದ ಬಗ್ಗೆ ಬಾನು ಮುಷ್ತಾಕ್ ಗೆ ದ್ವೇಷದ ಭಾವನೆ ಇದೆ. ನೀವು ನಂಬಿರುವ ನಿಮ್ಮ ಅಲ್ಲಾ ನಿಮ್ಮನ್ನು ಮಸೀದಿಗೆ ಕರೆಸಿಕೊಳ್ಳುವುದಿಲ್ಲ. ನಮ್ಮ ದೇವರು ಹೇಗೆ ಕರೆಸಿ ಕೊಳ್ಳುತ್ತಾರೆ ಎಂದು ಪ್ರಶ್ನೆ ಮಾಡಿದ್ದಾರೆ.
ದಸರಾ ಉದ್ಘಾಟಕರ ಆಯ್ಕೆ ವಿವಾದ ವಿಚಾರದ ಬಗ್ಗೆ ಮೈಸೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಮಾತನಾಡಿ, ಬಾನು ಮುಷ್ತಾಕ್ ಮುಸ್ಲಿಂ ಅನ್ನುವ ಕಾರಣಕ್ಕೆ ನಾನು ವಿರೋಧಿಸುತ್ತಿಲ್ಲ. ಟಿಪ್ಪು ಜಯಂತಿ ಮಾಡಿ ಎಂದು ಮುಸ್ಲಿಮರು ಕೇಳಿರಲಿಲ್ಲ. ಸಿದ್ದರಾಮಯ್ಯ ಮುಸ್ಲಿಮರ ಓಲೈಕೆಗಾಗಿ ಟಿಪ್ಪು ಜಯಂತಿ ಮಾಡಿದರು. ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಕರೆಯಿರಿ ಎಂದು ಯಾವ ಮುಸ್ಲಿಂ ಕೇಳಿರಲಿಲ್ಲ. ಆದರೂ ಸಿದ್ದರಾಮಯ್ಯ ಮಾಡಿದರು ಎಂದು ಗುಡುಗಿದರು.
ಪ್ರತಾಪ್ಸಿಂಹರಿಂದ ಸಾಲು ಸಾಲು ಪ್ರಶ್ನೆ
ಬಾನು ಮುಷ್ತಾಕ್ ಅವರಿಗೆ ನೇರವಾಗಿ ಪ್ರಶ್ನೆ ಕೇಳ್ತೀನಿ, ಸಾಹಿತ್ಯ ಭಾಷಣದಲ್ಲಿ ನಿಮ್ಮ ಭಾಷಣ ಏನಿತ್ತು? ಮುಸ್ಲಿಮರು ಕನ್ನಡ ಕಲಿಯಲು ಭುವನೇಶ್ವರಿ ತಾಯಿ ಮೂರ್ತಿ ಅಡ್ಡಿಯಾಯಿತು ಎಂದು ಬಾನು ಮುಷ್ತಾಕ್ ಹೇಳಿದ್ದಾರೆ. ಭುವನೇಶ್ವರಿಗೆ ಅರಿಶಿನ ಕುಂಕುಮ ಇಟ್ಟಿದ್ದರಿಂದ ಮುಸ್ಲಿಮರು ಕನ್ನಡ ಕಲಿಯಲು ಆಗಿಲ್ಲ ಎಂದು ಮುಷ್ತಾಕ್ ಹೇಳಿದ್ದು ಸತ್ಯ ತಾನೇ?
ಕನ್ನಡವನ್ನು ಭುವನೇಶ್ವರಿ ಆಗಿ ಒಪ್ಪದ ಬಾನು ಮುಷ್ತಾಕ್ ನಾಡದೇವಿ ರೂಪದಲ್ಲಿನ ಚಾಮುಂಡಿಯನ್ನು ಒಪ್ಪುತ್ತಾರಾ ಎಂದು ಪ್ರತಪ್ ಸಿಂಹ ಬಾನು ಮುಷ್ತಾಕ್ರಿಗೆ ಪ್ರಶ್ನಿಸಿದರು.
ಅರಿಶಿನ ಕುಂಕುಮದ ಬಗ್ಗೆ ಯಾಕೆ ಬಾನು ಮುಷ್ತಾಕ್ ಗೆ ತಕಾರರು - ಕಿರಿಕಿರಿ ಇದೆ. ಹಿಂದೂಗಳ ಮನೆಯಲ್ಲಿ ಯಾರೇ ಸುಮಂಗಲಿ ಹೋದರು ಕುಂಕುಮ ಕೊಡುತ್ತಾರೆ. ದೇವಸ್ಥಾನಕ್ಕೆ ಹೋದರೆ ಕುಂಕುಮ ಪ್ರಸಾದವಾಗಿ ಕೊಡುತ್ತಾರೆ. ಇಂತಹ ಕುಂಕುಮವೇ ಬಾನು ಮುಷ್ತಾಕ್ ಗೆ ಕಿರಿಕಿರಿ ಉಂಟು ಮಾಡಿದೆ. ತಮಿಳುನಾಡಿನಲ್ಲಿ ಮುಸ್ಲಿಮರಿಗೆ ಮಾತೃ ಭಾಷೆ ತಮಿಳು. ಕರ್ನಾಟಕದಲ್ಲಿ ಯಾಕೆ ಮುಸ್ಲಿಮರಿಗೆ ಮಾತೃ ಭಾಷೆ ಕನ್ನಡ ಆಗಲ್ಲ? ತಲೆ ಮಾಸಿದ ಕಾಂಗ್ರೆಸ್ ನಾಯಕರು ನನಗೂ ಪ್ರಶ್ನೆ ಮಾಡಿದ್ದಾರೆ ಎಂದು ಕಿಡಿಕಾರಿದರು.
ನಂಬಿಕೆಗೆ ಧಕ್ಕೆಯಾಗ್ತಿದೆ;
ಇಸ್ಲಾಂ, ಕಿಶ್ಚಿಯನ್ ಅಕ್ರಮಣಕಾರಿ ಆಗಿ ಭಾರತಕ್ಕೆ ಬಂದವರು. ನಮ್ಮಆಚಾರ, ವಿಚಾರ, ಸಂಸ್ಕೃತಿ ಒಡೆದು ಹಾಕಲು ಯತ್ನಿಸಿದ್ದು, ಘಜ್ನಿ, ಮೊಗಲರು. ಇದೇ ರೀತಿ ನಮ್ಮ ನಂಬಿಕೆಯನ್ನು ಬಾನು ಮುಷ್ತಾಕ್ ಒಡೆಯುತ್ತಿದ್ದಾರೆ ಎಂದರು
The controversy surrounding the selection of acclaimed author Banumustak as the inaugurator of this year’s Mysuru Dasara festival continues to intensify. Former BJP MP Pratap Simha has now added fuel to the fire with sharp criticism and provocative remarks against Banumustak, questioning her beliefs and intentions.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm