ಬ್ರೇಕಿಂಗ್ ನ್ಯೂಸ್
27-08-25 06:21 pm Bangalore Correspondent ಕರ್ನಾಟಕ
ಬೆಂಗಳೂರು, ಆ.27: ಚಾಮುಂಡಿ ಬೆಟ್ಟದ ಕುರಿತು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡ ಡಿಸಿಎಂ ಡಿ.ಕೆ.ಶಿವಕುಮಾರ್, "ಇದು ಸರ್ಕಾರದ ಆಸ್ತಿ. ಎಲ್ಲೂ ಹಿಂದೂ ಧರ್ಮದ್ದು ಅಂತ ಹೇಳಿಲ್ಲ" ಎಂದು ತಿಳಿಸಿದರು.
ಸದಾಶಿವನಗರ ನಿವಾಸದಲ್ಲಿಂದು ಮಾತನಾಡಿದ ಅವರು, "ಚಾಮುಂಡಿಯನ್ನು ನಾಡದೇವತೆ ಅಂತ ಕರೆಯುತ್ತೇವೆ. ರಾಜವಂಶಸ್ಥರು, ಸರ್ಕಾರ ಇಬ್ಬರೂ ಕರೆಯೋದು ಹಾಗೆ. ಇದು ಸರ್ಕಾರದ ಆಸ್ತಿ. ಎಲ್ಲೂ ಹಿಂದೂ ಧರ್ಮದ್ದು ಅಂತ ಹೇಳಿಲ್ಲ. ಹಿಂದೂಗಳು ಮಾತ್ರ ಬರಬೇಕು ಅಂತ ಇಲ್ಲ. ಎಲ್ಲಾ ಧರ್ಮದವರನ್ನೂ ಆಶೀರ್ವದಿಸುವ ದೇವತೆ. ನಾಡಹಬ್ಬಕ್ಕೆ ವಿದೇಶಿಗರೂ ಬರ್ತಾರೆ. ಬೇರೆ ಧರ್ಮದವರೂ ಬರ್ತಾರೆ" ಎಂದರು.
"ಮಹಾರಾಜರು ವಿದೇಶಿಯರನ್ನು ಆಹ್ವಾನಿಸುತ್ತಿದ್ರು. ಅವರೆಲ್ಲ ಯಾವ ಸಮುದಾಯಕ್ಕೆ ಸೇರಿದವರು?. ಬಾನು ಮುಷ್ತಾಕ್ ಬೆಟ್ಟ ಹತ್ತಬಾರದು ಅಂದ್ರೆ ಹೇಗೆ?. ನೀರು, ಸೂರ್ಯ, ದೇವರಿಗೆ ಧರ್ಮವಿಲ್ಲ. ಕ್ರಿಶ್ಚಿಯನ್ನರ ಚರ್ಚ್, ಮುಸ್ಲಿಮರ ಮಸೀದಿಗೆ ನಮ್ಮನ್ನು ಬಿಡಲ್ವೇ?. ಗೊಮ್ಮಟಗಿರಿಗೆ ನಮ್ಮನ್ನು ಬಿಡುವುದಿಲ್ವೇ?. ಅವರು ನಮ್ಮನ್ನು ಬರಬಾರದು ಅಂತ ಹೇಳ್ತಾರಾ" ಎಂದು ಪ್ರಶ್ನಿಸಿದರು.
ಯದುವೀರ್ ಇತಿಹಾಸ ಮರೆತಿದ್ದಾರೆ-ಡಿಕೆಶಿ:
"ಯದುವೀರ್ ಬಿಜೆಪಿ ಸೇರಿದ್ದಾರೆ. ಅವರು ಇತಿಹಾಸವನ್ನು ಮರೆತಿದ್ದಾರೆ. ನಾವು ಗೃಹಲಕ್ಷ್ಮಿ ಹಣ ಚಾಮುಂಡಿ ಮುಂದಿಟ್ಟು ಪೂಜಿಸಿದ್ವಿ. ಎಲ್ಲಾ ಧರ್ಮದವರಿಗೆ ಗ್ಯಾರಂಟಿ ಕೊಡ್ತಿದ್ದೇವೆ. ಹೀಗಾಗಿ ಜಾತಿ ಧರ್ಮದ ಬಣ್ಣ ಕಟ್ಟಬಾರದು" ಎಂದು ತಿಳಿಸಿದರು.
ಬಿಜೆಪಿಗಿಂತ ನಾವು ಹೆಚ್ಚು ಹಿಂದುತ್ವದವರು:
"ಬ್ಯಾರಿಗಳು ನಮಗಿಂತ ಕನ್ನಡ ಚೆನ್ನಾಗಿ ಮಾತಾಡ್ತಾರೆ. ಅವರನ್ನು ತಳ್ಳುವುದಕ್ಕೆ ಆಗುತ್ತಾ?. ನಮ್ಮನ್ನು ನೀವು ಬರಬೇಡಿ ಅಂತಾರಾ?. ಬಿಜೆಪಿಗಿಂತ ನಾವು ಹೆಚ್ಚು ಹಿಂದುತ್ವದವರು. ದೇಶದಲ್ಲಿ ಇರೋರನ್ನು ಓಡಿಸೋಕೆ ಆಗುತ್ತಾ" ಎಂದು ಕೇಳಿದರು.
Karnataka Deputy Chief Minister DK Shivakumar has defended his recent remark on Chamundi Hill, which triggered backlash from opposition leaders. Speaking to the media at his residence in Sadashivanagar, he clarified that Chamundi Hill is government property and not exclusively a Hindu religious site.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm