ಬ್ರೇಕಿಂಗ್ ನ್ಯೂಸ್
28-08-25 02:41 pm HK News Desk ಕರ್ನಾಟಕ
ಬೀದರ್, ಆ 28 : ಜಿಲ್ಲೆಯ ಡಿಪೋ ನಂ.1ರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಾರಿಗೆ ಬಸ್ ಡ್ರೈವರ್ ಡಿಪೋ ಮ್ಯಾನೇಜರ್ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಳಕಿಗೆ ಬಂದಿದೆ.
ಆಣದೂರು ಗ್ರಾಮದ ನಿವಾಸಿ ರಾಜಪ್ಪ (59) ಬಳ್ಳಾರಿ–ಬೀದರ್ ಮಾರ್ಗದ ಸ್ಲಿಪರ್ ಕೋಚ್ ಬಸ್ನಲ್ಲಿ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು. ದುಃಖಕರ ಸಂಗತಿಯಾಗಿಯೇ, ಅವರು ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದ ಅದೇ ಬಸ್ನಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಾಜಪ್ಪ ಆರು ಹೆಣ್ಣುಮಕ್ಕಳ ತಂದೆಯಾಗಿದ್ದು, ಅವರ ಕುಟುಂಬ ಆರ್ಥಿಕವಾಗಿ ಹಿಂದುಳಿದಿದೆ. ಕುಟುಂಬಕ್ಕೆ ಸಂಪೂರ್ಣ ಆಧಾರವಾಗಿದ್ದ ರಾಜಪ್ಪ ಅಕಾಲಿಕವಾಗಿ ಮೃತಪಟ್ಟ ಪರಿಣಾಮ ಕುಟುಂಬಕ್ಕೆ ದಿಕ್ಕೇ ತೋಚದಂತಾಗಿದೆ. ಶೀಘ್ರದಲ್ಲೇ ನಿವೃತ್ತಿ ಪಡೆಯಬೇಕಾಗಿದ್ದ ಅವರ ಜೀವನ ಅಂತ್ಯ ಕಂಡಿರುವುದು ಹೃದಯ ಕಲುಕುವ ಸಂಗತಿ.
ಬೀದರ್ ಡಿಪೋ ಮ್ಯಾನೇಜರ್ ವಿಠ್ಠಲ್ ಬೋವಿ ನಿರಂತರ ಕಿರುಕುಳ ನೀಡಿದ್ದೇ ಈ ಆತ್ಮಹತ್ಯೆಗೆ ಕಾರಣವಾಗಿದೆ ಎಂದು ಮೃತರ ಕುಟುಂಬಸ್ಥರ ಗಂಭೀರ ಆರೋಪ ಮಾಡಿದ್ದಾರೆ. ರಾಜಪ್ಪ ಅವರು ಆರೋಗ್ಯ ಸಮಸ್ಯೆ, ವಯಸ್ಸಿನ ಅಡಚಣೆಗಳನ್ನು ಹೇಳಿಕೊಂಡರೂ ಅಧಿಕಾರಿಗಳು ಯಾವುದೇ ರೀತಿಯ ಸಹಾನುಭೂತಿ ತೋರಲಿಲ್ಲವಂತೆ, “ನಮ್ಮ ತಂದೆ ನಿರಂತರ ಒತ್ತಡ ಮತ್ತು ಕಿರುಕುಳಕ್ಕೆ ತುತ್ತಾಗಿದ್ದರು. ಅವರಿಗೆ ನ್ಯಾಯ ಸಿಗಬೇಕು. ಮ್ಯಾನೇಜರ್ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು” ಎಂದು ಕುಟುಂಬದವರು ಆಗ್ರಹಿಸಿದ್ದಾರೆ.
ರಜೆ ನಿರಾಕರಣೆ, ನಿರಂತರ ಒತ್ತಡ ;
ಮೃತರ ಸಂಬಂಧಿಕರು ಹಾಗೂ ಸಹೋದ್ಯೋಗಿಗಳ ಪ್ರಕಾರ, ರಾಜಪ್ಪ ಅವರಿಗೆ ಬೇಕಾದಾಗ ರಜೆ ನೀಡಲಾಗುತ್ತಿರಲಿಲ್ಲ. ಆರೋಗ್ಯ ಸಮಸ್ಯೆಯಿಂದಾಗಿ ವಿಶ್ರಾಂತಿ ಅಗತ್ಯವಿದ್ದರೂ, ಅಧಿಕಾರಿಗಳು ಅವರನ್ನು ಪ್ರತಿದಿನವೂ ಬಸ್ಸು ಓಡಿಸಲು ಒತ್ತಾಯಿಸುತ್ತಿದ್ದರು. ದೂರದ ಮಾರ್ಗದಲ್ಲಿ ಸಾಮಾನ್ಯವಾಗಿ ಇಬ್ಬರು ಚಾಲಕರ ಅವಶ್ಯಕತೆ ಇದ್ದರೂ, ರಾಜಪ್ಪ ಒಬ್ಬರೇ ನಿರಂತರವಾಗಿ ಡ್ರೈವಿಂಗ್ ಮಾಡುತ್ತಿದ್ದರು. ಇದು ಅವರ ದೈಹಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿತ್ತು ಎಂದು ಸಹೋದ್ಯೋಗಿಗಳು ತಿಳಿಸಿದರು.
In a shocking incident, a KSRTC bus driver working at Depot No.1 in Bidar allegedly died by suicide by hanging himself inside the very bus he was operating, following prolonged harassment by the depot manager. The deceased has been identified as Rajappa (59), a resident of Anadoor village. He was serving as a driver on the Ballari–Bidar sleeper coach route.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm