Yadagiri, Raid, Heart Attack: ಯಾದಗಿರಿ ; ಇಸ್ಪೀಟ್‌ ಅಡ್ಡೆ ಮೇಲೆ ಪೊಲೀಸರ ದಾಳಿ, ಭಯಗೊಂಡ ವ್ಯಕ್ತಿ ಹೃದಯಾಘಾತಕ್ಕೆ ಬಲಿ 

01-09-25 04:55 pm       HK News Desk   ಕರ್ನಾಟಕ

ಇಸ್ಪೀಟ್‌ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿದ ಕಾರಣ ಭಯಗೊಂಡ ವ್ಯಕ್ತಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹುಣಸಗಿ ತಾಲೂಕಿನ ವಜ್ಜಾಲ ಗ್ರಾಮದಲ್ಲಿ ನಡೆದಿದೆ.

ಯಾದಗಿರಿ, ಸೆ 01 : ಇಸ್ಪೀಟ್‌ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿದ ಕಾರಣ ಭಯಗೊಂಡ ವ್ಯಕ್ತಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹುಣಸಗಿ ತಾಲೂಕಿನ ವಜ್ಜಾಲ ಗ್ರಾಮದಲ್ಲಿ ನಡೆದಿದೆ.

ವಜ್ಜಾಲ ಗ್ರಾಮದಲ್ಲಿ ಇಸ್ಪೀಟ್‌ ಆಟ ಆಡುತ್ತಿರುವ ಬಗ್ಗೆ ಪೊಲೀಸರಿಗೆ ಅಧಿಕೃತವಾಗಿ ಮಾಹಿತಿ ಲಭಿಸಿದ್ದು,  ಇಸ್ಪೀಟ್‌ ಅಡ್ಡೆಯ ಮೇಲೆ ದಾಳಿ ಮಾಡಿದ್ದಾರೆ. ಈ ಸಂದರ್ಭ 35 ವರ್ಷದ ಮಂಜು ಎನ್ನುವವರು ಇಸ್ಪೀಟ್‌ ಆಡುತ್ತಿದ್ದರು. ಪೊಲೀಸರು ದಾಳಿ ಮಾಡಿದ ಕಾರಣ ಭಯಗೊಂಡು ಹೃದಯಾಘಾತವಾಗಿದ್ದು, ಕುಳಿತಲ್ಲೇ ಉಸಿರು ಚೆಲ್ಲಿದ್ದಾರೆ.

ಪೊಲೀಸ್‌ ಠಾಣೆಯ ಮುಂದೆ ಕುಟುಂಬಸ್ಥರ ಪ್ರತಿಭಟನೆ;

ಇನ್ನು ಮೃತ ಮಂಜು ಕುಟುಂಬಸ್ಥರಿಂದ ಆಕ್ರೋಶ ವ್ಯಕ್ತವಾಗಿದ್ದು, ಪೊಲೀಸ್‌ ಠಾಣೆಯ ಮುಂದೆ ಪ್ರತಿಭಟನೆ ಮಾಡಿದ್ದಾರೆ. ಪೊಲೀಸರು ಮಂಜು ಅವರನ್ನ ಅಟ್ಟಾಡಿಸಿಕೊಂಡು ಹೋಗಿದ್ದಾರೆ. ಸರಿ ಸುಮಾರು 1 ಕೀಮೀರಷ್ಟು ಅಟ್ಟಾಡಿಸಿದ್ದು, ಇದರಿಂದಾಗಿ ಸುಸ್ತಾಗಿದೆ ಹೃದಯಾಘಾತಕ್ಕೆ ಮಂಜು ಸಾವಿಗೀಡಾಗಿದ್ದಾರೆ ಎಂದು ಪೊಲೀಸರ ಮೇಲೆ ಆರೋಪ ಮಾಡಿದ್ದಾರೆ.

ಗಣಪತಿ ವಿಸರ್ಜನೆಯಲ್ಲಿ ಹೃದಯಾಘಾತದಿಂದ ಸಾವು

ಗಣೇಶ ವಿಸರ್ಜನೆಯ ಮೆರವಣಿಗೆ ಸಮಯದಲ್ಲಿ ಹೃದಯಾಘಾತ ಉಂಟಾಗಿ ಕುಸಿದು ಬಿದ್ದು ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಬೋದಗೂರು ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು, ಕಳೆದ ರಾತ್ರಿ ನಡೆದ ಗಣೇಶೋತ್ಸವ ವಿಸರ್ಜನಾ ಮೆರವಣಿಗೆ ಸಮಯದಲ್ಲಿ ಡ್ಯಾನ್ಸ್‌ ಮಾಡುತ್ತಿದ್ದ 40 ವರ್ಷದ ಲಕ್ಷ್ಮೀಪತಿ ಎನ್ನುವವರಿಗೆ ಹೃದಯಾಘಾತವಾಗಿದೆ. ಹಾರ್ಟ್‌ ಅಟ್ಯಾಕ್‌ ಆದ ಕಾರಣ ವ್ಯಕ್ತಿ ಕುಸಿದು ಬಿದ್ದಿದ್ದು, ಸಾವನ್ನಪ್ಪಿದ್ದಾರೆ.

A man reportedly died of a heart attack after police conducted a raid on an illegal gambling den in Vajjal village, Hunasagi taluk of Yadgir district. The incident occurred when the police received credible information about an ongoing gambling game and raided the premises.