ಬ್ರೇಕಿಂಗ್ ನ್ಯೂಸ್
01-09-25 06:59 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 01 : ಸೋಶಿಯಲ್ ಮೀಡಿಯಾದ ಬಳಕೆಯಲ್ಲಿ ಜನರು ಎಚ್ಚರಿಕೆಯಿಂದಿರಬೇಕೆಂದು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಕಟ್ಟುನಿಟ್ಟಿನ ಎಚ್ಚರಿಕೆ ಸಂದೇಶವನ್ನು ನೀಡಿದೆ. ಸೋಷಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ, ಶಾಂತಿಭಂಗಕ್ಕೆ ಕಾರಣವಾಗುವ, ಅಥವಾ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಪೋಸ್ಟ್ಗಳನ್ನು ಹಾಕಿದವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಎಚ್ಚರಿಸಿದ್ದಾರೆ. ಈ ಸಂದೇಶವು ರಾಜ್ಯದಾದ್ಯಂತ ಸಾಮಾಜಿಕ ಜಾಲತಾಣ ಬಳಕೆದಾರರಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಹಂಚಿಕೊಳ್ಳಲಾಗಿದೆ.
ಸೋಷಿಯಲ್ ಮೀಡಿಯಾ ಪ್ರಿಯರೇ ಎಚ್ಚರ!
ಸೋಷಿಯಲ್ ಮೀಡಿಯಾದಲ್ಲಿ ಧಾರ್ಮಿಕ, ಜಾತೀಯ, ಅಥವಾ ರಾಜಕೀಯವಾಗಿ ಸೂಕ್ಷ್ಮವಾದ ವಿಷಯಗಳ ಕುರಿತು ಭಾವನಾತ್ಮಕವಾಗಿ ಕೆರಳಿಸುವ ಅಥವಾ ತಪ್ಪು ಮಾಹಿತಿಯನ್ನು ಹರಡುವ ಪೋಸ್ಟ್ಗಳು ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿವೆ. ಇಂತಹ ಚಟುವಟಿಕೆಗಳಿಂದಾಗಿ ಸಾಮಾಜಿಕ ಸೌಹಾರ್ದತೆಗೆ ಭಂಗ ಬರುವ ಸಾಧ್ಯತೆಯಿದೆ ಎಂದು ಕರ್ನಾಟಕ ಪೊಲೀಸ್ ಇಲಾಖೆ ಎಚ್ಚರಿಸಿದೆ. ಹೀಗಾಗಿ ಸೋಷಿಯಲ್ ಮೀಡಿಯಾ ಪ್ರಿಯರು ಪೋಸ್ಟ್ ಮಾಡುವ ಮುನ್ನ ಜಾಗರೂಕರಾಗಿರಿ, ಇದು ಮುನ್ನೆಚ್ಚರಿಕೆ ಎಂದು ಸೂಚಿಸಿದ್ದಾರೆ.
ಪೊಲೀಸರ ಎಚ್ಚರಿಕೆ ಸಂದೇಶ !
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ತನ್ನ ಅಧಿಕೃತ ಎಕ್ಸ್ ಖಾತೆಯ ಮೂಲಕ, “ಸೋಷಿಯಲ್ ಮೀಡಿಯಾದಲ್ಲಿ ಯಾವುದೇ ಪೋಸ್ಟ್ ಹಾಕುವ ಮುನ್ನ ಎಚ್ಚರಿಕೆಯಿಂದಿರಿ. ಯಾವುದೇ ಸಂಘಟನೆ, ಸಂಸ್ಥೆ, ಅಥವಾ ವ್ಯಕ್ತಿಯ ವಿರುದ್ಧ ಅವಹೇಳನಕಾರಿ ಅಥವಾ ಶಾಂತಿಭಂಗಕ್ಕೆ ಕಾರಣವಾಗುವ ಪೋಸ್ಟ್ಗಳನ್ನು ಹಾಕಿದರೆ, ಬಿಎನ್ಎಸ್ ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆ (ಐಟಿ ಆಕ್ಟ್) ಅಡಿಯಲ್ಲಿ ಕಠಿಣ ಕಾನೂನು ಕ್ರಮಕ್ಕೆ ಒಳಗಾಗುತ್ತೀರಿ,” ಎಂದು ಎಚ್ಚರಿಕೆ ನೀಡಿದೆ
ಈ ಸಂದೇಶವನ್ನು ರಾಜ್ಯದಾದ್ಯಂತ ಪೊಲೀಸ್ ಠಾಣೆಗಳ ಮೂಲಕವೂ ಪ್ರಕಟಿಸಲಾಗಿದೆ. ಪುನರಾವರ್ತಿತ ತಪ್ಪುಗಳು ಕಾನೂನಿನ ಉಲ್ಲಂಘನೆಯ ಗಂಭೀರ ಕ್ರಮಗಳಿಗೆ ದಾರಿ ಮಾಡಿಕೊಡುತ್ತವೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
In a stern message to social media users, the Karnataka State Police has issued a statewide alert urging citizens to exercise caution while posting content online. The department has warned that legal action will be taken against individuals who share defamatory, provocative, or law-and-order-threatening content on social media platforms.
01-09-25 10:53 pm
Bangalore Correspondent
Karnataka Police, Warning to Social Media Use...
01-09-25 06:59 pm
ಎಸ್.ಐ.ಟಿ ರಚನೆ ಮಾಡಿದಾಗಲೇ ಬಿಜೆಪಿ ಯಾಕೆ ವಿರೋಧ ಮಾಡ...
01-09-25 05:03 pm
Yadagiri, Raid, Heart Attack: ಯಾದಗಿರಿ ; ಇಸ್ಪೀ...
01-09-25 04:55 pm
Sujatha Bhat, Latest News, Dharmasthala: ಚಿನ್...
01-09-25 01:25 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
01-09-25 10:01 pm
Mangalore Correspondent
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಸೌ...
01-09-25 05:05 pm
Mangalore Pothole, Accident, Video Viral: ಕೆಪ...
31-08-25 10:34 pm
Ullal, Mangalore, UT Khader: ಹಡಿಲು ಬಿದ್ದ ಗದ್ದ...
31-08-25 08:20 pm
“Mangaluru’s Biggest Heart Care Offer: Indian...
31-08-25 01:56 pm
01-09-25 09:21 pm
Udupi Correspondent
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm
Mangalore Crime, Konaje Police, Raid, Liquor:...
01-09-25 01:58 pm
Mangalore Crime, Falnir Attack: ಪೊಲೀಸರಿಗೆ ಭಾರ...
31-08-25 10:55 pm
Mangalore Court, Sexual Abuse: ಮೂರೂವರೆ ವರ್ಷದ...
30-08-25 03:22 pm