ಬ್ರೇಕಿಂಗ್ ನ್ಯೂಸ್
02-09-25 08:00 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.2: ಸಾಮಾನ್ಯವಾಗಿ ನಗರ ಪ್ರದೇಶಗಳಲ್ಲದೇ ಪಟ್ಟಣ ಪ್ರದೇಶಗಳಲ್ಲಿಯೂ ಶಾಲೆಗಳಿಗೆ ಮಕ್ಕಳನ್ನು ಶಾಲಾ ವಾಹನ ಇಲ್ಲವೇ ಖಾಸಗಿ ವಾಹನಗಳಲ್ಲಿ ಕಳುಹಿಸುತ್ತಾರೆ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡ ಮಕ್ಕಳ ಕಳ್ಳರ ಗ್ಯಾಂಗ್, ಶಾಲಾ ವಾಹನದ ನೆಪದಲ್ಲಿ ಮಕ್ಕಳನ್ನು ಕಿಡ್ನಾಪ್ ಮಾಡುತ್ತಿರುವ ವಿಚಾರ ಉತ್ತರ ಭಾರತದಲ್ಲಿ ಬೆಳಕಿಗೆ ಬಂದಿದೆ. ಇದರ ಬಗ್ಗೆ ನಟ ಮಾಸ್ಟರ್ ಆನಂದ್ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಎಚ್ಚರಿಕೆ ನೀಡಿದ್ದಾರೆ. ಹಿಂದಿಯಲ್ಲಿ ಬಂದಿರುವ ಸುದ್ದಿಯೊಂದನ್ನು ಉಲ್ಲೇಖಿಸಿರುವ ಮಾಸ್ಟರ್ ಆನಂದ್, ಸಾಮಾನ್ಯವಾಗಿ ಮಕ್ಕಳನ್ನು ಶಾಲೆಗೆ ಕಳುಹಿಸುವ ವಿಚಾರದಲ್ಲಿ ಧಾವಂತದಲ್ಲಿ ಇರುತ್ತಾರೆ. ಇದನ್ನೇ ಲಕ್ನೋದಲ್ಲಿ ಕಳ್ಳರ ಗ್ಯಾಂಗ್ ಬಂಡವಾಳ ಮಾಡಿಕೊಂಡು ಅದೇ ರೀತಿಯ ವಾಹನ ತಂದು ಮಕ್ಕಳನ್ನು ಕದಿಯೋಕೆ ನೋಡಿದ್ದಾರೆ ಎಂದು ವಿವರಿಸಿದ್ದಾರೆ.
ಸಾಮಾನ್ಯವಾಗಿ ಶಾಲೆಗೆ ಮಕ್ಕಳನ್ನು ಕರೆದುಕೊಂಡು ಹೋಗುವ ವ್ಯಾನ್ಗಳು ನಿಗದಿತ ಸಮಯಕ್ಕಿಂತ ಸ್ವಲ್ಪ ಹೆಚ್ಚೂ ಕಡಿಮೆ ಬರುವುದು ಸಾಮಾನ್ಯ. ನಿಗದಿತ ವಾಹನ ಬರುವುದಕ್ಕಿಂತ ಸ್ವಲ್ಪ ಮುಂಚೆಯೇ ಕಳ್ಳರ ಗ್ಯಾಂಗ್ ಬಂದು ಹಾರ್ನ್ ಮಾಡುತ್ತದೆ. ಶಾಲಾ ವಾಹನ ಬಂತೆಂದು ಅದನ್ನು ನೋಡದೆ ಮಕ್ಕಳನ್ನು ಕಳಿಸಿಕೊಡುತ್ತಾರೆ. ಎಂದಿನ ಡ್ರೈವರ್ ಬಂದಿಲ್ಲ, ಅವರಿಗೆ ಉಷಾರಿಲ್ಲ ಅಂತ ನೆಪ ಹೇಳಿ ಮಕ್ಕಳನ್ನು ಕರೆದುಕೊಂಡು ಹೋಗುತ್ತಾರೆ.
ಇಂಥದ್ದೇ ಘಟನೆ ಲಕ್ನೋದಲ್ಲಿ ನಡೆದಿರುವ ಬಗ್ಗೆ ಮಾಸ್ಟರ್ ಆನಂದ್ ಹೇಳಿದ್ದಾರೆ. ಮಕ್ಕಳನ್ನು ತುಂಬಿಸಿಕೊಂಡು ಶಾಲೆಯ ವಾಹನ ಬಂದ ಸಂದರ್ಭದಲ್ಲಿ ಮಹಿಳೆಯೊಬ್ಬರಿಗೆ ಡೌಟ್ ಬಂದು ನಿಜವಾದ ಡ್ರೈವರ್ಗೆ ಕರೆ ಮಾಡಿದಾಗ, ಆತ ತಾನು ತಡವಾಗಿ ಬರುತ್ತಿರುವುದಾಗಿ ಹೇಳಿದ್ದರಿಂದ ಮೋಸದಾಟ ಬಯಲಾಗಿದೆ. ಆದರೆ ಈ ರೀತಿ ನಿಮ್ಮ ಮಕ್ಕಳಿಗೂ ಆಗಬಹುದು. ಆದ್ದರಿಂದ ಚಾಲಕರು ಬೇರೆ ಬಂದಿದ್ದರೆ ಅಥವಾ ಇನ್ನಾವುದೇ ರೀತಿಯಲ್ಲಿ ಸಂದೇಹ ಬಂದರೆ ಚೆಕ್ ಮಾಡಿ. ಮಕ್ಕಳನ್ನು ಬೇರೆ ವಾಹನಗಳಿಗೆ ಕಳುಹಿಸುವ ಮುನ್ನ ಎಚ್ಚರಿಕೆಯಿಂದ ಇರಿ ಎಂದು ಮಾಸ್ಟರ್ ಆನಂದ್ ಸಲಹೆ ಮಾಡಿದ್ದಾರೆ.
In a disturbing new trend, child kidnappers are reportedly disguising themselves as school van drivers to abduct children, a modus operandi that recently surfaced in North India. Actor Master Anand has issued a public warning about such incidents via his Instagram account.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm