ಬ್ರೇಕಿಂಗ್ ನ್ಯೂಸ್
03-09-25 08:35 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.3 : ಧರ್ಮಸ್ಥಳ ಚಲೋ ನಡೆಸಿದ ಬಿಜೆಪಿ ನಾಯಕರಿದ್ದ ವಿಡಿಯೋವನ್ನು ತಿರುಚಿ, ಹೆಣ್ಣಿಗೆ ನ್ಯಾಯ ಕೊಡದೆ ಧರ್ಮದ ವಿಚಾರದಲ್ಲಿ ದೊಂಬರಾಟ ಎಂದು ಬರೆದು ಅಣಕಿಸಿ ಇನ್ಸ್ ಟಾ ಗ್ರಾಮ್ ಖಾತೆಯಲ್ಲಿ ಹಂಚಿಕೊಂಡ ಘಟನೆ ಬಗ್ಗೆ ರಾಜ್ಯ ಬಿಜೆಪಿಯಿಂದ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಮಾಜಿ ಡಿಸಿಎಂ ಅಶ್ವತ್ಥ ನಾರಾಯಣ್ ನೇತೃತ್ವದಲ್ಲಿ ಬಿಜೆಪಿ ನಾಯಕರು ದೂರು ನೀಡಿದ್ದು ವಿಡಿಯೋದಲ್ಲಿ ಹಾನಿಕಾರಕ ಕಂಟೆಂಟ್ ಹಾಕಿದ್ದರೂ ಗೃಹ ಇಲಾಖೆ ಇದರ ಬಗ್ಗೆ ಕ್ರಮ ಕೈಗೊಳ್ಳಲು ನಿರ್ಲಕ್ಷ್ಯ ವಹಿಸಿದೆ ಎಂದು ಹೇಳಿದ್ದಾರೆ.
ದೂರು ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸೌಜನ್ಯಾಗೆ ನ್ಯಾಯ ದೊರಕಿಸುವ ವಿಚಾರದಲ್ಲಿ ಯಾವುದೇ ಒಳ ಒಪ್ಪಂದದ ನಡೆ ಇಲ್ಲ. ಸೌಜನ್ಯಾ ತಾಯಿ ಇಟ್ಟಿರುವ ಬೇಡಿಕೆ ಪರವಾಗಿ ಇರುವುದಾಗಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಅವರ ಮನೆಗೂ ಭೇಟಿ ಕೊಟ್ಟು ಹೋರಾಟಕ್ಕೆ ಬೆಂಬಲ ಇದೆಯೆಂದು ತಿಳಿಸಿದ್ದಾರೆ ಎಂದರು.
ಧರ್ಮದ ವಿಚಾರದಲ್ಲಿ ಇಂಥ ಹುಡುಗಾಟ ಮಾಡಿದರೆ, ನಾವು ಸಹಿಸುವುದಿಲ್ಲ. ಸರ್ಕಾರದ ವಿರುದ್ಧ ಬೇರೆ ಯಾವುದೇ ಸಾಮಾಜಿಕ ಜಾಲತಾಣದ ಪೋಸ್ಟ್ ಬಂದಾಗ ತಕ್ಷಣ ಬಂಧಿಸುತ್ತಾರೆ. ಸಂಬಂಧಿತ ವ್ಯಕ್ತಿಯ ಮೇಲೆ ಕೂಡಲೇ ಕೇಸ್ ದಾಖಲಿಸಬೇಕು. ಸೋಷಿಯಲ್ ಮೀಡಿಯಾದಲ್ಲಿ ಹಾಕಿರುವ ವಿಡಿಯೋವನ್ನು ತಕ್ಷಣ ತೆಗೆಯಬೇಕು ಎಂದು ಒತ್ತಾಯಿಸಿದರು.
ಧರ್ಮಸ್ಥಳ ವಿಚಾರದಲ್ಲಿ ಬಿಜೆಪಿ ನ್ಯಾಯಬದ್ಧವಾಗಿ ಹೋರಾಟ ಮಾಡಿದೆ. ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಗೆ ಯಾರೇ ಅಗೌರವ ತರಲು ಪ್ರಯತ್ನ ಪಟ್ಟರೂ ನಾವು ಸಹಿಸುವುದಿಲ್ಲ ಎಂದು ಎಚ್ಚರಿಸಿದರು. ಷಡ್ಯಂತ್ರ ವಿರೋಧಿಸಿ ಮತ್ತು ಸರಕಾರಕ್ಕೆ ಸ್ಪಷ್ಟ ಸಂದೇಶ ರವಾನಿಸಲು ನಾವು ಧರ್ಮಸ್ಥಳ ಚಲೋ ಹಮ್ಮಿಕೊಂಡಿದ್ದೆವು ಎಂದು ವಿವರಿಸಿದರು.
The Karnataka unit of the Bharatiya Janata Party (BJP) has lodged a complaint at the Upparpet Police Station in Bengaluru against a social media post that allegedly mocked the party’s ‘Dharmasthala Chalo’ protest.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm