ಬ್ರೇಕಿಂಗ್ ನ್ಯೂಸ್
08-09-25 02:41 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.8 : ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ತುಳುವನ್ನು ಘೋಷಿಸುವ ನಿಟ್ಟಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.
ಭಾನುವಾರ ಇಲ್ಲಿ ನಡೆದ ಅಷ್ಟೆಮಿದ ಐಸಿರಿ, ತುಳುವ ತಿರ್ಲ್ ಸಾಸಿರಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇತ್ತೀಚೆಗೆ ಕುಂದಾಪುರದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆ. ಆ ಕಾರ್ಯಕ್ರಮ, ಈ ಕಾರ್ಯಕ್ರಮದಲ್ಲಿ ಸೇರಿರುವ ಜನ ನೋಡಿದರೆ ಮುಂದೆ ನೀವೆಲ್ಲರೂ ನಮ್ಮನ್ನು ಬೆಂಗಳೂರಿನಿಂದ ಖಾಲಿ ಮಾಡಿಸುತ್ತೀರೇನೋ ಎಂದು ಭಯವಾಗುತ್ತಿದೆ. ನಿಮ್ಮ ಈ ಶಕ್ತಿ, ಉತ್ಸಾಹ ನೋಡಿ ನನಗೆ ಈ ಅನುಮಾನ ಕಾಡುತ್ತಿದೆ ಎಂದು ಚಟಾಕಿ ಹಾರಿಸಿದರು.
ಕರಾವಳಿ ಜನ ಇಡೀ ದೇಶಕ್ಕೆ ಕರ್ನಾಟಕದ ಮೂಲಕ ಸಂಸ್ಕೃತಿ ಹಾಗೂ ಶಿಕ್ಷಣ, ಧಾರ್ಮಿಕ ಶಕ್ತಿ, ಬ್ಯಾಂಕಿಂಗ್ ವ್ಯವಸ್ಥೆ ಕೊಟ್ಟಿದ್ದಾರೆ. ಆರೋಗ್ಯ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಮುಂದೆ ಇದ್ದೀರಿ. ಕರಾವಳಿ ಭಾಗ, ದಕ್ಷಿಣ ಕನ್ನಡದ ಜನ ವಿದ್ಯಾವಂತರು, ಬುದ್ಧಿವಂತರು, ಪ್ರಜ್ಞಾವಂತರು. ನಿಮ್ಮ ಜೊತೆ ನಾನು ಇದ್ದೇನೆ ಎಂದು ಹೇಳಲು ಇಲ್ಲಿಗೆ ಬಂದಿದ್ದೇನೆ. ಡಿ.ಕೆ. ಶಿವಕುಮಾರ್ ನಿಮ್ಮವ ಎಂದು ಭಾವಿಸಿ. ನಾನು ನಿಮ್ಮ ಪರವಾಗಿದ್ದೇನೆ. ನೀವು ನನಗೆ ಬೆಂಬಲವಾಗಿರಿ. ನಾನು ನಿಮ್ಮ ಆಶೀರ್ವಾದವನ್ನಷ್ಟೇ ಕೇಳುತ್ತಿದ್ದೇನೆ ಎಂದರು.
ಮಂಗಳೂರು, ಉಡುಪಿ ಸೇರಿದಂತೆ ಕರಾವಳಿ ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗದಂತೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸಲು ಆ ಭಾಗದ ಶಾಸಕರು, ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ ಅವರ ಜೊತೆ ನಾನು ಚರ್ಚೆ ಮಾಡಿದ್ದೇನೆ’ ಎಂದು ತಿಳಿಸಿದರು. ನಿಮ್ಮ ಸಂಸ್ಕೃತಿ, ಇತಿಹಾಸ ದೇಶದ ಯಾವುದೇ ಭಾಗದಲ್ಲೂ ಇಲ್ಲ. ನೀವೆಲ್ಲರೂ ಕರ್ನಾಟಕ ರಾಜ್ಯದ ಆಸ್ತಿ ಎಂದು ತಿಳಿಸಿದರು.
Deputy Chief Minister D.K. Shivakumar has assured that the proposal to declare Tulu as the state’s second official language will be taken up for discussion in the State Cabinet.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm