ಬ್ರೇಕಿಂಗ್ ನ್ಯೂಸ್
16-09-25 11:00 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.16 : ಸಚಿವ ಜಮೀರ್ ಅಹ್ಮದ್ ಖಾನ್ ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ಗೆ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಲೋಕಾಯುಕ್ತ ಪೊಲೀಸರು, ಸಚಿವ ಜಮೀರ್ ಜೊತೆಗೆ ಕಳೆದ 3-4 ವರ್ಷಗಳಿಂದ ಆರ್ಥಿಕ ವ್ಯವಹಾರ ಹೊಂದಿರುವ ದಿನೇಶ್ ಗುಂಡೂರಾವ್ಗೆ ನೋಟಿಸ್ ನೀಡಿದ್ದು, ದಾಖಲೆ ಸಮೇತ ವಿಚಾರಣೆಗೆ ಹಾಜರಾಗಲು ತಿಳಿಸಿದ್ದಾರೆ. ನೋಟಿಸ್ ಬೆನ್ನಲ್ಲೇ ದಿನೇಶ್ ಗುಂಡೂರಾವ್ ದಾಖಲೆ ಕ್ರೋಢೀಕರಿಸಲು ಕಾಲಾವಕಾಶ ಕೋರಿದ್ದಾರೆ.
ಇದಕ್ಕೂ ಮುನ್ನ ಸಚಿವ ಜಮೀರ್ ಅಹ್ಮದ್ಗೆ 2.5 ಕೋಟಿ ರೂ. ನೀಡಿದ್ದ ವಿಚಾರವಾಗಿ ರಾಧಿಕಾ ಕುಮಾರಸ್ವಾಮಿ ಅವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದರು. ಪ್ರಕರಣದಲ್ಲಿ ಈಗಾಗಲೇ ರಾಧಿಕಾ ಕುಮಾರಸ್ವಾಮಿ ಹಾಗೂ ಗುಜರಿ ಬಾಬು ವಿಚಾರಣೆ ನಡೆಸಲಾಗಿದೆ.
2019ರಲ್ಲಿ ಐ ಮಾನಿಟರಿ ಅಡ್ವೈಸರಿ ಕಂಪನಿಯ ಬಹುಕೋಟಿ ವಂಚನೆ ಹಗರಣ ಬೆಳಕಿಗೆ ಬಂದಿತ್ತು. ಈ ವಂಚಕ ಕಂಪನಿ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಜಮೀರ್ ಅಹ್ಮದ್ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು.
ಇಡಿ ವರದಿ ಅನ್ವಯ ಆಗ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿದ್ದ ಜಮೀರ್ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಭ್ರಷ್ಟಾಚಾರ ನಿಗ್ರಹ ದಳವು (ಎಸಿಬಿ) ಪ್ರಕರಣ ದಾಖಲಿಸಿತ್ತು. ಎಸಿಬಿ ರದ್ದಾದ ಬಳಿಕ ಈ ಪ್ರಕರಣ ಲೋಕಾಯುಕ್ತ ಪೊಲೀಸರಿಗೆ ವರ್ಗವಾಗಿತ್ತು. ಈಗ ಸಚಿವರ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಬಗ್ಗೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದು, ಹಲವರ ವಿಚಾರಣೆ ನಡೆಸುತ್ತಿದ್ದಾರೆ.
ನಾನು ಯಾರ ಬಳಿ ಸಾಲ ಪಡೆದಿದ್ದೇನೆ ಎನ್ನುವುದರ ಬಗ್ಗೆ ಜಮೀರ್ ಲೋಕಾಯುಕ್ತ ಪೊಲೀಸರಿಗೆ ಲಿಖಿತವಾಗಿ ಪಟ್ಟಿ ನೀಡಿದ್ದರು. ಈ ಪಟ್ಟಿಯಲ್ಲಿ ರಾಧಿಕಾ ಕುಮಾರಸ್ವಾಮಿ ಬಳಿಯಿಂದ 2.5 ಕೋಟಿ ರೂ. ಸಾಲ ಪಡೆದಿರುವ ವಿಚಾರವನ್ನು ಹಂಚಿಕೊಂಡಿದ್ದರು. ವಿಚಾರಣೆ ಸಂದರ್ಭದಲ್ಲಿ, ನಾನು 2012ರಲ್ಲಿ ಶಮಿಕಾ ಎಂಟರ್ಪ್ರೈಸಸ್ ಹೆಸರಿನಲ್ಲಿ ಯಶ್ ಹಾಗೂ ರಮ್ಯಾ ಅಭಿನಯದ ಲಕ್ಕಿ ಸಿನಿಮಾ ನಿರ್ಮಾಣ ಮಾಡಿದ್ದೆ. ಮನರಂಜನಾ ಚಾನೆಲ್ಗಳಿಗೆ ಈ ಸಿನಿಮಾದ ಸ್ಯಾಟಲೈಟ್ ಹಕ್ಕು ಹಾಗೂ ಚಲನಚಿತ್ರದ ಯಶಸ್ವಿನಿಂದ ಸಂಪಾದಿಸಿದ ಹಣದಲ್ಲಿ ಆರ್ಥಿಕ ಸಂಕಷ್ಟದಲ್ಲಿದ್ದ ಜಮೀರ್ ಅಹ್ಮದ್ ಅವರಿಗೆ 2.5 ಕೋಟಿ ರೂ.ಗಳನ್ನು ಸಾಲವಾಗಿ ನೀಡಿದ್ದೆ ಎಂದು ರಾಧಿಕಾ ತಿಳಿಸಿದ್ದಾಗಿ ಮೂಲಗಳಿಂದ ತಿಳಿದುಬಂದಿದೆ.
In connection with the ongoing investigation into alleged illegal assets of Minister B.Z. Jamir Ahmed Khan, the Lokayukta police have issued a notice to Health Minister Dinesh Gundu Rao.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm