ಬ್ರೇಕಿಂಗ್ ನ್ಯೂಸ್
16-09-25 11:00 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.16 : ಸಚಿವ ಜಮೀರ್ ಅಹ್ಮದ್ ಖಾನ್ ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ಗೆ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಲೋಕಾಯುಕ್ತ ಪೊಲೀಸರು, ಸಚಿವ ಜಮೀರ್ ಜೊತೆಗೆ ಕಳೆದ 3-4 ವರ್ಷಗಳಿಂದ ಆರ್ಥಿಕ ವ್ಯವಹಾರ ಹೊಂದಿರುವ ದಿನೇಶ್ ಗುಂಡೂರಾವ್ಗೆ ನೋಟಿಸ್ ನೀಡಿದ್ದು, ದಾಖಲೆ ಸಮೇತ ವಿಚಾರಣೆಗೆ ಹಾಜರಾಗಲು ತಿಳಿಸಿದ್ದಾರೆ. ನೋಟಿಸ್ ಬೆನ್ನಲ್ಲೇ ದಿನೇಶ್ ಗುಂಡೂರಾವ್ ದಾಖಲೆ ಕ್ರೋಢೀಕರಿಸಲು ಕಾಲಾವಕಾಶ ಕೋರಿದ್ದಾರೆ.
ಇದಕ್ಕೂ ಮುನ್ನ ಸಚಿವ ಜಮೀರ್ ಅಹ್ಮದ್ಗೆ 2.5 ಕೋಟಿ ರೂ. ನೀಡಿದ್ದ ವಿಚಾರವಾಗಿ ರಾಧಿಕಾ ಕುಮಾರಸ್ವಾಮಿ ಅವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದರು. ಪ್ರಕರಣದಲ್ಲಿ ಈಗಾಗಲೇ ರಾಧಿಕಾ ಕುಮಾರಸ್ವಾಮಿ ಹಾಗೂ ಗುಜರಿ ಬಾಬು ವಿಚಾರಣೆ ನಡೆಸಲಾಗಿದೆ.
2019ರಲ್ಲಿ ಐ ಮಾನಿಟರಿ ಅಡ್ವೈಸರಿ ಕಂಪನಿಯ ಬಹುಕೋಟಿ ವಂಚನೆ ಹಗರಣ ಬೆಳಕಿಗೆ ಬಂದಿತ್ತು. ಈ ವಂಚಕ ಕಂಪನಿ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಜಮೀರ್ ಅಹ್ಮದ್ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು.
ಇಡಿ ವರದಿ ಅನ್ವಯ ಆಗ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿದ್ದ ಜಮೀರ್ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಭ್ರಷ್ಟಾಚಾರ ನಿಗ್ರಹ ದಳವು (ಎಸಿಬಿ) ಪ್ರಕರಣ ದಾಖಲಿಸಿತ್ತು. ಎಸಿಬಿ ರದ್ದಾದ ಬಳಿಕ ಈ ಪ್ರಕರಣ ಲೋಕಾಯುಕ್ತ ಪೊಲೀಸರಿಗೆ ವರ್ಗವಾಗಿತ್ತು. ಈಗ ಸಚಿವರ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಬಗ್ಗೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದು, ಹಲವರ ವಿಚಾರಣೆ ನಡೆಸುತ್ತಿದ್ದಾರೆ.
ನಾನು ಯಾರ ಬಳಿ ಸಾಲ ಪಡೆದಿದ್ದೇನೆ ಎನ್ನುವುದರ ಬಗ್ಗೆ ಜಮೀರ್ ಲೋಕಾಯುಕ್ತ ಪೊಲೀಸರಿಗೆ ಲಿಖಿತವಾಗಿ ಪಟ್ಟಿ ನೀಡಿದ್ದರು. ಈ ಪಟ್ಟಿಯಲ್ಲಿ ರಾಧಿಕಾ ಕುಮಾರಸ್ವಾಮಿ ಬಳಿಯಿಂದ 2.5 ಕೋಟಿ ರೂ. ಸಾಲ ಪಡೆದಿರುವ ವಿಚಾರವನ್ನು ಹಂಚಿಕೊಂಡಿದ್ದರು. ವಿಚಾರಣೆ ಸಂದರ್ಭದಲ್ಲಿ, ನಾನು 2012ರಲ್ಲಿ ಶಮಿಕಾ ಎಂಟರ್ಪ್ರೈಸಸ್ ಹೆಸರಿನಲ್ಲಿ ಯಶ್ ಹಾಗೂ ರಮ್ಯಾ ಅಭಿನಯದ ಲಕ್ಕಿ ಸಿನಿಮಾ ನಿರ್ಮಾಣ ಮಾಡಿದ್ದೆ. ಮನರಂಜನಾ ಚಾನೆಲ್ಗಳಿಗೆ ಈ ಸಿನಿಮಾದ ಸ್ಯಾಟಲೈಟ್ ಹಕ್ಕು ಹಾಗೂ ಚಲನಚಿತ್ರದ ಯಶಸ್ವಿನಿಂದ ಸಂಪಾದಿಸಿದ ಹಣದಲ್ಲಿ ಆರ್ಥಿಕ ಸಂಕಷ್ಟದಲ್ಲಿದ್ದ ಜಮೀರ್ ಅಹ್ಮದ್ ಅವರಿಗೆ 2.5 ಕೋಟಿ ರೂ.ಗಳನ್ನು ಸಾಲವಾಗಿ ನೀಡಿದ್ದೆ ಎಂದು ರಾಧಿಕಾ ತಿಳಿಸಿದ್ದಾಗಿ ಮೂಲಗಳಿಂದ ತಿಳಿದುಬಂದಿದೆ.
In connection with the ongoing investigation into alleged illegal assets of Minister B.Z. Jamir Ahmed Khan, the Lokayukta police have issued a notice to Health Minister Dinesh Gundu Rao.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm