ಬ್ರೇಕಿಂಗ್ ನ್ಯೂಸ್
26-12-20 04:47 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.26: ಒಂದೆಡೆ ರಾಜ್ಯ ಸರಕಾರ ನೈಟ್ ಕರ್ಫ್ಯೂ ವಿಚಾರದಲ್ಲಿ ಎಡವಟ್ಟು ಮಾಡಿಕೊಂಡಿದ್ದರೆ, ಇತ್ತ ಬ್ರಿಟನ್ ವೈರಸ್ ಈಗ ರಾಜ್ಯ ಸರಕಾರದ ಅಧಿಕಾರಿಗಳ ನಿದ್ದೆಗೆಡಿಸಿದೆ.
ಬ್ರಿಟನ್ ನಿಂದ ಕಳೆದ 15 ದಿನಗಳಲ್ಲಿ 1582 ಮಂದಿ ಬೆಂಗಳೂರಿಗೆ ಬಂದಿದ್ದಾರೆಂಬ ಅಂಕಿ ಅಂಶ ಇದೆ. ಆದರೆ, ಹೀಗೆ ಬಂದಿರುವ ಎಲ್ಲರನ್ನೂ ಪತ್ತೆ ಮಾಡಲು ಇನ್ನೂ ಅಧಿಕಾರಿಗಳಿಗೆ ಸಾಧ್ಯವಾಗಿಲ್ಲ. ಆ ಪೈಕಿ 151 ಮಂದಿ ಪತ್ತೆಯಾಗದೆ ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಕೇಳಿಬರುತ್ತಿದೆ.

ಬೆಂಗಳೂರಿನಲ್ಲಿ ಬ್ರಿಟನ್ ನಿಂದ ಆಗಮಿಸಿದ 11 ಮಂದಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಆದರೆ, ಅವರಲ್ಲಿ ರೂಪಾಂತರಿತ ವೈರಸ್ ಇದೆಯೇ ಎನ್ನೋದು ದೃಢಪಟ್ಟಿಲ್ಲ. ಅದರ ಕುರಿತು ನಿಮ್ಹಾನ್ಸ್ ಸೆಂಟರಿನ ಮೈಕ್ರೋ ಲ್ಯಾಬ್ ನಲ್ಲಿ ಪರೀಕ್ಷೆ ಕೈಗೊಳ್ಳಲಾಗಿದೆ. ಇನ್ನು ಈ 11 ಮಂದಿಯಿಂದ ಇತರೇ 28 ಮಂದಿ ಪ್ರಾಥಮಿಕ ಸಂಪರ್ಕ ಹೊಂದಿದ್ದಾರೆ ಎಂಬ ನೆಲೆಯಲ್ಲಿ ಅವರನ್ನು ಕ್ವಾರಂಟೈನ್ ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ನಾಪತ್ತೆಯಾಗಿರುವ 151 ಮಂದಿಯಲ್ಲಿ ಬ್ರಿಟನ್ ವೈರಸ್ ಕಂಡುಬಂದಿದ್ದರೆ, ಅದು ಇಡೀ ರಾಜ್ಯಕ್ಕೆ ಮಾರಕವಾಗುವ ಸಾಧ್ಯತೆಯಿದೆ. ಅವರು ಬೆಂಗಳೂರಿನಲ್ಲೇ ಇದ್ದಾರೆಯೇ ಬೇರೆ ಕಡೆಗೆ ತೆರಳಿದ್ದಾರೆಯೇ ಎನ್ನುವುದು ದೃಢಪಟ್ಟಿಲ್ಲ. ಈ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಕಾಲ್ ಡಿಟೈಲ್ಸ್, ಮೊಬೈಲ್ ನಂಬರ್ ಆಧರಿಸಿ, ತನಿಖೆ ನಡೆಸಲಾಗುವುದು ಎಂದು ಬೆಂಗಳೂರು ಬಿಬಿಎಂಪಿ ಆರೋಗ್ಯಾಧಿಕಾರಿ ವಿಜಯೇಂದ್ರ ತಿಳಿಸಿದ್ದಾರೆ.

ಈ ಪೈಕಿ ಯಾರೇ ಆದ್ರೂ ಉದ್ದೇಶಪೂರ್ವಕ ನಾಪತ್ತೆಯಾಗಿದ್ದರೆ ಅಂಥವರ ಮೇಲೆ ನ್ಯಾಯಾಲಯದಲ್ಲಿ ಮೊಕದ್ದೆ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
151 passengers who arrived from Britan to Bengaluru are said to be untraceable by the health department officials.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:03 pm
HK News Staffer
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm