ಬ್ರೇಕಿಂಗ್ ನ್ಯೂಸ್
26-09-25 05:06 pm HK News Desk ಕರ್ನಾಟಕ
ಚಿಕ್ಕಮಗಳೂರು, ಸೆ.26 : ಭ್ರಷ್ಟಾಚಾರ, ಅಧಿಕಾರ ದುರ್ಬಳಕೆ, ಆದಾಯ ತೆರಿಗೆಯಲ್ಲಿ ವಂಚನೆ ಆರೋಪದಡಿಯಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ ರಾಜೇಗೌಡ ಅವರ ವಿರುದ್ಧ ಚಿಕ್ಕಮಗಳೂರಿನ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ.
ಪ್ರಕರಣದಲ್ಲಿ ಶಾಸಕ ರಾಜೇಗೌಡ ಅವರ ಪತ್ನಿ ಪುಷ್ಪಾ ಮತ್ತು ಮಗ ರಾಜ್ದೇವ್ ಅವರನ್ನೂ ಎಫ್ ಐಆರ್ ನಲ್ಲಿ ಸೇರಿಸಲಾಗಿದೆ. ರಾಜೇಗೌಡ ವಿರುದ್ಧ ಬಿಜೆಪಿ ಮುಖಂಡ ದಿನೇಶ್ ಹೆಚ್.ಕೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಶಾಸಕ ರಾಜೇಗೌಡ ಅವರು ತಮ್ಮ ಆದಾಯಕ್ಕಿಂತಲೂ ಹೆಚ್ಚು ಆಸ್ತಿ ಸಂಪಾದಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.
ಇದೇ ಆರೋಪವನ್ನು ದಿನೇಶ್ ಅವರು ಲೋಕಾಯುಕ್ತ ಕಚೇರಿಗೂ ಸಲ್ಲಿಸಿದ್ದರು. ಲೋಕಾಯುಕ್ತರು ತನಿಖೆ ನಡೆಸಿ ವರದಿ ಸಲ್ಲಿಸಿದ್ದು ತನಿಖೆಯಲ್ಲಿ ಆರೋಪಗಳು ಸತ್ಯವೆಂದು ತಿಳಿದುಬಂದಿದೆ ಎನ್ನಲಾಗಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ದೂರನ್ನು ಗಂಭೀರ ಪರಿಗಣಿಸಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಗೆ (ಎಸ್ಪಿ) ತನಿಖೆಗೆ ಆದೇಶ ನೀಡಿತ್ತು. ನವೆಂಬರ್ 17ರೊಳಗೆ ತನಿಖಾ ವರದಿ ಸಲ್ಲಿಸಲು ನ್ಯಾಯಾಲಯ ತಿಳಿಸಿದೆ. ಈ ಆದೇಶದಂತೆ ಲೋಕಾಯುಕ್ತ ಕಚೇರಿ ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸಿದೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1988ರ ಅನ್ವಯ ರಾಜೇಗೌಡ ಮತ್ತು ಅವರ ಕುಟುಂಬದ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಎಫ್ಐಆರ್ನಲ್ಲಿ ಸೆಕ್ಷನ್ 7 (ಎರಡು ವ್ಯಕ್ತಿಗಳ ನಡುವೆ ಲಾಭಕ್ಕಾಗಿ ಪ್ರಕಟಣೆ), 8 ( ಲಾಭಕ್ಕಾಗಿ ಕೃತ್ಯ), 13 (ಅಧಿಕಾರದ ದುರ್ಬಳಕೆಯಿಂದ ಆಸ್ತಿ ಗಳಿಕೆ), 120(B) (ಕುಟ್ರೆ), 420 (ಮೋಸ), 193 (ಸಾಕ್ಷಿ ಮೋಸ) ಮತ್ತು 200 (ತಪ್ಪು ದೂರು) ಅಡಿಯಲ್ಲಿ ಆರೋಪಗಳನ್ನು ಹೊರಿಸಲಾಗಿದೆ.
The Lokayukta Police in Chikkamagaluru have registered an FIR against Sringeri Congress MLA T.D. Rajegowda, his wife Pushpa, and son Rajdev, on charges of corruption, misuse of power, and tax evasion.
13-10-25 10:09 pm
HK News Desk
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
D.K. Shivakumar, MLA Munirathna, RSS: ಮುನಿರತ್...
12-10-25 08:05 pm
13-10-25 10:37 pm
HK News Desk
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
Afghan Foreign Minister, Amir Khan Muttaqi: ಮ...
11-10-25 12:52 pm
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
13-10-25 10:04 pm
Mangalore Correspondent
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm