ಬ್ರೇಕಿಂಗ್ ನ್ಯೂಸ್
26-09-25 05:06 pm HK News Desk ಕರ್ನಾಟಕ
ಚಿಕ್ಕಮಗಳೂರು, ಸೆ.26 : ಭ್ರಷ್ಟಾಚಾರ, ಅಧಿಕಾರ ದುರ್ಬಳಕೆ, ಆದಾಯ ತೆರಿಗೆಯಲ್ಲಿ ವಂಚನೆ ಆರೋಪದಡಿಯಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ ರಾಜೇಗೌಡ ಅವರ ವಿರುದ್ಧ ಚಿಕ್ಕಮಗಳೂರಿನ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ.
ಪ್ರಕರಣದಲ್ಲಿ ಶಾಸಕ ರಾಜೇಗೌಡ ಅವರ ಪತ್ನಿ ಪುಷ್ಪಾ ಮತ್ತು ಮಗ ರಾಜ್ದೇವ್ ಅವರನ್ನೂ ಎಫ್ ಐಆರ್ ನಲ್ಲಿ ಸೇರಿಸಲಾಗಿದೆ. ರಾಜೇಗೌಡ ವಿರುದ್ಧ ಬಿಜೆಪಿ ಮುಖಂಡ ದಿನೇಶ್ ಹೆಚ್.ಕೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಶಾಸಕ ರಾಜೇಗೌಡ ಅವರು ತಮ್ಮ ಆದಾಯಕ್ಕಿಂತಲೂ ಹೆಚ್ಚು ಆಸ್ತಿ ಸಂಪಾದಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ಇದೇ ಆರೋಪವನ್ನು ದಿನೇಶ್ ಅವರು ಲೋಕಾಯುಕ್ತ ಕಚೇರಿಗೂ ಸಲ್ಲಿಸಿದ್ದರು. ಲೋಕಾಯುಕ್ತರು ತನಿಖೆ ನಡೆಸಿ ವರದಿ ಸಲ್ಲಿಸಿದ್ದು ತನಿಖೆಯಲ್ಲಿ ಆರೋಪಗಳು ಸತ್ಯವೆಂದು ತಿಳಿದುಬಂದಿದೆ ಎನ್ನಲಾಗಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ದೂರನ್ನು ಗಂಭೀರ ಪರಿಗಣಿಸಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಗೆ (ಎಸ್ಪಿ) ತನಿಖೆಗೆ ಆದೇಶ ನೀಡಿತ್ತು. ನವೆಂಬರ್ 17ರೊಳಗೆ ತನಿಖಾ ವರದಿ ಸಲ್ಲಿಸಲು ನ್ಯಾಯಾಲಯ ತಿಳಿಸಿದೆ. ಈ ಆದೇಶದಂತೆ ಲೋಕಾಯುಕ್ತ ಕಚೇರಿ ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸಿದೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1988ರ ಅನ್ವಯ ರಾಜೇಗೌಡ ಮತ್ತು ಅವರ ಕುಟುಂಬದ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಎಫ್ಐಆರ್ನಲ್ಲಿ ಸೆಕ್ಷನ್ 7 (ಎರಡು ವ್ಯಕ್ತಿಗಳ ನಡುವೆ ಲಾಭಕ್ಕಾಗಿ ಪ್ರಕಟಣೆ), 8 ( ಲಾಭಕ್ಕಾಗಿ ಕೃತ್ಯ), 13 (ಅಧಿಕಾರದ ದುರ್ಬಳಕೆಯಿಂದ ಆಸ್ತಿ ಗಳಿಕೆ), 120(B) (ಕುಟ್ರೆ), 420 (ಮೋಸ), 193 (ಸಾಕ್ಷಿ ಮೋಸ) ಮತ್ತು 200 (ತಪ್ಪು ದೂರು) ಅಡಿಯಲ್ಲಿ ಆರೋಪಗಳನ್ನು ಹೊರಿಸಲಾಗಿದೆ.
The Lokayukta Police in Chikkamagaluru have registered an FIR against Sringeri Congress MLA T.D. Rajegowda, his wife Pushpa, and son Rajdev, on charges of corruption, misuse of power, and tax evasion.
14-01-26 02:54 pm
Bangalore Correspondent
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm