ಬ್ರೇಕಿಂಗ್ ನ್ಯೂಸ್
29-09-25 02:49 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.29 : ಹಿಂದಿನ ಸರ್ಕಾರಕ್ಕಿಂತ ನಿಮ್ಮ ನೇತೃತ್ವದ ಸರ್ಕಾರದಲ್ಲಿ ಬಿಲ್ ಪಾವತಿಗೆ ಕಮಿಷನ್ ದುಪ್ಪಟ್ಟಾಗಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯ ಗುತ್ತಿಗೆದಾರರ ಸಂಘ ಪತ್ರ ಬರೆದಿದೆ.
ತಾವು ವಿರೋಧ ಪಕ್ಷದ ನಾಯಕರಾಗಿದ್ದಾಗ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಗುತ್ತಿಗೆದಾರರ ಬಾಕಿ ಹಣ ಬಿಡುಗಡೆಗೆ ಯಾವುದೇ ಕಮಿಷನ್ ತೆಗೆದುಕೊಳ್ಳುವುದಿಲ್ಲ ಎಂದು ತಿಳಿಸಿದ್ದೀರಿ. ಆದರೆ, ಹಿಂದಿನ ಸರ್ಕಾರಕ್ಕಿಂತ ಎಲ್ಲ ಇಲಾಖೆಗಳಲ್ಲೂ ಈಗ ಕಮಿಷನ್ ದುಪ್ಪಟ್ಟು ಆಗಿದೆ ಎಂದು ನಿಮ್ಮ ಗಮನಕ್ಕೆ ತರಲು ಸಂಘ ವಿಷಾದ ವ್ಯಕ್ತಪಡಿಸುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ರಾಜ್ಯದಲ್ಲಿ ಹಿಂದಿದ್ದ ಬಿಜೆಪಿ ನೇತೃತ್ವದ ಸರ್ಕಾರಕ್ಕಿಂತ ಈಗಿನ ಕಾಂಗ್ರೆಸ್ ಸರ್ಕಾರದಲ್ಲಿ, ಅಧಿಕಾರಿಗಳು ಹೆಚ್ಚು ಕಮಿಷನ್ ಪಡೆಯುತ್ತಾರೆ ಎಂದು ರಾಜ್ಯ ಗುತ್ತಿಗೆದಾರರ ಸಂಘ 2025ರ ಮಾರ್ಚ್ನಲ್ಲಿ ಆರೋಪಿಸಿತ್ತು. ಆಗ ಮುಖ್ಯಮಂತ್ರಿಯವರು ಗುತ್ತಿಗೆದಾರರೊಂದಿಗೆ ಸಭೆ ನಡೆಸಿ, ಏಪ್ರಿಲ್ನಲ್ಲಿ ಶೇ 50ರಷ್ಟು ಬಾಕಿ ಬಿಲ್ ಬಿಡುಗಡೆ ಮಾಡುವ ಭರವಸೆ ನೀಡಿದ್ದರು.
ಸುಮಾರು ಎರಡು ವರ್ಷಗಳಿಂದ ಗುತ್ತಿಗೆದಾರರಿಗೆ ಬಾಕಿ ಇರುವ ಹಣ ಬಿಡುಗಡೆ ವಿಚಾರ ಮತ್ತು ಹಲವು ಸಮಸ್ಯೆಗಳ ಬಗ್ಗೆ ನಿಮ್ಮ ಜೊತೆ ಹಲವು ಬಾರಿ ಸಂಘದ ಪದಾಧಿಕಾರಿಗಳು ಚರ್ಚೆ ಮಾಡಿದ್ದೇವೆ. ನಮ್ಮ ಸಂಘವು ಭ್ರಷ್ಟಾಚಾರದ ವಿರುದ್ಧ ಹೋರಾಡಿದ ಫಲವಾಗಿ, ತಮ್ಮ ಸರ್ಕಾರ ಬರುವುದಕ್ಕೆ ಸ್ವಲ್ಪವಾದರೂ ನಾವು ಕಾರಣಕರ್ತರಾಗಿದ್ದೇವೆ ಎಂಬುದನ್ನು ನಿಮ್ಮ ಗಮನಕ್ಕೆ ತರುತ್ತಿದ್ದೇವೆ ಎಂದು ಸಂಘದ ಅಧ್ಯಕ್ಷ ಆರ್. ಮಂಜುನಾಥ್ ಪತ್ರದಲ್ಲಿ ತಿಳಿಸಿದ್ದಾರೆ.
The Karnataka State Contractors’ Association has written to Chief Minister Siddaramaiah alleging that commission rates for bill payments have doubled under the present Congress government compared to the previous BJP regime. The association reminded the CM of his earlier assurance that no commissions would be taken once his government came to power.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm