ಬ್ರೇಕಿಂಗ್ ನ್ಯೂಸ್
30-09-25 03:58 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.30 : ರಾಯಚೂರು ಜಿಲ್ಲೆಗೆ ಗಡೀಪಾರು ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್ ರಿಲೀಫ್ ಸಿಕ್ಕಿದೆ. ಅಕ್ಟೋಬರ್ 8 ರ ವರೆಗೆ ಗಡಿಪಾರು ಆದೇಶ ಜಾರಿಗೊಳಿಸದಂತೆ ಕೊಂಚ ರಿಲೀಫ್ ನೀಡಲಾಗಿದೆ. ಅ.8ಕ್ಕೆ ವಿಚಾರಣೆ ಮುಂದೂಡಿದ್ದು ಅಲ್ಲಿಯ ವರೆಗೆ ಮಧ್ಯಂತರ ತಡೆ ನೀಡಿದೆ.
ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಗೆ ಗಡಿಪಾರು ಮಾಡಿದ್ದ ಪುತ್ತೂರು ವಿಭಾಗಾಧಿಕಾರಿ, ಬಂಟ್ವಾಳ ಡಿವೈಎಸ್ಪಿ ಸೇರಿದಂತೆ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಬೆಳ್ತಂಗಡಿ ಠಾಣೆಯಲ್ಲಿ ಕಳೆದೊಂದು ತಿಂಗಳಲ್ಲಿ ದಾಖಲಾದ ನಾಲ್ಕು ಪ್ರಕರಣ ಸೇರಿ ಒಟ್ಟು 32 ಪ್ರಕರಣ ಎದುರಿಸುತ್ತಿದ್ದಾರೆಂದು ಮಹೇಶ್ ಶೆಟ್ಟಿ ಅವರನ್ನು ಗಡೀಪಾರು ಮಾಡಲು ಆದೇಶ ಮಾಡಲಾಗಿತ್ತು.
ತಿಮರೋಡಿ ಪರ ವಕೀಲರು ಗಡಿಪಾರು ಆದೇಶ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದು ಸಿ.ಎಂ.ಪುಣಚ್ಚ ಅವರಿದ್ದ ಏಕಸದಸ್ಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ರಾಜ್ಯ ಸರ್ಕಾರ, ಪುತ್ತೂರು ಎಸಿ, ಡಿವೈಎಸ್ಪಿ ಬಂಟ್ವಾಳ, ಬೆಳ್ತಂಗಡಿ ಇನ್ಸ್ ಪೆಕ್ಟರ್ ಅವರನ್ನು ಪ್ರತಿವಾದಿಯಾಗಿಸಲಾಗಿತ್ತು.
ಸೆ.18ರಂದು ಪುತ್ತೂರು ಎಸಿ ಸ್ಟೆಲ್ಲಾ ವರ್ಗೀಸ್ ಅವರು 18-09-2025 ರಿಂದ 17-09-2026 ರ ವರೆಗೆ ಒಂದು ವರ್ಷ ಅವಧಿಗೆ ಮಹೇಶ್ ಶೆಟ್ಟಿ ಅವರನ್ನು ಗಡೀಪಾರು ಮಾಡಿ ಆದೇಶ ಹೊರಡಿಸಿದ್ದರು. ರಾಯಚೂರು ಜಿಲ್ಲೆಯ ಮಾನ್ವಿ ಪೊಲೀಸ್ ಠಾಣಾ ಸರಹದ್ದಿಗೆ ಗಡಿಪಾರು ಮಾಡಲು ಆದೇಶ ಮಾಡಲಾಗಿತ್ತು.
The Karnataka High Court has granted interim relief to Mahesh Shetty Timarodi, staying the externment order issued against him to Raichur district until October 8. Notices have been served to Puttur Assistant Commissioner, Bantwal DySP, and others who passed the order citing multiple criminal cases, including four recent ones in Belthangady. The matter will be heard again on October 8.
14-01-26 02:54 pm
Bangalore Correspondent
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm