ಬ್ರೇಕಿಂಗ್ ನ್ಯೂಸ್
05-10-25 07:18 pm HK News Desk ಕರ್ನಾಟಕ
ಹಾಸನ, ಅ.5 : ಹಾಸನ ಜಿಲ್ಲೆಯಲ್ಲಿ ಜಾತಿ ಗಣತಿಗೆ ತೆರಳಿದ್ದ ಶಿಕ್ಷಕಿ ಮತ್ತು ಅವರ ಪತಿಯ ಮೇಲೆ ಬೀದಿ ನಾಯಿಗಳು ಅಟ್ಟಾಡಿಸಿ ಕಚ್ಚಿರುವ ಘಟನೆ ನಡೆದಿದೆ. ಶಿಕ್ಷಕಿಗೆ ಮುಖ, ಕೈ-ಕಾಲು, ದೇಹದ ಹಲವು ಭಾಗಗಳಿಗೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿದೆ.
ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ನೆಹರು ನಗರದಲ್ಲಿ ಘಟನೆ ನಡೆದಿದೆ. ಶಿಕ್ಷಕಿಯನ್ನು ಬಚಾವ್ ಮಾಡಲು ಬಂದ ಇತರ ಏಳು ಮಂದಿ ಮೇಲೂ ನಾಯಿಗಳ ದಾಳಿ ಮಾಡಿವೆ. ಬೀದಿ ನಾಯಿಗಳ ದಾಳಿಗೆ ಒಳಗಾಗಿ ಶಿಕ್ಷಕಿ ಚಿಕ್ಕಮ್ಮ ತೀವ್ರ ಗಾಯಗೊಂಡಿದ್ದು ಇವರು ಪಟ್ಟಣದ ಜಿಎಚ್ಪಿಎಸ್ ಶಾಲೆಯ ಶಿಕ್ಷಕಿಯಾಗಿದ್ದಾರೆ.



ಚಿಕ್ಕಮ್ಮ ಅವರು ತನಗೆ ನೀಡಿದ್ದ ಸಮೀಕ್ಷೆ ಮುಗಿಸಲು ಇಂದು ಕಡೆಯ ದಿನವಾಗಿದ್ದರಿಂದ ಪತಿ ಶಿವಕುಮಾರ್ ಜೊತೆಗೆ ತೆರಳಿದ್ದರು. ಅವರಿಗೆ ನೀಡಲಾಗಿದ್ದ ಸಮೀಕ್ಷೆಯಲ್ಲಿ ಮೂರು ಮನೆ ಮಾತ್ರ ಬಾಕಿಯಿತ್ತು. ಭಾನುವಾರ ಮಧ್ಯಾಹ್ನ ನೆಹರು ನಗರದ ಜೈಭೀಮ್ ಏರಿಯಾಕ್ಕೆ ತೆರಳಿದ್ದಾಗ ಬೀದಿ ನಾಯಿಗಳು ಅಟ್ಟಿಸಿಕೊಂಡು ಬಂದಿವೆ. ಈ ವೇಳೆ ಹತ್ತಕ್ಕೂ ಹೆಚ್ಚು ಬೀದಿ ನಾಯಿಗಳು ದಾಳಿ ಮಾಡಿದ್ದು ಪತ್ನಿಯನ್ನು ಬಿಡಿಸಿಕೊಳ್ಳಲು ಬಂದ ಪತಿ ಶಿವಕುಮಾರ್ಗೂ ಕಚ್ಚಿದೆ. ಇದನ್ನು ಕಂಡು ಸ್ಥಳೀಯರು ಪತಿ- ಪತ್ನಿಯನ್ನು ಬಚಾವ್ ಮಾಡಲು ಮುಂದಾಗಿದ್ದಾರೆ. ಆದರೆ ಈ ವೇಳೆ, ಬೀದಿ ನಾಯಿಗಳು ಧರ್ಮ, ಪೃಥ್ವಿ, ಸಚಿನ್ ಸೇರಿ ಏಳು ಮಂದಿಗೆ ಕಚ್ಚಿ ಗಾಯಗೊಳಿಸಿದೆ. ಇದೇ ವೇಳೆ, ಅಲ್ಲಿಯೇ ಆಟವಾಡುತ್ತಿದ್ದ ಐದು ವರ್ಷದ ಬಾಲಕ ಕಿಶನ್ ಮೇಲೂ ನಾಯಿಗಳು ದಾಳಿ ಮಾಡಿ ಕಚ್ಚಿದೆ. ತೀವ್ರ ಗಾಯಗೊಂಡಿರುವ ಶಿಕ್ಷಕಿ ಚಿಕ್ಕಮ್ಮ ಹಾಗೂ ಉಳಿದ ಗಾಯಾಳುಗಳಿಗೆ ಬೇಲೂರು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
In a shocking incident in Belur town, Hassan district, a government school teacher and her husband were brutally attacked by a pack of stray dogs while conducting a caste census survey. The teacher, Chikkamma, sustained serious injuries to her face, hands, legs, and body. Her husband Shivakumar, who tried to rescue her, was also bitten.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm