ಬ್ರೇಕಿಂಗ್ ನ್ಯೂಸ್
05-10-25 07:18 pm HK News Desk ಕರ್ನಾಟಕ
ಹಾಸನ, ಅ.5 : ಹಾಸನ ಜಿಲ್ಲೆಯಲ್ಲಿ ಜಾತಿ ಗಣತಿಗೆ ತೆರಳಿದ್ದ ಶಿಕ್ಷಕಿ ಮತ್ತು ಅವರ ಪತಿಯ ಮೇಲೆ ಬೀದಿ ನಾಯಿಗಳು ಅಟ್ಟಾಡಿಸಿ ಕಚ್ಚಿರುವ ಘಟನೆ ನಡೆದಿದೆ. ಶಿಕ್ಷಕಿಗೆ ಮುಖ, ಕೈ-ಕಾಲು, ದೇಹದ ಹಲವು ಭಾಗಗಳಿಗೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿದೆ.
ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ನೆಹರು ನಗರದಲ್ಲಿ ಘಟನೆ ನಡೆದಿದೆ. ಶಿಕ್ಷಕಿಯನ್ನು ಬಚಾವ್ ಮಾಡಲು ಬಂದ ಇತರ ಏಳು ಮಂದಿ ಮೇಲೂ ನಾಯಿಗಳ ದಾಳಿ ಮಾಡಿವೆ. ಬೀದಿ ನಾಯಿಗಳ ದಾಳಿಗೆ ಒಳಗಾಗಿ ಶಿಕ್ಷಕಿ ಚಿಕ್ಕಮ್ಮ ತೀವ್ರ ಗಾಯಗೊಂಡಿದ್ದು ಇವರು ಪಟ್ಟಣದ ಜಿಎಚ್ಪಿಎಸ್ ಶಾಲೆಯ ಶಿಕ್ಷಕಿಯಾಗಿದ್ದಾರೆ.



ಚಿಕ್ಕಮ್ಮ ಅವರು ತನಗೆ ನೀಡಿದ್ದ ಸಮೀಕ್ಷೆ ಮುಗಿಸಲು ಇಂದು ಕಡೆಯ ದಿನವಾಗಿದ್ದರಿಂದ ಪತಿ ಶಿವಕುಮಾರ್ ಜೊತೆಗೆ ತೆರಳಿದ್ದರು. ಅವರಿಗೆ ನೀಡಲಾಗಿದ್ದ ಸಮೀಕ್ಷೆಯಲ್ಲಿ ಮೂರು ಮನೆ ಮಾತ್ರ ಬಾಕಿಯಿತ್ತು. ಭಾನುವಾರ ಮಧ್ಯಾಹ್ನ ನೆಹರು ನಗರದ ಜೈಭೀಮ್ ಏರಿಯಾಕ್ಕೆ ತೆರಳಿದ್ದಾಗ ಬೀದಿ ನಾಯಿಗಳು ಅಟ್ಟಿಸಿಕೊಂಡು ಬಂದಿವೆ. ಈ ವೇಳೆ ಹತ್ತಕ್ಕೂ ಹೆಚ್ಚು ಬೀದಿ ನಾಯಿಗಳು ದಾಳಿ ಮಾಡಿದ್ದು ಪತ್ನಿಯನ್ನು ಬಿಡಿಸಿಕೊಳ್ಳಲು ಬಂದ ಪತಿ ಶಿವಕುಮಾರ್ಗೂ ಕಚ್ಚಿದೆ. ಇದನ್ನು ಕಂಡು ಸ್ಥಳೀಯರು ಪತಿ- ಪತ್ನಿಯನ್ನು ಬಚಾವ್ ಮಾಡಲು ಮುಂದಾಗಿದ್ದಾರೆ. ಆದರೆ ಈ ವೇಳೆ, ಬೀದಿ ನಾಯಿಗಳು ಧರ್ಮ, ಪೃಥ್ವಿ, ಸಚಿನ್ ಸೇರಿ ಏಳು ಮಂದಿಗೆ ಕಚ್ಚಿ ಗಾಯಗೊಳಿಸಿದೆ. ಇದೇ ವೇಳೆ, ಅಲ್ಲಿಯೇ ಆಟವಾಡುತ್ತಿದ್ದ ಐದು ವರ್ಷದ ಬಾಲಕ ಕಿಶನ್ ಮೇಲೂ ನಾಯಿಗಳು ದಾಳಿ ಮಾಡಿ ಕಚ್ಚಿದೆ. ತೀವ್ರ ಗಾಯಗೊಂಡಿರುವ ಶಿಕ್ಷಕಿ ಚಿಕ್ಕಮ್ಮ ಹಾಗೂ ಉಳಿದ ಗಾಯಾಳುಗಳಿಗೆ ಬೇಲೂರು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
In a shocking incident in Belur town, Hassan district, a government school teacher and her husband were brutally attacked by a pack of stray dogs while conducting a caste census survey. The teacher, Chikkamma, sustained serious injuries to her face, hands, legs, and body. Her husband Shivakumar, who tried to rescue her, was also bitten.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm