ಬ್ರೇಕಿಂಗ್ ನ್ಯೂಸ್
05-10-25 07:57 pm HK News Desk ಕರ್ನಾಟಕ
ಬಾಗಲಕೋಟ, ಅ.5 : ಸಿಎಂ ಅವ್ರ ಬಗ್ಗೆ ಗೌರವ ಇದೆ, ಆದರೆ ಸಮಾಜ ವಿಘಟನೆ ಮಾಡುವವರಿಗೆ ಸಪೋರ್ಟ್ ಮಾಡುವುದನ್ನು ಬಯಸಲ್ಲ. ಆ ತಂಡದಿಂದ ಹಿಂದೆಯೂ ಅಂತರಹ ಕಾಯ್ದುಕೊಳ್ಳಿ ಅಂತ ಹೇಳಿದ್ದೆವು. ಈಗಲೂ ಅಂತರ ಕಾಯ್ದುಕೊಳ್ಳಿ ಅಂತ ಹೇಳ್ತೀವಿ. ಆ ಗುಂಪಿನಲ್ಲಿ ರಾಜ್ಯದ ಸಿಎಂ ಪಾಲ್ಗೊಳ್ಳೋದು ಸೂಕ್ತವಲ್ಲ. ಇದರಿಂದ ಕಾಂಗ್ರೆಸ್ ಪಕ್ಷಕ್ಕೆ ಕೇಡು ಬಂದೀತು ಎಂದು ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ.
ಹಿಂದೆ ಬಹುದೊಡ್ಡ ನಾಯಕರು, ದೊಡ್ಡ ಸ್ವಾಮೀಜಿಗಳು ಪ್ರತ್ಯೇಕ ಧರ್ಮ ಮಾಡಲಿಕ್ಕೆ ಹೋಗಿ ಕೈಸುಟ್ಟುಕೊಂಡಿದ್ದಾರೆ. ಇವತ್ತು ಮತ್ತೆ ವ್ಯರ್ಥ ಪ್ರಯತ್ನ ಮಾಡ್ತಿದ್ದಾರೆ. ಬಹುಶಃ ಪ್ರತಿ ಜಿಲ್ಲೆಯಲ್ಲಿ ಜನತೆಗೆ ವಿನಂತಿ ಮಾಡ್ಕೊಂಡಿದ್ದಾರೆ. ಸಿಎಂಗೆ ಸನ್ಮಾನ ಮಾಡ್ತೇವೆ ಅಂತ ಹೇಳಿ ಬರ ಹೇಳಿದ್ದಾರೆ. ಬಹಳಷ್ಟು ಮಠಾದಿಪತಿಗಳಿಗೆ ಫೋನ್ ಕರೆ ಮಾಡಿ ಬಹು ಸಂಖ್ಯೆಯಲ್ಲಿ ಬರಬೇಕು ಅಂತ ತಿಳಿಸಿದ್ದಾರೆ.
ಪ್ರತ್ಯೇಕ ಲಿಂಗಾಯತರು ಅನ್ನುವ ಹೆಸರನ್ನ ಮಾಡ್ತಿರೋದು ಅಖಂಡ ವೀರಶೈವ ಲಿಂಗಾಯತ ಸಮಾಜಕ್ಕೆ ಮಾಡ್ತಿರೋ ದ್ರೋಹವಾಗಿದೆ. ಸಮಾಜದ ವಿಘಟನೆ ಕೆಲಸ ಇದಾಗಿದೆ ಅಂತ ಸಿಎಂ ಗಮನಕ್ಕೆ ತರಲು ಬಯಸುತ್ತೇವೆ. ಇಡೀ ರಾಜ್ಯದ ಮಠಾಧೀಶರ ಒಲವು ಏನಿದೆ ಅನ್ನೋದನ್ನ ಹುಬ್ಬಳ್ಳಿಯ ಸಮಾವೇಶದಲ್ಲಿ ತಿಳಿಸಲಾಗಿದೆ.
ಕರ್ನಾಟಕ, ಆಂಧ್ರ, ಮಹಾರಾಷ್ಟ್ರ, ತೆಲಂಗಾಣ, ಕೇರಳ ಇತ್ಯಾದಿ ಎಲ್ಲ ರಾಜ್ಯಗಳ ಜನ ವೀರಶೈವ ಲಿಂಗಾಯತ ಒಂದೇ ಅನ್ನೋದ್ರ ಕಡೆ ಇದ್ದಾರೆ ಹೊರತು, ಭಿನ್ನ ಧ್ವನಿ ಎತ್ತಿಲ್ಲ. ಕೆಲವೇ ಬೆರಳೆಣಿಕೆಯ ಸಮಾಜಕ್ಕೆ ಬೇಡವಾದ ಮಠಾಧಿಪತಿಗಳ ಈ ಬೇಡಿಕೆ ಹೊಂದಿದ್ದಾರೆ. ಜನರ ಭಿನ್ನ ಧ್ವನಿಯನ್ನು ಮುಖ್ಯಮಂತ್ರಿಗಳು ಮನ್ನಿಸಿದರೆ ತಮ್ಮ ವ್ಯಕ್ತಿತ್ವ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಹಾನಿ ಉಂಟಾಗುತ್ತೆ ಎಂದು ಫಕೀರ ದಿಂಗಾಲೇಶ್ವರ ಸ್ವಾಮೀಜಿ ಎಚ್ಚರಿಕೆ ಕೊಟ್ಟಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಸವ ಸಂಸ್ಕೃತಿ ಅಭಿಯಾನ ಹೆಸರಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮದ ಪರವಾಗಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಮುಖ್ಯಮಂತ್ರಿ ಪಾಲ್ಗೊಳ್ಳಬಾರದು ಎಂದು ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ.
Lingayat seer Fakir Dingaleshwara Swamiji has cautioned Chief Minister Siddaramaiah against supporting efforts to create a separate Lingayat identity, calling it divisive and harmful to both society and the Congress party.
14-01-26 01:34 pm
Bangalore Correspondent
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm