ಬ್ರೇಕಿಂಗ್ ನ್ಯೂಸ್
07-10-25 05:23 pm Bangalore Correspondent ಕರ್ನಾಟಕ
ಬೆಂಗಳೂರು, ಅ 07 : ಜಾತಿ ಗಣತಿ ದಿನಾಂಕ ವಿಸ್ತರಣೆಯಾದ ಹಿನ್ನೆಲೆ ಕರ್ನಾಟಕ ಸರ್ಕಾರವು ಶಾಲೆಗಳ ದಸರಾ ರಜೆಯನ್ನು ವಿಸ್ತರಣೆ ಮಾಡಿದೆ. ಈ ಮೂಲಕ ಅಕ್ಟೋಬರ್ 7 ಕ್ಕೆ ಮುಕ್ತಾಯವಾಗಬೇಕಿದ್ದ ರಜೆ ಅಕ್ಟೋಬರ್ 18ವರೆಗೂ ವಿಸ್ತರಣೆಯಾಗಿದೆ. ಇನ್ನು ಶಾಲೆಗಳು ಪುನರಾರಂಭವಾಗುವುದು ಅಕ್ಟೋಬರ್ 23ಕ್ಕೆ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನ ವಿಧಾನಸೌಧದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಜಾತಿ ಗಣತಿ ಸಮೀಕ್ಷೆ ಕಾರ್ಯವನ್ನು ಶಿಕ್ಷಕರು ಕೈಗೊಂಡಿದ್ದಾರೆ. ನಿಗದಿತ ಕಾಲಾವಧಿಯಲ್ಲಿ ಜಾತಿ ಗಣತಿ ಕಾರ್ಯ ಪೂರ್ಣಗೊಂಡಿಲ್ಲ. ಗಣತಿ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ಹೀಗಾಗಿ, ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ದಸರಾ ರಜೆಯನ್ನು ವಿಸ್ತರಣೆ ಮಾಡಲಾಗಿದೆ
ಶಾಲಾ ಶಿಕ್ಷಕರ ಮನವಿ ಮೇರೆಗೆ ಕ್ರಮ;
ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಮತ್ತು ಶಿಕ್ಷಕರ ಸಂಘ ಹೆಚ್ಚುವರಿಯಾಗಿ 10 ದಿನಗಳ ಕಾಲಾವಕಾಶ ಕೇಳಿ ಮನವಿ ಮಾಡಿದ್ದಾರೆ. ಈ ಮನವಿ ಪುರಸ್ಕರಿಸಿ 8 ವರ್ಕಿಂಗ್ ಡೇಸ್ ರಜೆ ಘೋಷಿಸಲಾಗಿದೆ. ಜತೆಗೆ ರಜಾ ಅವಧಿಯನ್ನು ಮುಂದಿನ ದಿನಗಳಲ್ಲಿ ಹೆಚ್ಚುವರಿ ತರಗತಿಯನ್ನು ನಡೆಸಿ ಸರಿದೂಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಪಿಯು ಉಪನ್ಯಾಸಕರಿಗೆ ಸಮೀಕ್ಷೆಯಿಂದ ವಿನಾಯ್ತಿ
ಅಕ್ಟೋಬರ್ 12 ರಿಂದ ದ್ವಿತೀಯ ಪಿಯು ಮಧ್ಯಂತರ ಪರೀಕ್ಷೆ ನಡೆಯುತ್ತಿರುವುದರಿಂದ ಸಮೀಕ್ಷೆ ಕಾರ್ಯದಿಂದ ಪಿಯುಸಿ ಉಪನ್ಯಾಸಕರಿಗೆ ವಿನಾಯ್ತಿ ನೀಡಲಾಗಿದೆ ಎಂದರು.
1.2 ಲಕ್ಷ ಶಿಕ್ಷಕರು ಸಮೀಕ್ಷೆಯಲ್ಲಿ;
ಸೆಪ್ಟೆಂಬರ್ 2 ರಿಂದ ರಾಜ್ಯದ ಜನರ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸಮೀಕ್ಷೆ ಶುರುವಾಗಿದೆ. ಸಮೀಕ್ಷೆ ಇವತ್ತು ಮುಗಿಯಬೇಕಿತ್ತು. ಕೆಲವು ಜಿಲ್ಲೆಗಳಲ್ಲಿ ಪೂರ್ತಿ ಆಗಿಲ್ಲ. ಕೊಪ್ಪಳ ಶೇ97 ಆಗಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ67 ರಷ್ಟು ಆಗಿದೆ. ಹೀಗೆ ವ್ಯತ್ಯಾಸಗಳಿವೆ. ಹೀಗಾಗಿ ಶಿಕ್ಷಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಆಯೋಗ ಚರ್ಚಿಸಿದ್ದಾರೆ. 1 ಲಕ್ಷ 20 ಸಾವಿರ ಶಿಕ್ಷಕರು ಸೇರಿ ಒಂದು ಲಕ್ಷ ಅರವತ್ತು ಸಾವಿರ ಸಿಬ್ಬಂದಿ ಸಮೀಕ್ಷೆಯಲ್ಲಿ ತೊಡಗಿದ್ದಾರೆ ಎಂದು ಹೇಳಿದರು.
The Karnataka government has extended Dasara holidays for government and aided schools until October 18, following the extension of the state’s caste census deadline. Originally scheduled to end on October 7, the break will now continue for an additional 10 days, with schools set to reopen on October 23.
14-01-26 01:34 pm
Bangalore Correspondent
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm