ಬ್ರೇಕಿಂಗ್ ನ್ಯೂಸ್
07-10-25 10:49 pm Bangalore Correspondent ಕರ್ನಾಟಕ
ಬೆಂಗಳೂರು, ಅ.07: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ನಡೆಯುತ್ತಿರುವ ಸ್ಟೂಡಿಯೋಗೆ ರಾಮನಗರ ಜಿಲ್ಲಾಡಳಿತದಿಂದ ದಾಳಿ ನಡೆಸಿ ಶೋ ಸ್ಥಗಿತಗೊಳಿದರ ಹಿಂದೆ ರಾಜಕೀಯ ಷಡ್ಯಂತ್ರ ಇದೆ. ಇದು ನಟ್ಟು ಬೋಲ್ಟ್ನ ಪ್ರತಿಫಲ ಎಂದು ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಶಾಂತ್ ಸಂಬರಗಿ ಆರೋಪ ಮಾಡಿದ್ದಾರೆ.
ಬಿಗ್ ಬಾಸ್ ಮನೆ ಬಂದ್ ಮಾಡಿಸಿದ ಹಿನ್ನೆಲೆ ಮಂಗಳವಾರ ಸಂಜೆ ಫೇಸ್ಬುಕ್ ಲೈವ್ ಬಂದ ಪ್ರಶಾಂತ್ ಸಂಬರಗಿಯವರು ಕಾಂಗ್ರೆಸ್ ಸರ್ಕಾರ ಹಾಗೂ ಡಿಸಿಎಂ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಇದು ನಟ ಸುದೀಪ್ ಹಾಗೂ ಕರ್ನಾಟಕದ ಜೆಡಿಎಸ್ ಪಕ್ಷದ ಕೇಂದ್ರ ಸಚಿವರನ್ನು ಗುರಿಯಾಗಿಸಿಕೊಂಡು ಸರ್ಕಾರ ಆಡಿದ ಆಟ ಎಂದು ದೂರಿದ್ದಾರೆ.


ಕಳೆದ ವರ್ಷ ಬಿಗ್ ಬಾಸ್ ಸೀಜನ್ ನಡೆಯುವಾಗಲೂ ಹುಲಿ ಉಗರು ಕೇಸ್ ನಡೆಸಿ ದೊಡ್ಡ ರಂಪ ಮಾಡಲಾಗಿತ್ತು. ಇದು ಕಾಂಗ್ರೆಸ್ ಸರ್ಕಾರ ಯಾರನ್ನೋ ಒಬ್ಬರನ್ನು ಗುರಿಯಾಗಿಸಿಕೊಂಡು ಈ ರೀತಿ ಮಾಡುತ್ತಿದೆ. ಸ್ಟೂಡಿಯೋ ಇರುವ ಜಾಗ ಮಾಲೀಕರು ಜೆಡಿಎಸ್ ಕೇಂದ್ರ ಸಚಿವರೊಬ್ಬರಿಗೆ ಹತ್ತಿರದ ವ್ಯಕ್ತಿಯಾಗಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಸಂಬರಗಿ ಹೇಳಿದರು.
ನಟ ಸುದೀಪ್ ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕರು. ಅವರು ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡಿದ್ದರು. ಜತೆಗೆ ಅವರು ಡಿಸಿಎಂ ಈ ಹಿಂದೆ ಹೇಳಿದ್ದ ನಟ್ಟು ಬೋಲ್ಟ್ ಟೈಟ್ ಮಾಡ್ತೇನೆ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದರು. ಈಗ ಬಿಗ್ ಬಾಸ್ ಶೋ ಆರಂಭವಾಗಿದ್ದು, ಅವರನ್ನು ಗುರಿಯಾಗಿಸಿಕೊಂಡು ಈ ರಾಜಕೀಯ ಆಟ ಆಡಿದ್ದಾರೆ. ನಟ್ಟು ಬೋಲ್ಟು ಟೈಟ್ ಮಾಡುತ್ತೇನೆ ಎಂದು ಈ ಹಿಂದೆ ರಾಜಕಾರಣಿ ಹೇಳಿದಂತೆ ನಡೆದುಕೊಂಡಿದ್ದಾರೆ ಎಂದು ಸಂಬರಗಿ ಕಿಡಿಕಾರಿದ್ದಾರೆ.
ಕ್ಷುಲ್ಲಕ ಕಾರಣ ನೀಡಿ ಬಿಗ್ ಬಾಸ್ ವಿರುದ್ಧ ಕ್ರಮ
ಸರ್ಕಾರವು ಕ್ಷುಲ್ಲಕ ಕಾರಣ ನೀಡಿ ಬಿಗ್ ಬಾಸ್ ವಿರುದ್ಧ ಕ್ರಮಕೈಗೊಂಡಿದೆ. ಇದು ಕನ್ನಡ ಮನೋರಂಜನಾ ವಲಯವು ತಲೆ ತಗ್ಗಿಸಬೇಕಾದ ಸಂಗತಿ. ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ಕೊಟ್ಟ 30 ದಿನಗಳವರೆಗೂ ಅವಕಾಶ ನೀಡಲಾಗುತ್ತದೆ. ಆದರೆ, ಸರ್ಕಾರವು ದೆಹಲಿಯಲ್ಲಿರುವ ಕರ್ನಾಟಕ ಮೂಲದ ಕೇಂದ್ರ ಸಚಿವರು, ಮಾಜಿ ಮುಖ್ಯಮಂತ್ರಿಗೆ ಸಂದೇಶ ನೀಡುವ ಉದ್ದೇಶದಿಂದ ಈ ಕೃತ್ಯ ಮಾಡಿದೆ ಎಂದು ಹೇಳಿದ್ದಾರೆ.
The sudden halt of Bigg Boss Kannada Season 12 after the Ramnagara district administration sealed Jalewood Studios has now taken a political turn. Former contestant Prashanth Sambargi has alleged that the action was a politically motivated move targeting actor Sudeep and certain JDS leaders close to the studio owners.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm