ಬ್ರೇಕಿಂಗ್ ನ್ಯೂಸ್
07-10-25 11:20 pm Bangalore Correspondent ಕರ್ನಾಟಕ
ಬೆಂಗಳೂರು, ಅ.8 : ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತರಗೊಂಡರೂ ಅವರಿಗೆ ಎಸ್ಸಿ ಜಾತಿ ಪ್ರಮಾಣಪತ್ರ ನೀಡಲು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. 101 ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ಯಾರೇ ಆದರೂ ಬೌದ್ಧ ಧರ್ಮಕ್ಕೆ ಮತಾಂತರಗೊಂಡರೂ ಅವರಿಗೆ ಇದು ಅನ್ವಯವಾಗುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆ ಹೊರಡಿಸಿ ಆದೇಶದಲ್ಲಿ ತಿಳಿಸಿದೆ.
ಕರ್ನಾಟಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ (ನೇಮಕಾತಿ ಇತ್ಯಾದಿಗಳಲ್ಲಿ ಮೀಸಲಾತಿ) ಕಾಯ್ದೆ 1990, 2024ರ ತಿದ್ದುಪಡಿ ಕಾಯ್ದೆ ಮತ್ತು 1992ರ ನಿಯಮದಂತೆ ಬೌದ್ಧ ಧರ್ಮಕ್ಕೆ ಮತಾಂತರಗೊಂಡ ಕರ್ನಾಟಕ ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಪರಿಶಿಷ್ಟ ಜಾತಿಗಳಿಗೆ ಸೇರಿದ ವ್ಯಕ್ತಿಗಳಿಗೆ ಪರಿಶಿಷ್ಟ ಜಾತಿ ಪ್ರಮಾಣಪತ್ರವನ್ನು ನೀಡಲು ಆಕ್ಟೋಬರ್ 6 ರಂದು ಹೊರಡಿಸಿದ ಆದೇಶದಲ್ಲಿ ಹೇಳಲಾಗಿದೆ.
ಬೌದ್ಧ ಧರ್ಮ ನಮೂದಿಸಲು ಅವಕಾಶ
ಪರಿಶಿಷ್ಟ ಜಾತಿ ಪ್ರಮಾಣಪತ್ರಗಳ ಅರ್ಜಿಗಳ ಧರ್ಮದ ಕಾಲಂನಲ್ಲಿ 'ಬೌದ್ಧ ಧರ್ಮ' ಎಂದು ನಮೂದಿಸಲು ಹೊಸ ಆದೇಶವು ಅವಕಾಶ ನೀಡುತ್ತದೆ. ಅಲ್ಲದೆ, ಅರ್ಜಿದಾರರು, ಪೋಷಕರು ತಾವು ಬಯಸಿದಲ್ಲಿ ಸರ್ಕಾರಿ ಶಾಲೆ, ಖಾಸಗಿ ಶಾಲೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧಿಕಾರ ವ್ಯಾಪ್ತಿಯಲ್ಲಿರುವ ಎಲ್ಲಾ ಇತರ ಶಿಕ್ಷಣ ಸಂಸ್ಥೆಗಳ ದಾಖಲೆಗಳಲ್ಲಿ ಧರ್ಮದ ಕಾಲಂನಲ್ಲಿ ಬೌದ್ಧ ಧರ್ಮವನ್ನು ನಮೂದಿಸಲು ಅವಕಾಶ ನೀಡುತ್ತದೆ. ಕರ್ನಾಟಕ ಸರ್ಕಾರದ ಎಲ್ಲಾ ಇಲಾಖೆಗಳು, ಮಂಡಳಿಗಳು ಮತ್ತು ನಿಗಮಗಳು, ಇತರ ಸಂಸ್ಥೆಗಳು ಆದೇಶದಂತೆ ಕಾರ್ಯ ನಿರ್ವಹಿಸುತ್ತವೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಕೇಂದ್ರ ಸರ್ಕಾರ 1990ರಲ್ಲಿ ಬರೆದಿದ್ದ ಪತ್ರದ ಆಧಾರದ ಮೇಲೆ ಬೌದ್ಧ ಧರ್ಮಕ್ಕೆ ಮತಾಂತರಗೊಂಡ ಪರಿಶಿಷ್ಟ ಜಾತಿಯವರಿಗೆ ಎಸ್ಸಿ ಪ್ರಮಾಣ ಪತ್ರ ನೀಡಲು ರಾಜ್ಯ ಸರ್ಕಾರ 2013 ರಲ್ಲಿ ಸುತ್ತೋಲೆ ಹೊರಡಿಸಿತ್ತು. 2016 ರಲ್ಲಿ ಬೌದ್ಧರಾಗುವ ಪರಿಶಿಷ್ಟ ಜಾತಿಯ ಜನರು ಎಸ್ಸಿ ಪ್ರಮಾಣಪತ್ರಗಳನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳುವಂತೆ ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಕೇಂದ್ರ ಸರ್ಕಾರ ಸೂಚಿಸಿತ್ತು. ಸುತ್ತೋಲೆ ಹೊರಡಿಸಿದ್ದರೂ ಈ ಕುರಿತು ಸ್ಪಷ್ಟನೆ ಹಾಗೂ ಸೂಕ್ತ ಆದೇಶ ಕೋರಿ ಹಲವು ಸಂಘಟನೆಗಳು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದವು ಎಂದು ಸಮಾಜ ಕಲ್ಯಾಣ ಇಲಾಖೆ ತಿಳಿಸಿದೆ. ಕರ್ನಾಟಕದಲ್ಲಿ ಮುಸ್ಲಿಮರು, ಕ್ರಿಶ್ಚಿಯನ್ನರು, ಸಿಖ್ಖರು, ಪಾರ್ಸಿಗಳು ಮತ್ತು ಜೈನರೊಂದಿಗೆ ಬೌದ್ಧರು ಧಾರ್ಮಿಕ ಅಲ್ಪಸಂಖ್ಯಾತರ ಪಟ್ಟಿಗೆ ಬರುತ್ತಾರೆ.
The Karnataka government has issued an order allowing Scheduled Caste (SC) members who convert to Buddhism to continue receiving SC caste certificates. The directive applies to individuals from the 101 Scheduled Castes listed under the Karnataka SC category, even after conversion.
14-01-26 01:34 pm
Bangalore Correspondent
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm