ಬ್ರೇಕಿಂಗ್ ನ್ಯೂಸ್
10-10-25 07:06 pm HK News Desk ಕರ್ನಾಟಕ
ಹಾಸನ, ಅ.10 : ಮುಂಬರುವ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್ಲ ಎಂದು ಬ್ರಹ್ಮಾಂಡ ಗುರೂಜಿ ಭಯಾನಕ ಭವಿಷ್ಯ ನುಡಿದಿದ್ದಾರೆ. ಹಾಸನದಲ್ಲಿ ಹಾಸನಾಂಬೆಯ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬ್ರಹ್ಮಾಂಡ ಗುರೂಜಿ, 'ಈ ವರ್ಷ ಹಾಸನಾಂಬೆಗೆ ಕೊನೆಯ ವರ್ಷವಾಗಿದ್ದು, ಮುಂದಿನ ವರ್ಷದಿಂದ ಅಮ್ಮನವರ ಸಾನಿಧ್ಯ ಇಲ್ಲಿ ಇರಲ್ಲ' ಎಂದು ಹೇಳಿದ್ದಾರೆ.
'ಹಾಸನಾಂಬೆ ದರ್ಶನಕ್ಕೆ ಮುಂದಿನ ದಿನಗಳಲ್ಲಿ ಅಡಚಣೆಯಾಗುವ ಸಾಧ್ಯತೆಯಿದೆ. 2025 ರಿಂದ 2032ರ ಅವಧಿಯಲ್ಲಿ ಸಿದ್ದೇಶ್ವರನ ಕೃಪೆಯಿಂದ ‘‘ಘಟಪ್ರಭ ಪರಿವರ್ತನೆ’’ ಆಗಲಿದೆ. ಈ ಸಮಯದಲ್ಲಿ ಏಳು ಜನ ಅಕ್ಕ-ತಂಗಿಯರು ಸೇರಲಿದ್ದಾರೆ. ಈ ಕೊನೆಯ ಅವಧಿಯಲ್ಲಿ ದರ್ಶನ ಪಡೆದವರು ಸಂತೋಷ ಪಡುತ್ತಾರೆ ಎಂದು ಬ್ರಹ್ಮಾಂಡ ಗುರೂಜಿ ಭವಿಷ್ಯ ನುಡಿದಿದ್ದಾರೆ.

'ಸಿದ್ದೇಶ್ವರನ ಕೃಪೆಯಿಂದ ಮುಂದಿನ ದಿನಗಳಲ್ಲಿ ಮಹತ್ವದ ಬದಲಾವಣೆಗಳು ನಡೆಯಲಿವೆ. ರೇವಣ ಸಿದ್ದೇಶ್ವರ, ಹಾಸನದ ಸಿದ್ದೇಶ್ವರ, ಜೇನುಕಲ್ ಸಿದ್ದೇಶ್ವರ ಸೇರಿದಂತೆ ವಿವಿಧ ಸಿದ್ದೇಶ್ವರರ ಶಿವನ ಶಕ್ತಿ ಒಂದು ಕಡೆ ಸೇರಲಿದೆ. ವಿಶೇಷವಾಗಿ 2025 ರಿಂದ 2032ರ ಅವಧಿಯಲ್ಲಿ ಈ ಬದಲಾವಣೆಗಳು ಘಟಿಸಲಿವೆ. ಸಿದ್ದೇಶ್ವರ ಸಾನಿಧ್ಯ ತೆಗೆದಾಗ, ಇಲ್ಲಿ ಸೇರಿರುವ ಏಳು ಜನ ಅಕ್ಕ-ತಂಗಿಯರು ಸೇರಿ ‘‘ಘಟಪ್ರಭ ಪರಿವರ್ತನೆ’’ ಎಂಬ ದೊಡ್ಡ ಬದಲಾವಣೆ ಆಗಲಿದೆ ಎಂದರು.
'ಜಗತ್ಪ್ರಸಿದ್ದ ಹಾಸನಾಂಬೆಯ ವೈಶಿಷ್ಟ್ಯತೆಯನ್ನು ಈ ಕೊನೆಯ ಅವಧಿಯಲ್ಲಿ ನಾವು ದರ್ಶನ ಮಾಡಿದೆವಲ್ಲ ಎಂದು ಸಂತೋಷ ಪಡುತ್ತೇವೆ. ಮುಂದಿನ ಅವಕಾಶಗಳು ನಮಗಲ್ಲ. ಯಾವ ಜನರಿಗೂ ಹಾಸನಾಂಬೆ ದರ್ಶನ ಆಗುವ ಅವಕಾಶಗಳು ಕಡಿಮೆ, ಅಡಚಣೆಗಳು ಎಷ್ಟು ಬರುತ್ತವೆ ಎಂಬುದನ್ನು ನೀವೇ ಮುಂದೆ ನೋಡುತ್ತೀರಿ' ಎಂದು ಬ್ರಹ್ಮಾಂಡ ಗುರೂಜಿ ಹೇಳಿದರು.
ಇದೇ ವೇಳೆ ಮಹಿಳೆಯರು ತಮ್ಮ ಖರ್ಚುಗಳನ್ನು ಕಡಿಮೆ ಮಾಡಿಕೊಳ್ಳುವಂತೆ ಸಲಹೆ ನೀಡಿದ ಬ್ರಹ್ಮಾಂಡ ಗುರೂಜಿ, ಜಗತ್ತಿಗೆ ಮತ್ತೊಂದು ಗಂಡಾಂತರ ಕಾದಿದೆ ಎಂದು ಭವಿಷ್ಯ ನುಡಿದರು. 'ಈ ವರ್ಷದಿಂದ ಮಹಿಳೆಯರು ತಮ್ಮ ಖರ್ಚುಗಳನ್ನು ಕಡಿಮೆ ಮಾಡಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಖರ್ಚುಗಳು ಹೆಚ್ಚಾಗುವ ಸಾಧ್ಯತೆಯಿದೆ ಎಂದರು.
Astrologer and spiritual seer Brahmanda Guruji has made a shocking prediction stating that the divine presence of Goddess Hasanamba will cease to exist in the coming years. Speaking to the media after seeking darshan at the Hasanamba Temple in Hassan, Guruji claimed that this year marks the last darshan of the goddess, as her presence will fade away from next year onward.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm