ಬ್ರೇಕಿಂಗ್ ನ್ಯೂಸ್
28-12-20 02:37 pm Headline Karnataka News Network ಕರ್ನಾಟಕ
ಬೆಳಗಾವಿ, ಡಿಸೆಂಬರ್ 28; ಬೆಳಗಾವಿ ಮಹಾನಗರ ಪಾಲಿಕೆ ಕಚೇರಿ ಎದುರು ಕನ್ನಡ ಧ್ವಜಸ್ತಂಭ ಇಡಲು ಪ್ರಯತ್ನ ನಡೆಸಲಾಗಿದೆ. ಕನ್ನಡ ಪರ ಸಂಘಟನೆಗಳ ಪ್ರಯತ್ನಕ್ಕೆ ಪೊಲೀಸರು ಅಡ್ಡಿ ಪಡಿಸಿದ್ದಾರೆ.
ಸೋಮವಾರ ಏಕಾಏಕಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಕನ್ನಡ ಧ್ವಜ ಇರುವ ಸ್ತಂಭವನ್ನು ಪಾಲಿಕೆ ಕಚೇರಿ ಮುಂದೆ ಸ್ಥಾಪನೆ ಮಾಡಲು ಪ್ರಯತ್ನ ನಡೆಸಿದರು. ಆಗ ಪೊಲೀಸರು ಹಾಗೂ ಕನ್ನಡಪರ ಸಂಘಟನೆ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು. ಮಹಾನಗರ ಪಾಲಿಕೆ ಎದುರು ಕನ್ನಡ ಧ್ವಜಸ್ತಂಭವನ್ನು ಕಾರ್ಯಕರ್ತರು ನಿಲ್ಲಿಸಿದರು.
ಇದರಿಂದಾಗಿ ಮಹಾನಗರ ಪಾಲಿಕೆ ಎದುರು ಹೈಡ್ರಾಮಾ ನಡೆಯಿತು. ಪೊಲೀಸರು ಮೊಳೆ, ಸುತ್ತಿಗೆಗಳನ್ನು ವಶಕ್ಕೆ ಪಡೆದುಕೊಂಡರು.

ಕನ್ನಡ ಹೋರಾಟಗಾರರು ಧ್ವಜಸ್ತಂಭ ಅಳವಡಿಸಿ ನಾಡಗೀತೆ ಹಾಡಿದರು. ಪೊಲೀಸರು ಅವರನ್ನು ಸ್ಥಳದಿಂದ ಕಳಿಸಲು ಪ್ರಯತ್ನ ನಡೆಸಿದರು. ಆಗ ವಾಗ್ವಾದ ಆರಂಭವಾಯಿತು. ಕ್ಷಣಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು.
ಇದೇ ಮೊದಲ ಬಾರಿಗೆ ಬೆಳಗಾವಿ ಮಹಾನಗರ ಪಾಲಿಕೆ ಎದುರು ಕನ್ನಡ ಧ್ವಜವನ್ನು ಹಾರಿಸಿ ಕನ್ನಡ ಪರ ಸಂಘಟನೆಗಳ ಸದಸ್ಯರು ಇತಿಹಾಸ ಬರೆದರು. ಪೊಲೀಸರು ಮತ್ತು ಹೋರಾಟಗಾರರ ನಡುವೆ ಜಟಾಪಟಿ ಮುಂದುವರೆದಿದೆ.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm