ಬ್ರೇಕಿಂಗ್ ನ್ಯೂಸ್
18-10-25 08:50 pm Bangalore Correspondent ಕರ್ನಾಟಕ
ಬೆಂಗಳೂರು, ಅ.18: ಮಡಿವಾಳದ ಗ್ರ್ಯಾಂಡ್ ಚಾಯ್ಸ್ ಲಾಡ್ಜ್ ನಲ್ಲಿ ಕಳೆದ 8 ದಿನಗಳಿಂದ ಪ್ರೇಯಸಿ ಜೊತೆ ತಂಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮೂಲದ ಯುವಕನೋರ್ವ ನಿಗೂಢ ರೀತಿ ಸಾವನ್ನಪ್ಪಿದ್ದಾನೆ. ಪುತ್ತೂರು ಮೂಲದ 20 ವರ್ಷದ ತಕ್ಷಿತ್ ಮೃತ ಯುವಕ.
ವಿರಾಜಪೇಟೆ ಮೂಲದ ರಕ್ಷಿತಾ ಎನ್ನುವ ಯುವತಿ ಜೊತೆ ಅ.9ರಿಂದ ಇವರು ಲಾಡ್ಜ್ನಲ್ಲಿ ರೂಂ ಮಾಡಿಕೊಂಡಿದ್ದರು. ಹೊಟೇಲ್ ರೂಮಿಗೆ ಸ್ವಿಗ್ಗಿ, ಜೊಮೆಟೋದಲ್ಲಿ ಊಟ ತರಿಸಿಕೊಂಡು ಸೇವಿಸುತ್ತಿದ್ದರು. ಅದು ಬಿಟ್ಟರೆ ಹೊರಗೆ ಹೋಗಿರಲಿಲ್ಲ. ಅ.17ರಂದು ಮಧ್ಯಾಹ್ನ ಯುವತಿ ಲಾಡ್ಜ್ ನಿಂದ ಹೊರ ಹೋಗಿದ್ದಳು. ರಾತ್ರಿಯಾದರೂ ಯುವಕ ಹೊರಗೆ ಬಾರದೇ ಇದ್ದುದರಿಂದ ಹೊಟೇಲ್ ಸಿಬಂದಿ ಬಾಗಿಲು ಬಡಿದಿದ್ದು ಓಪನ್ ಆಗದೇ ಇದ್ದಾಗ ಮಾಸ್ಟರ್ ಕೀ ಮೂಲಕ ಓಪನ್ ಮಾಡಿದ್ದಾರೆ.
ಆಗ ಯುವಕ ತಕ್ಷಿತ್ ಮಲಗಿದಲ್ಲೇ ಮೃತಪಟ್ಟಿರುವುದು ಕಂಡುಬಂದಿದ್ದು ಮಡಿವಾಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಯುಡಿಆರ್ ದಾಖಲಿಸಿದ್ದು ತನಿಖೆ ನಡೆಸುತ್ತಿದ್ದಾರೆ. ಎಂಟು ದಿನಗಳಿಂದ ಜೋಡಿ ಸ್ವಿಗ್ಗಿಯಲ್ಲಿ ಫುಡ್ ಆರ್ಡರ್ ಮಾಡಿ ಊಟ ತರಿಸಿ ತಿಂದಿದ್ದಾರೆ. ಆದರೆ ನಿನ್ನೆ ಊಟದ ನಂತರ ಇಬ್ಬರಿಗೂ ಫುಡ್ ಪಾಯ್ಸನ್ ಆಗಿ ಮೆಡಿಕಲ್ ನಿಂದ ಮಾತ್ರೆಗಳನ್ನು ತರಿಸಿ ತಿಂದಿದ್ದಾರಂತೆ.
ತಕ್ಷಿತ್ ಹಾಗೂ ಯುವತಿ ಮಂಗಳೂರಿನ ಕಾಲೇಜು ಒಂದರಲ್ಲಿ ವ್ಯಾಸಂಗ ಮಾಡಿದ್ದರು ಎನ್ನಲಾಗ್ತಿದೆ. ಮೈಸೂರಿನಲ್ಲಿ ಓದೋಕೆ ಹೋಗ್ತೀನಿ ಅಂತ ಹೇಳಿ ಯುವಕ, ಲವರ್ ಜೊತೆಗೆ ಬೆಂಗಳೂರಿಗೆ ಬಂದಿದ್ದಾನೆ ಎನ್ನಲಾಗುತ್ತಿದೆ. ಯುವಕ ದಿಢೀರ್ ಸಾವಿಗೀಡಾಗಿದ್ದು ಅನುಮಾನ ಮೂಡಿಸಿದೆ. ಹೊಟೇಲ್ ಸಿಸಿಟಿವಿ ಪಡೆದಿರುವ ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಮಲಗಿದಲ್ಲೇ ಸಾವನ್ನಪ್ಪಿದ್ದರಿಂದ ಹೃದಯಾಘಾತದಿಂದ ಸಾವು ಸಂಭವಿಸಿರುವ ಸಾಧ್ಯತೆಯೂ ಇದೆ. ಯುವಕ ಸಾವನ್ನಪ್ಪಿದ ಬಗ್ಗೆ ತಿಳಿದೇ ಯುವತಿ ರೂಮ್ ಬಿಟ್ಟು ಹೋಗಿದ್ದಾಳೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A 20-year-old youth from Puttur, identified as Takshith, was found dead under mysterious circumstances at Grand Choice Lodge in Bengaluru’s Madiwala area. He had reportedly been staying there for eight days with his girlfriend, Rakshitha from Virajpet (Kodagu).
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm