ಬ್ರೇಕಿಂಗ್ ನ್ಯೂಸ್
23-10-25 12:46 pm Bangalore Correspondent ಕರ್ನಾಟಕ
ಬೆಂಗಳೂರು, ಅ 24 : ಬೆಂಗಳೂರಿನ ಪಿಜಿಯೊಂದರಲ್ಲಿ ಆಂಧ್ರ ಮೂಲ ಯುವಕ ತಿಗಣೆ ಔಷಧಿ ದುರ್ವಾಸನೆಯಿಂದಾಗಿ ಮೃತಪಟ್ಟ ಶಂಕೆ ವ್ಯಕ್ತವಾಗಿದೆ. ಮಾಹಿತಿ ನೀಡದೆ ಔಷಧಿ ಸಿಂಪಡಿಸಿದ ಪಿಜಿ ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದಲೇ ಮಗ ಮೃತಪಟ್ಟಿದ್ದಾನೆ ಎಂದು ಪೋಷಕರು ಆರೋಪಿಸಿದ್ದು, ಎಚ್ಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಂಧ್ರಪ್ರದೇಶದ ತಿರುಪತಿ ಮೂಲದ ಪವನ್ ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ಅಶ್ವಥ್ ನಗರದಲ್ಲಿರುವ ಬಿಎಸ್ಆರ್ ಪಿಜಿಯಲ್ಲಿ ತಂಗಿದ್ದ. ಪಿಜಿಯಲ್ಲಿ ತಿಗಣೆ ಹೆಚ್ಚಾಗಿದ್ದ ಕಾರಣ ಔಷಧಿ ಸಿಂಪಡನೆ ಮಾಡಲಾಗಿತ್ತು. ಇದನ್ನು ಪಿಜಿ ವಾಸಿಗಳಿಗೆ ತಿಳಿಸದೆ ನಿರ್ಲಕ್ಷ್ಯಿಸಿದ್ದರಿಂದ ದುರಂತ ಸಂಭವಿಸಿದೆ ಎನ್ನಲಾಗುತ್ತಿದೆ. ಸದ್ಯ ಎಚ್ಎಎಲ್ ಪೊಲೀಸ್ ಠಾಣೆಯಲ್ಲಿ ಯುಡಿಆರ್ (ಅಸ್ವಾಭಾವಿಕ ಸಾವು) ಪ್ರಕರಣ ದಾಖಲಾಗಿದೆ.

ಪೋಷಕರ ಅಳಲು;
ಪ್ರಾಣ ಕಳ್ಕೊಳೋದಿಕ್ಕೆ ಆಂಧ್ರದಿಂದ ಬೆಂಗಳೂರಿಗೆ ಬರ್ಬೇಕಾಯಿತಾ? ಮಗನನ್ನು ಕೊಂದೇ ಬಿಟ್ಟರು ಎಂದು ಪೊಲೀಸ್ ಠಾಣೆ ಮುಂದೆ ಪೋಷಕರು ಗೋಳಾಡಿದ್ದಾರೆ. ಘಟನೆ ನಡೆದ ದಿನ ಮಗ ಬೆಳಿಗ್ಗೆ ಕರೆ ಮಾಡಿ, ಅಪ್ಪ ಉಸಿರಾಟಕ್ಕೆ ತೊಂದರೆಯಾಗುತ್ತಿದೆ ಎಂದು ಕೊನೆ ಬಾರಿ ಕರೆ ಮಾಡಿದ. ಅಲ್ಲಿಂದ ನಾವು ಎದ್ನೋ ಬಿದ್ನೋ ಎಂದು ಬರೋ ಹೊತ್ತಿಗೆ ಪ್ರಾಣ ಕಳೆದುಕೊಂಡಿದ್ದಾನೆ ಎಂದರು.
ಪವನ್ಗೆ ತಿಗಣೆ ಔಷಧಿ ಸಿಂಪಡಣೆಯಿಂದ ಉಸಿರಾಟದ ಸಮಸ್ಯೆಯಾಗಿದ್ದ ವೇಳೆ ಪಿಜಿಯಲ್ಲಿ ಯಾರು ಇರಲಿಲ್ಲ. ಹೀಗಾಗಿ ಅವನ ಸಹಾಯಕ್ಕೂ ಯಾರು ಬಂದಿಲ್ಲ ಎನ್ನಲಾಗಿದೆ. ತಕ್ಷಣವೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ, ಅಷ್ಟರಲ್ಲಾಗಲೇ ನಮ್ಮ ಮಗ ಪ್ರಾಣ ಬಿಟ್ಟಿದ್ದ. ಪಿಜಿ ಆಡಳಿತದ ಸಂಪೂರ್ಣ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದರು.
ಸರ್ಕಾರ ಏನು ನ್ಯಾಯ ಕೊಡುತ್ತೆ?
ಕರ್ನಾಟಕದಲ್ಲಿ ಬೆಂಗಳೂರಲ್ಲಿ ನನ್ನ ಮಗನನ್ನು ಸಾಯಿಸಿಬಿಟ್ಟಿದರು. ಪ್ರಾಣ ಕಳೆದುಕೊಳ್ಳು ನನ್ನ ಮಗ ಆಂಧ್ರದಿಂದ ಬೆಂಗಳೂರಿಗೆ ಬಂದನಾ. ಮಗ ಸತ್ತು ಇಷ್ಟು ದಿನವಾಯಿತು ಪಿಜಿ ಅವರು ನಮ್ಮ ಜೊತೆ ಮಾತನಾಡಿಲ್ಲ. ಮೀಡಿಯೇಟರ್ಗಳು ಬಂದು ಏನೇನೋ ಹೇಳಿ ಹೋಗುತ್ತಿದ್ದಾರೆ. ಕರ್ನಾಟಕ ಸರ್ಕಾರ ಏನು ಮಾಡುತ್ತೋ ಎನೋ ಮಾಡಲಿ. ಈ ಕರ್ನಾಟಕಸರ್ಕಾರ ನನಗೆ ಯಾವುದೇ ನ್ಯಾಯ ದಕ್ಕಿಸಿ ಕೊಡ್ತಿಲ್ಲ ಎಂದು ಪೊಲೀಸ್ ಠಾಣೆ ಮುಂದೆ ತೆಲುಗು ಭಾಷೆಯಲ್ಲಿ ಅಮ್ಮ ಮಾತಾನಾಡಿ ಜೋರಾಗಿ ಅತ್ತು, ಗೋಳಾಡಿದ್ದಾರೆ
A tragic incident occurred in a Bengaluru PG accommodation where a student from Andhra Pradesh reportedly died due to suffocation caused by pesticide fumes. The deceased, identified as Pavan from Tirupati, was staying at a BSR PG in Ashwath Nagar. The PG management had sprayed pesticides to control bedbugs but allegedly failed to inform the residents beforehand.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm