ಬ್ರೇಕಿಂಗ್ ನ್ಯೂಸ್
03-11-25 05:17 pm Bangalore Correspondent ಕರ್ನಾಟಕ
ಬೆಂಗಳೂರು, ನ.3 : ನಾಯಕತ್ವ ಬದಲಾವಣೆ ಕುರಿತ ಸದ್ದಿನ ನಡುವಲ್ಲೇ ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ನವದೆಹಲಿಗೆ ತೆರೆಳಿದ್ದು, ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ದೆಹಲಿಯಲ್ಲಿ ಮೂರು ದಿನ ತಂಗಲಿದ್ದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆಂದು ತಿಳಿದುಬಂದಿದೆ.
ಸತೀಶ್ ಜಾರಕಿಹೊಳಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಪ್ತರಾಗಿದ್ದು, ದೆಹಲಿ ಭೇಟಿ ವೇಳೆ ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಬೇಡಿಕೆ ಇಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಡಿಸಿಎಂ ಡಿಕೆ ಶಿವಕುಮಾರ್ ನವೆಂಬರ್ 11ರಂದು ದೆಹಲಿ ಭೇಟಿ ನೀಡಲಿದ್ದು, ಅದಕ್ಕೂ ಮೊದಲೇ ಸತೀಶ್ ದೆಹಲಿಗೆ ಭೇಟಿ ನೀಡಿ ಅಹವಾಲು ಮಂಡಿಸಲಿದ್ದಾರೆ.
ಹೈಕಮಾಂಡ್ ಕೆಪಿಸಿಸಿ ಹುದ್ದೆ ನೀಡಿದ್ದೇ ಆದರೆ, ಸತೀಶ್ ಅವರು ಸಚಿವ ಸ್ಥಾನ ತ್ಯಾಗ ಮಾಡಲು ಸಿದ್ಧರಿದ್ದಾರೆ ಎನ್ನಲಾಗುತ್ತಿದೆ. ಈಗಾಗಲೇ ಈ ಸಂದೇಶವನ್ನು ಖರ್ಗೆಯವರಿಗೆ ತಲುಪಿಸಿದ್ದಾರೆ. ನವೆಂಬರ್ 14ರಂದು ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶದ ನಂತರ ಸಿದ್ದರಾಮಯ್ಯ ದೆಹಲಿಗೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಸತೀಶ್ ಅವರ ಹೈಕಮಾಂಡ್ ನಾಯಕರೊಂದಿಗಿನ ಸಭೆ ಮಹತ್ವ ಪಡೆದುಕೊಂಡಿದೆ. ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರ ಸಂದೇಶವನ್ನು ಸತೀಶ್ ಹೈಕಮಾಂಡ್ಗೆ ತಿಳಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದೇ ವೇಳೆ, ಸತೀಶ್ ಜಾರಕಿಹೊಳಿಯವರ ದೆಹಲಿ ಭೇಟಿಯನ್ನು ರಾಜಕೀಯಗೊಳಿಸಬಾರದು. ರಾಜಕಾರಣಿಗಳು ಅನೇಕ ಕಾರ್ಯಕ್ರಮಗಳಿಗಾಗಿ ದೆಹಲಿಗೆ ಭೇಟಿ ನೀಡುತ್ತಾರೆ. ಅದರಲ್ಲಿ ವಿಶೇಷ ಇಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸಚಿವ ಪ್ರಿಯಾಂಕ ಖರ್ಗೆ ಪ್ರತಿಕ್ರಿಯಿಸಿ, "ಸಿದ್ದರಾಮಯ್ಯ ಮತ್ತು ಶಿವಕುಮಾರ್ ಮಾತುಗಳೇ ಅಂತಿಮ. ಹೈಕಮಾಂಡ್ ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳುತ್ತದೆ. ಶಿವಕುಮಾರ್ ಅವರು ಹೈಕಮಾಂಡ್ ಆದೇಶಕ್ಕಾಗಿ ಕಾಯುತ್ತಿರುವುದಾಗಿ ಮತ್ತು ಅದನ್ನು ಪಾಲಿಸುವುದಾಗಿಯೂ ಹೇಳಿದ್ದಾರೆ. ಹಲವಾರು ಜವಾಬ್ದಾರಿಗಳನ್ನು ನಿರ್ವಹಿಸುವ ಮೂಲಕ ಪಕ್ಷಕ್ಕೆ ಅವರು ಮಹತ್ವದ ಕೊಡುಗೆ ನೀಡಿದ್ದಾರೆ. ಏನು ಆಗಬೇಕೋ ಅದು ಸೂಕ್ತ ಸಮಯದಲ್ಲಿ ನಡೆಯುತ್ತದೆ ಎಂದು ತಿಳಿಸಿದ್ದಾರೆ.
In the midst of ongoing speculation about a possible leadership change in Karnataka, Minister Satish Jarkiholi made a sudden trip to New Delhi, creating a fresh wave of political curiosity. Sources say he is expected to stay in Delhi for three days and meet AICC President Mallikarjun Kharge to hold key discussions.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 07:17 pm
HK News Staffer
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm